ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ ಬಗ್ಗೆ ಕಳವಳ ವ್ಯಕ್ತಪಡಿಸಿದ ನೊಬೆಲ್ ಪ್ರಶಸ್ತಿ ವಿಜೇತ ಅಮರ್ತ್ಯ ಸೇನ್

Date:

Advertisements

ಬಿಹಾರದಲ್ಲಿ ನಡೆದ ಮತದಾರರ ಪಟ್ಟಿ ಪರಿಷ್ಕರಣೆ(SIR) ಬಗ್ಗೆ ನೊಬೆಲ್ ಪ್ರಶಸ್ತಿ ವಿಜೇತ ಅಮರ್ತ್ಯ ಸೇನ್ ಕಳವಳ ವ್ಯಕ್ತಪಡಿಸಿದ್ದಾರೆ. “ಸೂಕ್ಷ್ಮತೆ ಇಲ್ಲದಿದ್ದರೆ, ಈ ಪ್ರಕ್ರಿಯೆಯಿಂದಾಗಿ ಬಡವರು ಮತ್ತು ಬಡತನದ ಅಂಚಿನಲ್ಲಿರುವ ದೊಡ್ಡ ವರ್ಗದ ಜನರನ್ನು ಮತದಾನ ಮಾಡುವ ಹಕ್ಕಿನಿಂದ ವಂಚಿತರಾಗಬಹುದು” ಎಂದು ಎಚ್ಚರಿಸಿದ್ದಾರೆ. ಹಾಗೆಯೇ ಚುನಾವಣಾ ಆಯೋಗ ನೀಡಲು ತಿಳಿಸಿರುವ ದಾಖಲೆಗಳ ಬಗ್ಗೆ, “ಈ ಅಧಿಕಾರಶಾಹಿ ಪ್ರಕ್ರಿಯೆಯ ನ್ಯಾಯಸಮ್ಮತತೆಯನ್ನು” ಪ್ರಶ್ನಿಸಿದ್ದಾರೆ.

“ಕಾಲಕಾಲಕ್ಕೆ ವಿವಿಧ ಕಾರ್ಯವಿಧಾನದ ಕಾರ್ಯಗಳನ್ನು ಕೈಗೊಳ್ಳಬೇಕಾಗುತ್ತದೆ ಎಂಬುದು ನಿಜ, ಪರಿಶೀಲನೆಯ ಅಗತ್ಯವಿದೆ. ಆದರೆ ಅದಕ್ಕಾಗಿ ಮೂಲಭೂತ ಹಕ್ಕುಗಳಿಗೆ ತೊಂದರೆಯಾಗಬಾರದು. ಬಡವರ ಹಕ್ಕುಗಳನ್ನು ತುಳಿಯುವ ಮೂಲಕ ‘ಉತ್ತಮ ವ್ಯವಸ್ಥೆ’ಯನ್ನು ರಚಿಸಲು ಸಾಧ್ಯವಿಲ್ಲ” ಎಂದೂ ಹೇಳಿದರು.

ಇದನ್ನು ಓದಿದ್ದೀರಾ? ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ: 64 ಲಕ್ಷಕ್ಕೂ ಅಧಿಕ ಮತದಾರರ ಹೆಸರು ‘ಡಿಲೀಟ್’

Advertisements

“ಹಲವರ ಬಳಿ ದಾಖಲೆಗಳಿಲ್ಲ ಆದ್ದರಿಂದಾಗಿ ಹಲವರಿಗೆ ಮತ ಚಲಾಯಿಸಲು ಸಾಧ್ಯವಿಲ್ಲ. ಕೆಲವು ಸುಧಾರಣೆಗಾಗಿ ಗಂಭೀರ ತಪ್ಪನ್ನು ಒಪ್ಪಲಾಗದು. ಒಂದನ್ನು ಸರಿಪಡಿಸಲು ಏಳು ಹೊಸ ತಪ್ಪುಗಳನ್ನು ಸಮರ್ಥಿಸಲು ಸಾಧ್ಯವಿಲ್ಲ” ಎಂದು ತಿಳಿಸಿದರು.

ಈ ನಡುವೆ ಮತದಾರರು ಆಧಾರ್ ಕಾರ್ಡ್ ಅಥವಾ ಇತರ ಯಾವುದೇ 11 ಸ್ವೀಕಾರಾರ್ಹ ದಾಖಲೆಗಳೊಂದಿಗೆ ಸಲ್ಲಿಸುವ ಅರ್ಜಿಗಳನ್ನು ಸ್ವೀಕರಿಸುವಂತೆ ಚುನಾವಣಾ ಆಯೋಗಕ್ಕೆ ಶುಕ್ರವಾರ ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ. ಹಾಗೆಯೇ ಅರ್ಜಿ ಸಲ್ಲಿಸಲು ಮತದಾರರಿಗೆ ಸಹಾಯ ಮಾಡುವಂತೆ ಎಲ್ಲಾ ರಾಜಕೀಯ ಪಕ್ಷಗಳು ತಮ್ಮ ಕಾರ್ಯಕರ್ತರುಗಳಿಗೆ ನಿರ್ದೆಶನವನ್ನು ನೀಡಬೇಕು ಎಂದೂ ಕೋರ್ಟ್ ಹೇಳಿದೆ. ಮುಂದಿನ ವಿಚಾರಣೆ ಸೆಪ್ಟೆಂಬರ್ 8 ರಂದು ನಡೆಯಲಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರಾವಳಿಯಲ್ಲಿ ಉದ್ಯೋಗ ಸೃಷ್ಟಿ, ಪ್ರವಾಸೋದ್ಯಮ ಬೆಳವಣಿಗೆಗೆ ಪ್ರತ್ಯೇಕ ನೀತಿ: ಡಿಸಿಎಂ ಡಿ ಕೆ ಶಿವಕುಮಾರ್

"ಕರಾವಳಿ ಭಾಗದಲ್ಲಿ ಉದ್ಯೋಗ ಸೃಷ್ಟಿಗೆ ಹಾಗೂ ಪ್ರವಾಸೋದ್ಯಮ ಬೆಳವಣಿಗೆಗೆ ಪ್ರತ್ಯೇಕ ನೀತಿ...

ಹಿಂದೂ ಧರ್ಮ ಪ್ರಚಾರಕ ಪ್ರೇಮಾನಂದರಿಗೆ ತನ್ನ ಕಿಡ್ನಿ ದಾನ ಮಾಡಲು ಮುಂದಾದ ಮುಸ್ಲಿಂ ಯುವಕ

ಮಧ್ಯಪ್ರದೇಶದ ನರ್ಮದಾಪುರಂ ಜಿಲ್ಲೆಯ 26 ವರ್ಷದ ಮುಸ್ಲಿಂ ಯುವಕನೊಬ್ಬ ತನ್ನ ಒಂದು...

ಚಿತ್ರದುರ್ಗ | ಚಳ್ಳಕೆರೆ ನಗರದಲ್ಲಿ ರಸ್ತೆ ಗುಂಡಿಗಳ ಪೂಜೆ; ಕರ್ನಾಟಕ ರಾಷ್ಟ್ರ ಸಮಿತಿಯಿಂದ ವಿನೂತನ ಪ್ರತಿಭಟನೆ

ಚಳ್ಳಕೆರೆ ನಗರದ ಬಹುತೇಕ ವಾರ್ಡುಗಳಲ್ಲಿ ಹಾಗೂ ಮುಖ್ಯ ರಸ್ತೆಗಳಲ್ಲಿ, ಅಲ್ಲದೆ ತಾಲೂಕಿನ...

ವಿಧಾನಸಭೆಯ ಮುಂಗಾರು ಅಧಿವೇಶನ ಮುಕ್ತಾಯ: ಒಟ್ಟು 39 ವಿಧೇಯಕ ಅಂಗೀಕಾರ

ಕಳೆದ ಆಗಸ್ಟ್ 11ರಿಂದ ಆರಂಭಗೊಂಡಿದ್ದ 16ನೇ ವಿಧಾನಸಭೆಯ ಮುಂಗಾರು ಅಧಿವೇಶನವು ಇಂದು(ಆ.22)...

Download Eedina App Android / iOS

X