ಕೊಪ್ಪಳ ನಗರದಲ್ಲಿ ಹೆಚ್ಚಿದ ಬೀದಿನಾಯಿಗಳ ಹಾವಳಿ: ಸೂಕ್ತ ಕ್ರಮಕ್ಕೆ ಎಸ್‌ಡಿಪಿಐ ಆಗ್ರಹ

Date:

Advertisements

ಕೊಪ್ಪಳ ನಗರದ ಬೀದಿಗಳಲ್ಲಿ ನಾಯಿಗಳ ಹಾವಳಿ ಜಾಸ್ತಿಯಾಗಿದ್ದು, ಈ ಕುರಿತು ಹಲವಾರು ಬಾರಿ ಫೋನ್ ಕರೆ ಮೂಲಕ ಮತ್ತು ಅರ್ಜಿ ಮುಖಾಂತರ ದೂರು ನೀಡಿ ನಗರಸಭೆ ಅಧಿಕಾರಿಗಳ ಗಮನಕ್ಕೆ ತಂದರೂ ಕೂಡ ಯಾವುದೇ ಪ್ರಯೋಜನವಾಗಿಲ್ಲ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(ಎಸ್‌ಡಿಪಿಐ) ಕಾರ್ಯಕರ್ತರು ನಗರಸಭೆ ಚೀಫ್‌ ಆಫೀಸರ್‌ಗೆ‌ ಮನವಿ ಸಲ್ಲಿಸಿದರು.

“ನಗರದಲ್ಲಿ ಬೀದಿ ನಾಯಿಗಳು ಆಟವಾಡುವ ಮಕ್ಕಳಿಗೆ ಕಚ್ಚಿ ಗಾಯಗೊಳಿಸಿರುವ ಬಹಳಷ್ಟು ಘಟನರಗಳಿವೆ. ಈ ಕುರಿತು ಹಲವು ಬಾರಿ ಬೀದಿ ನಾಯಿಗಳ ಹಾವಳಿ ತಡೆಗಟ್ಟಲು ಮನವಿ ಸಲ್ಲಿಸಿದರೂ ನಗರಸಭೆ ನಾಯಿಗಳ ದಾಳ ತಪ್ಪಿಸಲು ಕ್ರಮ ಜರುಗಿಸಿಲ್ಲ” ಎಂದು ಆರೋಪಿಸಿದರು.

“ಶಾಲೆಗೆ ಹೊಗುವಂತಹ ಹಾಗೂ ಓಣಿಯಲ್ಲಿ ಆಡುವಂತಹ ಪುಟ್ಟ ಮಕ್ಕಳ ಮೇಲೆ ನಾಯಿ ಕಡಿಯುತ್ತಿರುವ ಘಟನೆಗಳು ದಿನೇ ದಿನೆ ವರದಿಯಾಗುತ್ತಲೇ ಇವೆ. ಆದಷ್ಟು ಬೇಗ ಈ ಸಮಸ್ಯೆಯನ್ನು ಬಗೆಹರಿಸಬೆಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಎಸ್‌ಡಿಪಿಐ ಸಾರ್ವಜನಿಕರಿಗೆ ಕರೆ ಕೊಡುವುದರ ಮೂಲಕ ನಗರಸಭೆ ಕಾರ್ಯಲಯದ ಎದುರು ಬೃಹತ್ ಪ್ರತಿಭಟನೆ ಮಾಡಲಾಗುತ್ತದೆ” ಎಂದು ಎಚ್ಚರಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಹಾಸನ | ವಿಫಲಗೊಂಡ ಬಾವಿಗಳ ಮುಚ್ಚಲು ಕ್ರಮವಹಿಸಿ: ಡಿಸಿ ಲತಾ ಕುಮಾರಿ

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕೊಪ್ಪಳ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಸೈ ಸಲೀಮ್ ಖಾದ್ರಿ, ಉಪಾಧ್ಯಕ್ಷ ಫಾರೂಕ್ ಅತ್ತಾರ, ತಾಲೂಕು ಸಮಿತಿಯ ಸದಸ್ಯ ರಿಜ್ವಾನ್ ಪೀರ್ಜಾದೆ, ಗೆಸು, ಭಾಷಾ ಗಂಗಾವತಿ, ಶಾರುಖ್ ಖಾನ್ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಪ್ರಗತಿಪರ ರೈತ ತುರಾಂಡಹಳ್ಳಿ ರವಿ ತೋಟಕ್ಕೆ ಅಂತಾರಾಷ್ಟ್ರೀಯ ಅಧಿಕಾರಿಗಳು ಭೇಟಿ

ಕೋಲಾರ ತಾಲೂಕಿನ ತುರಾಂಡಹಳ್ಳಿ ಗ್ರಾಮದ ಪ್ರಗತಿಪರ ರೈತ ಟಿ.ಎನ್ ರವಿ ಅವರ...

ಹಾವೇರಿ | ಬೇಡ್ತಿ-ವರದಾ ನದಿ ಜೋಡಣೆಗೆ ಕೇಂದ್ರ ತಾತ್ವಿಕ ಒಪ್ಪಿಗೆ: ಸಂಸದ ಬಸವರಾಜ ಬೊಮ್ಮಾಯಿ

"ಬೇಡ್ತಿ- ವರದಾ ನದಿ ಜೋಡಣೆ ವಿಚಾರದಲ್ಲಿ ಕೇಂದ್ರ ಸರ್ಕಾರ ತಾತ್ವಿಕ ಒಪ್ಪಿಗೆ...

ಹಾವೇರಿ | ನಿರಂತರ ಮಳೆಯಿಂದ ಬೆಳ್ಳುಳ್ಳಿ ಬೆಳೆ ಹಾನಿ: ಸರ್ಕಾರದ ನೆರವಿನ ನಿರೀಕ್ಷೆಯಲ್ಲಿ‌ ಸಂತ್ರಸ್ತ ರೈತರು

ಹಲವು ದಿನಗಳಿಂದ ನಿರಂತರ ಮಳೆ ಸುರಿಯುತ್ತಿರುವುದರಿಂದ ಬೆಳ್ಳುಳ್ಳಿ ಬೆಳೆದ ರೈತನ ಬದುಕು...

ವಿಜಯಪುರ | ಹೆಣ್ಣನ್ನು ಪೂಜಿಸುವ ನಾಡಿನಲ್ಲಿ ಮಹಿಳೆಯರ ಸುರಕ್ಷತೆ ಬಹುದೊಡ್ಡ ಪ್ರಶ್ನೆಯಾಗಿದೆ: ಪ್ರೊ. ವಿಜಯಾ ಬಿ ಕೋರಿಶೆಟ್ಟಿ

ಸ್ತ್ರೀಯರನ್ನು ದೇವಿಯೆಂದು ಪೂಜಿಸುವ ನಾಡಿನಲ್ಲಿ ಮಹಿಳೆಯರ ಮೇಲೆ ಪ್ರತಿದಿನವೂ ದೌರ್ಜನ್ಯ ನಡೆಯುತ್ತಿರುವುದು...

Download Eedina App Android / iOS

X