ಸಾರಿಗೆ ಬಸ್ ಹಾಗೂ ಮಿನಿ ಲಾರಿ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಸುಮಾರು ಇಪ್ಪತ್ತಕ್ಕೂ ಹೆಚ್ಚು ಜನರಿಗೆ ಸಣ್ಣ ಪುಟ್ಟ ಗಾಯಗಳಾಗಿರುವ ಘಟನೆ ಬೆಳಗಾವಿಯ ಬೈಲಹೊಂಗಲದಲ್ಲಿ ಇಂದು ನಡೆದಿದೆ.
ಬೈಲಹೊಂಗಲ ತಾಲೂಕಿನ ತಿಗಡಿ ಕ್ರಾಸ್ ಮಧ್ಯೆ ಈ ಘಟನೆ ಸಂಭವಿಸಿದೆ. ತಿಗಡಿ ಕಡೆಯಿಂದ ಬೈಲಹೊಂಗಲದ ಕಡೆಗೆ ಪ್ರಯಾಣಿಕರನ್ನು ಹೊತ್ತ ಸಾರಿಗೆ ಬಸ್ ಸಂಚರಿಸುತ್ತಿತ್ತು. ಇದೇ ಸಮಯಕ್ಕೆ ತಿಗಡಿ ಕ್ರಾಸ್ ಕಡೆಯಿಂದ ಎದುರಿಗೆ ಬಂದ ಇಟ್ಟಿಗೆ ತುಂಬಿದ್ದ ಮಿನಿ ಲಾರಿ ನಡುವೆ ಮುಖಾಮುಖಿ ಅಪಘಾತ ಸಂಭವಿಸಿದೆ.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಅಲೆಮಾರಿ ಸಮುದಾಯಗಳಿಗೆ ಅನ್ಯಾಯ – ಜಾತಿಗಣತಿಯ ಮೇಲೂ ಕರಿನೆರಳು: ರಾಹುಲ್ ಗಾಂಧಿ ಗಮನಿಸುವರೇ?
ಈ ಅಪಘಾತದಲ್ಲಿ ಬಸ್ನಲ್ಲಿದ್ದ ಹಲವರಿಗೆ ಗಾಯಗಳಾಗಿವೆ. ಇನ್ನೂ ಮಿನಿ ಲಾರಿಯೂ ಜಖಂ ಆಗಿದ್ದು, ಲಾರಿ ಚಾಲಕ ಸೇರಿದಂತೆ ಇನ್ನೂಳಿದವರಿಗೂ ಗಾಯಗಳಾಗಿವೆ. ಅದೃಷ್ಟವಶಾತ್ ಯಾವುದೇ ರೀತಿಯ ಪ್ರಾಣ ಹಾನಿ ಆಗಿಲ್ಲ.
ಈ ಅಪಘಾತದಿಂದ ಎರಡು ವಾಹನಗಳು ನಡುರಸ್ತೆಯಲ್ಲಿ ನಿಂತಿದ್ದರಿಂದ ಇನ್ನೂಳಿದ ವಾಹನ ಸವಾರರಿಗೂ ಸಂಚಾರಕ್ಕೆ ತೀವ್ರ ತೊಂದರೆ ಆಯಿತು. ಘಟನಾ ಸ್ಥಳಕ್ಕೆ ಬೈಲಹೊಂಗಲ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
