ಕಛ್ ಜಿಲ್ಲೆಯ ಭಾರತ-ಪಾಕಿಸ್ತಾನ ಗಡಿ ಬಳಿ 15 ಮಂದಿ ಪಾಕಿಸ್ತಾನಿ ಮೀನುಗಾರರನ್ನು ಸೆರೆ ಹಿಡಿದಿರುವ ಗಡಿ ಭದ್ರತಾ ಪಡೆ, ಅವರಿಂದ ಒಂದು ಯಾಂತ್ರಿಕ ನಾಡದೋಣಿಯನ್ನು ವಶಪಡಿಸಿಕೊಂಡಿದೆ ಎಂದು ಭಾನುವಾರ ಗಡಿ ಭದ್ರತಾ ಪಡೆ ತಿಳಿಸಿದೆ.
ಗುಜರಾತ್ ರಾಜ್ಯದ ಕಛ್ ಪ್ರಾಂತ್ಯದಲ್ಲಿನ ಕೋರಿ ಕ್ರೀಕ್ ಬಳಿಯ ಗಡಿ ಹೊರಠಾಣೆ ಬಳಿಯ ಸಾಮಾನ್ಯ ಪ್ರದೇಶದಲ್ಲಿ ಅಪರಿಚಿತ ದೋಣಿಯೊಂದು ಪತ್ತೆಯಾಗಿದೆ ಎಂಬ ನಿಖರ ಮಾಹಿತಿಯನ್ನು ಆಧರಿಸಿ, ಗಡಿ ಭದ್ರತಾ ಪಡೆಯು ಶನಿವಾರ ಶೋಧ ಕಾರ್ಯಾಚರಣೆಗೆ ಚಾಲನೆ ನೀಡಿತ್ತು.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಅಲೆಮಾರಿ ಸಮುದಾಯಗಳಿಗೆ ಅನ್ಯಾಯ – ಜಾತಿಗಣತಿಯ ಮೇಲೂ ಕರಿನೆರಳು: ರಾಹುಲ್ ಗಾಂಧಿ ಗಮನಿಸುವರೇ?
“ಅಕ್ಕಪಕ್ಕದ ತೀರಗಳಲ್ಲಿ ವ್ಯಾಪಕ ಶೋಧ ಕಾರ್ಯಾಚರಣೆ ನಡೆಸಲಾಯಿತು ಹಾಗೂ ಈ ಶೋಧ ಕಾರ್ಯಾಚರಣೆಯ ವೇಳೆ 60 ಕೆಜಿ ಮೀನು, ಒಂಬತ್ತು ಮೀನುಗಾರಿಕೆಯ ಬಲೆ, ಡೀಸೆಲ್, ಆಹಾರ ಸಾಮಗ್ರಿಗಳು ಹಾಗೂ ಮರದ ದೊಣ್ಣೆಗಳನ್ನು ಹೊಂದಿದ್ದ ಒಂದು ಯಾಂತ್ರಿಕ ದೋಣಿಯನ್ನು ವಶಪಡಿಸಿಕೊಳ್ಳಲಾಗಿದೆ. ಇದರೊಂದರಿಗೆ ಒಂದು ಮೊಬೈಲ್ ಫೋನ್, 200 ರೂ. ಪಾಕಿಸ್ತಾನಿ ನಗದನ್ನೂ ವಶಪಡಿಸಿಕೊಳ್ಳಲಾಗಿದೆ” ಎಂದು ಗಡಿ ಭದ್ರತಾ ಪಡೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.