ತುಮಕೂರು ಡಿಸಿಸಿ ಬ್ಯಾಂಕ್ ಚುನಾವಣೆ : ಕೆ.ಎನ್ ರಾಜಣ್ಣ ಬೆಂಬಲಿಗರ ಭರ್ಜರಿ ಗೆಲುವು

Date:

Advertisements

ತುಮಕೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನದ ಚುನಾವಣೆಯಲ್ಲಿ 14  ಸ್ಥಾನದಲ್ಲೂ ಮಾಜಿ ಸಚಿವ ಕೆ. ಎನ್. ರಾಜಣ್ಣ ಅವರ ಬೆಂಬಲಿಗರು ಆಯ್ಕೆಯಾಗಿದ್ದಾರೆ. 7  ನೇ ಬಾರಿಗೆ ಮಾಜಿ ಸಚಿವ ಕೆ ಎನ್ ರಾಜಣ್ಣ ತುಮಕೂರು ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗುವುದು ಪಿಕ್ಸ್ ಆಗಿದೆ.

ತೀವ್ರ ಕುತೂಹಲ ಮೂಡಿಸಿದ್ದ, ತುಮಕೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಆಡ‌ಳಿತ ಮಂ‌ಡಳಿಯ ನಿರ್ದೇಶಕರ ಸ್ಥಾನಗಳಿಗೆ ಚುನಾವಣೆ ನಡೆದಿದ್ದು, 8 ನಿರ್ದೇಶಕರ ಅವಿರೋಧ ಆಯ್ಕೆ ಹೊರತುಪಡಿಸಿ ಉಳಿದ 6 ನಿರ್ದೇಶಕರ ಸ್ಥಾನಗಳಿಗೆ ಬೆಳಿಗ್ಗೆ 9 ಗಂಟೆಯಿಂದ ಬಿರುಸಿನ ಮತದಾನ ನಡೆಯಿತು.

ಡಿಸಿಸಿ ಬ್ಯಾಂಕ್‌ನ 14 ನಿರ್ದೇಶಕರ ಸ್ಥಾನಗಳ ಪೈಕಿ ಎ ಕೆಟಗರಿಯ ನಾಲ್ವರು, ಬಿ ಸಿ ‌ಡಿ ಹಾಗೂ ಡಿ1 ಕೆಟಗರಿಯ ತಲಾ 1 ನಿರ್ದೇಶಕ ಸ್ಥಾನ ಸೇರಿ ಒಟ್ಟು 8 ಮಂದಿ ನಿರ್ದೇಶಕರ ಅವಿರೋಧ ಆಯ್ಕೆಯಾಗಿದೆ. ಉಳಿದ ಪ್ರಾಥಮಿಕ ಕೃಷಿ ಉತ್ತಿನ ಸಹಕಾರ ಸಂಘದ ಎ ಕೆಟಗರಿಯ ಉಳಿದ 6 ತಾಲ್ಲೂಕುಗಳಾದ ಕುಣಿಗಲ್, ತಿಪಟೂರು, ಪಾವಗಡ, ಚಿಕ್ಕನಾಯಕನಹಳ್ಳಿ, ಗುಬ್ಬಿ ಹಾಗೂ ಸಿರಾ ತಾಲ್ಲೂಕುಗಳ ತಲಾ 1 ನಿರ್ದೇಶಕ ಸ್ಥಾನಗಳಿಗೆ ಚುನಾವಣೆ ನಡೆಯಿತು.

Advertisements
1001951120

ತುಮಕೂರು ನಗರದ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನಲ್ಲಿ 6 ಸ್ಥಾನಗಳಿಗೆ ಪ್ರತ್ಯೇಕ ಮತಗಟ್ಟೆಗಳನ್ನು ಸ್ಥಾಪಿಸಿ ಚುನಾವಣೆ ನಡೆಸಲಾಯಿತು. 6 ತಾಲ್ಲೂಕುಗಳ ಮತದಾರರು ಡಿಸಿಸಿ ಬ್ಯಾಂಕ್‌ಗೆ ಆಗಮಿಸಿ ಉತ್ಸಾಹದಿಂದಲೇ ಮತದಾನ ಮಾಡುತ್ತಿದ್ದ ದೃಶ್ಯಗಳು ಕಂಡು ಬಂದವು.

ಚಿಕ್ಕನಾಯಕನಹಳ್ಳಿ ತಾಲ್ಲೂಕಿನ 23 ಮಂದಿ ಮತದಾರರು, ಗುಬ್ಬಿ ತಾಲ್ಲೂಕು 21, ಕುಣಿಗಲ್ 18, ಪಾವಗಡ 20, ತಿಪಟೂರು 18, ಸಿರಾ 29 ಸಹಕಾರಿ ಸಂಘದ ಪ್ರತಿನಿಧಿಗಳಾಗಿರುವ ಮತದಾರರು ಡಿಸಿಸಿ ಬ್ಯಾಂಕ್‌ನಲ್ಲಿ ಸ್ಥಾಪಿಸಲಾಗಿರುವ ಮತಗಟ್ಟೆಗಳಿಗೆ ಆಗಮಿಸಿ ಮತ ಚಲಾಯಿಸಿದರು.

ಚುನಾವಣೆ ನಡೆದ ಡಿಸಿಸಿ ಬ್ಯಾಂಕ್ ಮತಗಟ್ಟೆ ಕೇಂದ್ರದ ಸುತ್ತ 100 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು.

ಮತಗಟ್ಟೆ ಕೇಂದ್ರದ 100 ಮೀಟರ್ ವ್ಯಾಪ್ತಿಯಿಂದ ದೂರದಲ್ಲಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಗಳಿಗೆ ಸ್ಪರ್ಧಿಸಿರುವ ಅಭ್ಯರ್ಥಿಗಳ ಬೆಂಬಲಿಗರು, ಸಹಕಾರ ಸಂಘಗಳ ಪ್ರತಿನಿಧಿಗಳು ಜಮಾಯಿಸಿದ್ದರು.ಅವಿರೋಧ ಆಯ್ಕೆಯಾದವರು

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಎ ಕೆಟಗರಿ ವರ್ಗ ಕ್ಷೇತ್ರ ವ್ಯಾಪ್ತಿಯ ತುಮಕೂರು ತಾಲ್ಲೂಕಿನಿಂದ ಮಾಜಿ ಸಚಿವ ಹಾಗೂ ಶಾಸಕ ಕೆ.ಎನ್. ರಾಜಣ್ಣ, ತುರುವೇಕೆರೆಯಿಂದ ಎಂ. ಸಿದ್ದಲಿಂಗಪ್ಪ, ಮಧುಗಿರಿಯಿಂದ ಜಿ.ಜೆ. ರಾಜಣ್ಣ, ಕೊರಟಗೆರೆಯಿಂದ ಎನ್. ಹನುಮಾನ್, ಬಿ. ವರ್ಗದ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘಗಳ ಕ್ಷೇತ್ರದಿಂದ ವಿಧಾನ ಪರಿಷತ್ ಸದಸ್ಯ ಆರ್. ರಾಜೇಂದ್ರ, ಪಟ್ಟಣ ಸಹಕಾರ ಬ್ಯಾಂಕ್‌ಗಳು, ವ್ಯವಸಾಯೇತರ ಪತ್ತಿನ ಸಹಕಾರ ಸಂಘದ ಕ್ಷೇತ್ರದಿಂದ ಎಸ್. ಲಕ್ಷ್ಮೀನಾರಾಯಣ, ಡಿ ವರ್ಗದ ಹಾಲು ಉತ್ಪಾದಕರ ಸಹಕಾರ ಸಂಘದ ಕ್ಷೇತ್ರದಿಂದ ಬಿ. ನಾಗೇಶ್‌ಬಾಬು ಹಾಗೂ ಡಿ1 ವರ್ಗದ ಮಹಿಳಾ ಸಂಘಗಳ ಕ್ಷೇತ್ರದಿಂದ ಮಾಲತಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇಂಡಿ | ಬಿಜೆಪಿ ಮತಗಳ್ಳತನದ ವಿರುದ್ಧ ಕಾಂಗ್ರೆಸ್ ಅಭಿಯಾನ; ತನಿಖೆಗೆ ಒತ್ತಾಯ

ವಿಜಯಪುರ ಜಿಲ್ಲೆ ಇಂಡಿ ತಾಲೂಕು ಯುವ ಕಾಂಗ್ರೆಸ್ ವತಿಯಿಂದ ಪಟ್ಟಣದ ಬಸವೇಶ್ವರ...

ರಾಯಚೂರು | ನಗರದ ವಿವಿಧ ಬಡಾವಣೆಗಳಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಅಡಿಗಲ್ಲು

ರಾಯಚೂರು ನಗರದ ವಾರ್ಡ್ ನಂ.34ರ ಬಂದೇನವಾಜ ಕಾಲೋನಿ, ದೇವರಾಜ ಅರಸ್ ಕಾಲೋನಿ,...

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

Download Eedina App Android / iOS

X