ಧಾರವಾಡ | ಹೆಬ್ಬಳ್ಳಿ ಗ್ರಾಮದಲ್ಲಿ 91 ಪಿಓಪಿ ಗಣೇಶ ವಿಗ್ರಹಗಳ ವಶಕ್ಕೆ ಪಡೆದ ತಪಾಸಣೆ ತಂಡ

Date:

Advertisements

ತಾಲೂಕಿನ ಹೆಬ್ಬಳ್ಳಿಯಲ್ಲಿ 91 ಪಿಓಪಿ ಗಣಪತಿಗಳನ್ನು ಜಿಲ್ಲಾಧಿಕಾರಿ ಆದೇಶದಂತೆ ರಚಿಸಿದ ಕಾರ್ಯ ಪಡೆಯ ಸದಸ್ಯರಾದ ಪರಿಸರ ಇಲಾಖೆಯ ಪ್ರಾದೇಶಿಕ ಅಧಿಕಾರಿ ಜಗದೀಶ್ ಐ.ಎಚ್. ಹಾಗೂ ತಾಲೂಕಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಗಂಗಾಧರ್ ಕಂದಕೂರ ತಪಾಸಣೆ ಮಾಡಿ, ವಶಪಡಿಸಿಕೊಂಡು ವಿಗ್ರಹಗಳನ್ನು ಗ್ರಾಮ ಪಂಚಾಯಿತಿಯ ವಶಕ್ಕೆ ನೀಡಿದರು.

ಗ್ರಾಮದ ಶಂಕರ ಕಂಬಾರ, ಬಸವರಾಜ ಗೂಳಪ್ಪ ಕಮ್ಮಾರ, ಬಸವರಾಜ ವಿರೂಪಾಕ್ಷಪ್ಪ ಕಮ್ಮಾರ, ಕರಿಯಪ್ಪ ಕಮ್ಮಾರ ಮನೆ ಮತ್ತು ದಾಸ್ತಾನದಲ್ಲಿರುವ ಒಟ್ಟು 91 ಪಿಓಪಿ ಗಣೇಶ ಮೂರ್ತಿ ಎಂದು ಹೇಳಲಾಗಿದೆ.

ಈ ಸಂದರ್ಭದಲ್ಲಿ ಅಮ್ಮಿನಭಾವಿ ವಲಯದ ಕಂದಾಯ ನಿರೀಕ್ಷಕ ಸಂಪತಕುಮಾರ ಒಡೆಯರ್ ಮತ್ತು ಗ್ರಾಮ ಆಡಳಿತ ಅಧಿಕಾರಿ ರಾಮಚಂದ್ರ ನಾಯಕ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಸವರಾಜ ಮದನಬಾವಿ, ಹೆಬ್ಬಳ್ಳಿ ಗ್ರಾಮ ಪಂಚಾಯತಿ ಕಾರ್ಯದರ್ಶಿ ಜಿ.ಎಸ್ ಬಡಿಗೇರ ಮತ್ತು ಪೊಲೀಸ್ ಇಲಾಖೆಯ ಇ.ಎಸ್.ಐ ಮಂಜುನಾಥ ತಡಹಾಳ ಹಾಗೂ ತಂಡದವರಿದ್ದರು.

Advertisements
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹುಬ್ಬಳ್ಳಿ | ಕುರುಬ ಸಮಾಜದ ಕುಲಶಾಸ್ತ್ರ ಅಧ್ಯಯನವನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಲು ಒತ್ತಾಯ

ರಾಜ್ಯ ಸರ್ಕಾರ ಪಶುಪಾಲಕರ ಹಾಗೂ ಕುರಿಗಾರರ ದೌರ್ಜನ್ಯ ಕಾಯ್ದೆ ಜಾರಿಗೆ ತಂದಿರುವ...

ಧಾರವಾಡ | ಡಿಮ್ಹಾನ್ಸ್ ಸಂಸ್ಥೆಯ ಟೆಲಿ-ಮನಸ್ ವಿಭಾಗದ ಸಿಬ್ಬಂದಿಗಳಿಗೆ ತರಬೇತಿ ಕಾರ್ಯಾಗಾರ

ಬೆಂಗಳೂರು ನಿಮ್ಹಾನ್ಸ್ ಟೆಲಿ-ಮನಸ್ ಅಪೆಕ್ಸ್ ತಂಡದಿಂದ ಧಾರವಾಡ ಡಿಮ್ಹಾನ್ಸ್ ಸಂಸ್ಥೆಯ ಟೆಲಿ-ಮನಸ್...

ಕಲಬುರಗಿ | ಶಾಲಾ ಮೇಲ್ಚಾವಣಿ ಕುಸಿದು ಮೂವರು ವಿದ್ಯಾರ್ಥಿಗಳಿಗೆ ಗಾಯ; ಗ್ರಾಮಸ್ಥರಿಂದ ಪ್ರತಿಭಟನೆ

ಸೇಡಂ ತಾಲ್ಲೂಕಿನ ಮಲ್ಕಾಪಲ್ಲಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೇಲ್ಚಾವಣಿ...

Download Eedina App Android / iOS

X