ಗಣೇಶನ ಹಬ್ಬದಲ್ಲಿ ಡಿ.ಜೆ ಬಳಕೆಗೆ ಬದಲಾಗಿ ಜನಪದ ಗಾಯನ, ನೃತ್ಯ, ಡೊಳ್ಳು ಕುಣಿತ ಪ್ರಸ್ತುತಿಗೆ ಗಮನಹರಿಸಬೇಕು ಎಂದು ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಹೇಳಿದರು.
ದುರ್ಗಾದೇವಿ ದೇವಸ್ಥಾನದಲ್ಲಿ ನಡೆದ ಚೌತಿ ಹಾಗೂ ಈದ-ಮಿಲಾದ್ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಡಿ.ಜೆ ಶಬ್ಧವು ವೃದ್ದರು, ರೋಗಿಗಳಿಗೆ ಕಿರಿಕಿರಿ ಉಂಟುಮಾಡುತ್ತದೆ. ಡಿ.ಜೆ ಸೌಂಡ್ ಸಿಸ್ಟಂ ಬಳಕೆಯನ್ನು ಕೋರ್ಟ್ ನಿಷೇಧಿಸಿದೆ. ಹೀಗಾಗಿ ಹಬ್ಬವನ್ನು ಶಾಂತಿಯುತವಾಗಿ ಆಚರಿಸಬೇಕು ಎಂದರು.
ಇದನ್ನೂ ಓದಿರಿ ಧಾರವಾಡ | ಹೆಬ್ಬಳ್ಳಿ ಗ್ರಾಮದಲ್ಲಿ 91 ಪಿಓಪಿ ಗಣೇಶ ವಿಗ್ರಹಗಳ ವಶಕ್ಕೆ ಪಡೆದ ತಪಾಸಣೆ ತಂಡ
ಗಣೇಶ ಮೂರ್ತಿ ಪ್ರತಿಷ್ಠಾಪನೆ ಸ್ಥಳ ಹಾಗೂ ಮೆರವಣಿಗೆಯ ಮಾರ್ಗವನ್ನು ಪೊಲೀಸ್ ಠಾಣೆಗೆ ತಿಳಿಸಬೇಕು. ಸಾರ್ವಜನಿಕರು ಹಾಗೂ ವಾಹನ ಸಂಚಾರಕ್ಕೆ ಅಡಚಣೆ ಆಗದಂತೆ ನಿಗಾ ವಹಿಸಬೇಕು ಎಂದು ತಿಳಿಸಿದರು