ಗದಗ | ಬಸವಾದಿ ಶರಣರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಎಸ್. ವಿ. ಸಂಕನೂರು

Date:

Advertisements

“12ಣೆ ಶತಮಾನದಲ್ಲಿ ಶರಣೆಯರು ಮಹಿಳೆಯರಿಗೆ ಸ್ವತಂತ್ರವಾಗಿ ಬದುಕಬೇಕು ಎಂಬ ಆಶಯವನ್ನು ಹೊಂದಿದ್ದರು. ಬಸವಾದಿ ಶರಣರ ತತ್ವಗಳನ್ನು ಜೀವನದಲ್ಲಿ ಅಳವಡಿಕೊಂಡು ಹೋದಾಗ ಸದೃಢ ಸಮಾಜವನ್ನು ಕಟ್ಟಲು ಸಾಧ್ಯವಾಗುತ್ತದೆ. ನಮ್ಮ ಬದುಕನ್ನು ಸುಂದರವಾಗಿ ನಡೆಯಲಿಕ್ಕೆ ಈ ಸಮ್ಮೇಳನ ಮುನ್ನುಡಿಯಾಗಲಿ” ಎಂದು ವಿಧಾನ ಪರಿಷತ್ ಸದಸ್ಯರು ಪ್ರೊ. ಎಸ್. ವಿ. ಸಂಕನೂರು ಹೇಳಿದರು.

ಗದಗ ಪಟ್ಟಣದಲ್ಲಿ ಇಂದು ತೊಂಟದ ಸಿದ್ದಲಿಂಗೇಶ್ವರ ಕಲ್ಯಾಣ ಮಂಟಪದ ಶಿವಶರಣೆ ಮುಕ್ತಾಯಕ್ಕ ವೇದಿಕೆಯಲ್ಲಿ ಜಿಲ್ಲಾ ಕದಳಿ ಮಹಿಳಾ ಸಮ್ಮೇಳನದಲ್ಲಿ ಸ್ಮರಣ ಸಂಚಿಕೆ ಬಿಡುಗಡೆ ಮಾಡಿ ಅವರು ಮಾತನಾಡಿದರು.

“ಭಾರತಕ್ಕೆ ಸ್ವತಂತ್ರ ಸಿಕ್ಕ ನಂತರದಲ್ಲಿ ಡಾ. ಬಿ. ಆರ್. ಅಂಬೇಡ್ಕರ ಅವರು ಸಂವಿಧಾನ ಬರೆಯುವ ಸಂದರ್ಭದಲ್ಲಿ ಶರಣರ ತತ್ತ್ವಗಳನ್ನು ಅಳವಡಿಸಿಕೊಂಡು ರಚಿಸಿದ್ದಾರೆ. ಶರಣರ, ಬಸವಣ್ಣನವರ, ಅಂಬೇಡ್ಕರ್ ಅವರು ಕನಸು ಏನಾಗಿತ್ತು? ಸಮಾಜದಲ್ಲಿ ಸಮಾನತೆ ತರುವ ಕನಸಾಗಿತ್ತು. ಅವರುಗಳ ಕನಸು ಇಂದು ಈಡೇರಿದಿಯೇ ಮನನ ಮಾಡಿಕೊಳ್ಳಬೇಕು” ಎಂದರು.

Advertisements

“ಸಮಾಜದಲ್ಲಿ ಸಮಾನತೆ ತರಲು ಇವತ್ತಿಗೂ ಆಗಿಲ್ಲ. ಮಹಿಳೆಯರ ಮೇಲೆ ಅತ್ಯಾಚಾರ, ಕೊಲೆ ನಡೆಯುತ್ತಿವೆ. ಮಹಿಳೆಯರು ನೆಮ್ಮದಿಯಿಂದ ಬದುಕುಲು ಆಗಿದೆಯೇ? ಈ ಎಲ್ಲ ಪ್ರಶ್ನೆಗಳನ್ನು ನಾವೆಲ್ಲರೂ ಹಾಕಿಕೊಳ್ಳಬೇಕಾಗಿದೆ” ವಿಷಾದ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಹಾವೇರಿ | ನಿರಂತರ ಮಳೆಯಿಂದ ಬೆಳ್ಳುಳ್ಳಿ ಬೆಳೆ ಹಾನಿ: ಸರ್ಕಾರದ ನೆರವಿನ ನಿರೀಕ್ಷೆಯಲ್ಲಿ‌ ಸಂತ್ರಸ್ತ ರೈತರು

ಸಮ್ಮೇಳನದಲ್ಲಿ ದಿವ್ಯ ಸಾನಿಧ್ಯ ಜಗದ್ಗುರು ಡಾ. ತೋಂಟದ ಸಿದ್ದರಾಮ ಮಹಾಸ್ವಾಮಿಗಳು, ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷರು ಡಾ. ಸಿ. ಸೋಮಶೇಖರ, ಸಮ್ಮೇಳನದ ಸರ್ವಾಧ್ಯಕ್ಷರು ಶರಣೆ ಗಿರಿಜಕ್ಕ ಧರ್ಮರೆಡ್ಡಿ, ನಿಕಟಪೂರ್ವ ಸಮ್ಮೇಳನದ ಸರ್ವಾಧ್ಯಕ್ಷರು ಶಿವಶರಣೆ ಡಾ. ನಿಲ್ಲಮ್ಮತಾಯಿ ಅಸುಂಡಿ, ಕೆ. ಎ. ಬಳಿಗಾರ, ಸುಧಾ ಎಸ್. ಹುಚ್ಚಣ್ಣವರ, ಸುಶೀಲಾ ಸೋಮಶೇಖರ ಇನ್ನೂ ಅನೇಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ನಗರದ ವಿವಿಧ ಬಡಾವಣೆಗಳಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಅಡಿಗಲ್ಲು

ರಾಯಚೂರು ನಗರದ ವಾರ್ಡ್ ನಂ.34ರ ಬಂದೇನವಾಜ ಕಾಲೋನಿ, ದೇವರಾಜ ಅರಸ್ ಕಾಲೋನಿ,...

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

Download Eedina App Android / iOS

X