ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ನ್ಯಾ. ಶಿಲ್ಪ

Date:

Advertisements

ಜಾಗತೀಕರಣ ಯುಗದಲ್ಲಿ ನಮ್ಮ ಜಾಗ್ರತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು ದುಡಿಮೆಗೆ ಹಚ್ಚದೆ ಅವರನ್ನು ಹಣತೆಯಂತೆ ಬಾಳಿ ಬೆಳಗಿಸಬೇಕಾಗಿದೆ. ಆ ನಿಟ್ಟಿನಲ್ಲಿ ಮಕ್ಕಳಿಗೆ ಒಳ್ಳೆಯ ಶಿಕ್ಷಣ ಕೊಡಿಸಿ ಅವರ ಜೀವನವನ್ನು ಸುಂದರಮಯವಾಗಿಸಬೇಕಿದ್ದು, ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾ. ಶಿಲ್ಪ ತಿಳಿಸಿದರು.

ಚಿಕ್ಕಬಳ್ಳಾಪುರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾರ್ಮಿಕ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ವಕೀಲರ ಸಂಘದ ಸಂಯುಕ್ತ ಆಶ್ರಯದೊಂದಿಗೆ ಬಾಪೂಜಿನಗರದಲ್ಲಿ ಕಾನೂನು ಅರಿವು-ನೆರವು ಹಾಗೂ ಜಾಗೃತಿ ಅಭಿಯಾನ ಕಾರ್ಯಕ್ರಮದಲ್ಲಿ ಗಿಡಕ್ಕೆ ನೀರು ಎರೆದು ಮಾತನಾಡಿದರು.

“18 ವರ್ಷದ ಒಳಗಿನ ಮಕ್ಕಳನ್ನು ದುಡಿಮೆಗೆ ದೂಡುವುದು ಅಪರಾಧ. ಇಂತಹ ಮಕ್ಕಳು ಎಲ್ಲಿಯಾದರೂ ಕೆಲಸ ಮಾಡುತ್ತಿದ್ದರೆ ಅದರ ಮಾಹಿತಿಯನ್ನು ಇಲಾಖೆಯ ಗಮನಕ್ಕೆ ತರಬೇಕು. ಬಾಲ ಕಾರ್ಮಿಕ ಪದ್ಧತಿ ಸಂಪೂರ್ಣ ನಿರ್ಮೂಲನೆ, ಪಾಲಕರ ಮತ್ತು ಪೋಷಕರ ಕೈಯಲ್ಲಿದೆ. ಪಾಲಕರು ಮೊದಲು ಬಾಲಕಾರ್ಮಿಕ ವಿರೋಧಿ ಪದ್ಧತಿ ಅರ್ಥ ಮಾಡಿಕೊಳ್ಳಬೇಕಾಗಿದೆ” ಎಂದರು.

Advertisements

ಪ್ಯಾನಲ್ ವಕೀಲ ಎಂ ಎಸ್ ಸಂದೀಪ್ ಚಕ್ರವರ್ತಿ ಮಾತಾಡಿ, “ಭಾರತದಲ್ಲಿ ಬಡತನ ಅನಕ್ಷರತೆಯಿಂದ ತಮ್ಮ ಜೀವನ ಸಾಗಿಸಲು ಅನಿವಾರ್ಯವಾಗಿ, ಪಾಲಕರು ತಮ್ಮ ಜತೆಗೆ ತಮ್ಮ ಮಕ್ಕಳನ್ನು ದುಡಿಮೆಗೆ ಕರೆದುಕೊಂಡು ಹೋಗುತ್ತಿದ್ದಾರೆ. ಪಾಲಕರೇ ಚಿಂತನೆ ಮಾಡಿ ಮಕ್ಕಳ ದುಡಿಮೆ ನಿಲ್ಲಿಸಬೇಕು” ಎಂದು ಹೇಳಿದರು.

“1986ರಲ್ಲಿ ಬಾಲಕಾರ್ಮಿಕ ವಿರೋಧಿ ಅಧಿನಿಯಮ ಜಾರಿಗೆ ಬಂದಿದ್ದು, ಇದರ ಪ್ರಕಾರ 14 ವರ್ಷದೊಳಗಿನ ಮಕ್ಕಳನ್ನು ಬಾಲ ಕಾರ್ಮಿಕರಾಗಿ ನೇಮಿಸಿಕೊಂಡ ಮಾಲೀಕರಿಗೆ ದಂಡ ಮತ್ತು ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದರು. ಜಿಲ್ಲೆಯಲ್ಲಿ ಬಾಲ ಕಾರ್ಮಿಕ ಪದ್ಧತಿ ಕಡಿಮೆಯಾಗಿದ್ದು ಇದೊಂದು ಸಮಾಧಾನಕರ ತಂದಿದೆ ಆದರೂ ಇನ್ನೂ ಅಲ್ಲಲ್ಲಿ ಬಾಲಕಾರನ್ನು ದುಡಿಸಿಕೊಳ್ಳುತ್ತಿರುವುದು ನಡೆಯುತ್ತಿದೆ ಇದು ಅಪರಾಧ ಎಂಬುದನ್ನ ಪ್ರತಿಯೊಬ್ಬರು ಅರಿಯಬೇಕು ಎಂದರು.

ಸಹಾಯಕ ಕಾನೂನು ಅಭಿರಕ್ಷಕ ಕೆ ಎನ್ ಶಿವಪ್ಪ ಮಾತನಾಡಿ, “ಬಾಲಕಾರ್ಮಿಕ ಪದ್ಧತಿ ಸಂಪೂರ್ಣ ನಿರ್ಮೂಲನೆಗೆ ಕೈಜೋಡಿಸಬೇಕು. ಕೊಳಗೇರಿ ಪ್ರದೇಶಗಳಲ್ಲಿ, ಕಾಲೋನಿಗಳಲ್ಲಿ ಹೆಚ್ಚೆಚ್ಚು ಜಾಗೃತಿ ಪಡೆಯುವ ಸಲುವಾಗಿ ಮಕ್ಕಳ ಗುಣಾತ್ಮಕ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಬೇಕು” ಎಂದರು.

ನಗರಸಭೆ ನಾಮನಿರ್ದೇಶನ ಸದಸ್ಯೆ ಅಣ್ಣಮ್ಮ ಶಿವಾನಂದ ಮಾತನಾಡಿ, “ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ಧತಿಯಿಂದ ಆಗಬಹುದಾದ ಅನಾಹುತಗಳ ಬಗ್ಗೆ ನಾವು ಮೊದಲು ಅರಿಯಬೇಕು. ಮಕ್ಕಳ ಮೇಲೆ ಉಂಟಾಗುವ ದುಷ್ಪರಿಣಾಮಗಳ ಕುರಿತು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಈ ಕೇರಿಗಳಲ್ಲಿ ಇಂತಹ ಅನಿಷ್ಟ ಪದ್ದತಿಯನ್ನು ದೂರ ಮಾಡುವ ಸಲುವಾಗಿ ಇಂತಹ ಕಾನೂನು ಅರಿವು ನೆರವು ಕಾರ್ಯಕ್ರಮ ಹಮ್ಮಿಕೊಂಡಿರುವುದು ನಿಜಕ್ಕೂ ಸಂತಸ ತಂದಿದೆ” ಎಂದು ಶ್ಲಾಘಿಸಿದರು.

ಈ ಸುದ್ದಿ ಓದಿದ್ದೀರಾ? ಅರಸೀಕೆರೆ l ನಗರಸಭಾ ಅಧ್ಯಕ್ಷ, ಉಪಾಧ್ಯಕ್ಷರ ಉತ್ತಮ ಅಭಿವೃದ್ಧಿ ಕೆಲಸ; ನಗರಸಭಾ ಸದಸ್ಯರಿಂದ ಸನ್ಮಾನ

ಕಾರ್ಮಿಕ ನಿರೀಕ್ಷದ ಎಂ. ಮಂಜುಳಾ ಮಾತನಾಡಿ, “ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ(ನಿಷೇಧ ಮತ್ತು ನಿಯಂತ್ರಣ) ತಿದ್ದುಪಡಿ ಕಾಯ್ದೆ 2016ರಂತೆ 14 ವರ್ಷದೊಳಗಿನ ಮಕ್ಕಳ ದುಡಿಮೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. 15ರಿಂದ 18 ವರ್ಷದೊಳಗಿನ ಮಕ್ಕಳನ್ನು ಅಪಾಯಕಾರಿ ಕ್ಷೇತ್ರದಲ್ಲಿ ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ. ಒಂದು ವೇಳೆ ಮಕ್ಕಳಿಂದ ದುಡಿಸಿಕೊಂಡಲ್ಲಿ ₹50,000 ದಂಡ ಹಾಗೂ 2 ವರ್ಷ ಜೈಲು ಶಿಕ್ಷೆ ವಿಧಿಸಲಾಗುತ್ತದೆ. ವಾಹನಗಳಲ್ಲಿ ಮಕ್ಕಳನ್ನು ಕೃಷಿ ಚಟುವಟಿಕೆಗಳಿಗಾಗಿ ಅಕ್ರಮ ಮತ್ತು ಕಾನೂನು ಬಾಹಿರವಾಗಿ ಸಾಗಾಣಿಕೆ ಮಾಡುವುದು ಶಿಕ್ಷಾರ್ಹ ಅಪರಾಧವಾಗಿರುತ್ತದೆ. ಇದರ ಬಗ್ಗೆ ಪ್ರತಿಯೊಬ್ಬರೂ ಜಾಗೃತಿ ಮೂಡಿಸಿಕೊಳ್ಳಬೇಕು” ಎಂದರು.

ಈ ಸಂದರ್ಭದಲ್ಲಿ ವಕೀಲರುಗಳಾದ ವಂದನ, ಸರಳ, ನಜೀಮ ತಬಸ್ಸುಮ್, ನರಸಿಂಹಮೂರ್ತಿ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಯೋಜನಾ ನಿರ್ದೇಶಕ ರಮೇಶ್ ಸೇರಿದಂತೆ ಬಾಪೂಜಿನಗರದ ಪೋಷಕರು ಹಾಗೂ ಇತರ ಪ್ರಮುಖರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಪ್ರಕರಣ | ಎಸ್‌ಐಟಿಯನ್ನು ಸರ್ಕಾರ ರಚಿಸಿದ್ದು ಸತ್ಯ ಹೊರತರಲು : ಗೃಹ ಸಚಿವ ಪರಮೇಶ್ವರ್

"ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂತಿದ್ದೇನೆ ಎಂದಿದ್ದ ವ್ಯಕ್ತಿಯನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ....

ಬೀದರ್‌ | ಈ ತಾಂಡಾಕ್ಕೆ ದಾರಿ ಯಾವುದಯ್ಯಾ?

ʼನಾವು ಹುಟ್ಟಿನಿಂದ ಅಲ್ಲ, ಈ ತಾಂಡಾ ಹುಟ್ಟಿನಿಂದಲೂ ರಸ್ತೆಯೇ ಕಂಡಿಲ್ಲ. ಸ್ವಲ್ಪ...

ಹಾಸನ | ಉತ್ತಮ ವಿದ್ಯಾಭ್ಯಾಸ ಇದ್ದರೆ ಆರ್ಥಿಕ ಸ್ವಾವಲಂಬನೆ ಸಾಧ್ಯ: ಡಿಸಿ ಲತಾ ಕುಮಾರಿ

ಪ್ರತಿಯೊಂದು ಮಗುವೂ ಉತ್ತಮ ವಿದ್ಯಾಭ್ಯಾಸ ಪಡೆದು ಮುಂದಿನ ಭವಿಷ್ಯ ರೂಪಿಸಿಕೊಳ್ಳುವ ಮೂಲಕ...

ಬಾಗಲಕೋಟೆ | ಹಲವು ಬೇಡಿಕೆ ಈಡೇರಿಸುವಂತೆ ರೈತರ ಪ್ರತಿಭಟನೆ

ಬೆಳೆನಷ್ಟ ಪರಿಹಾರ ಒದಗಿಸುವುದು, ಬೆಳೆವಿಮೆ ಕಂತು ತುಂಬುವ ಅವಧಿಯನ್ನು ಮುಂದುವರೆಸಬೇಕು. ಬೆಳೆವಿಮೆ...

Download Eedina App Android / iOS

X