ಚಾಮರಾಜನಗರ | ಬೆಳೆಹಾನಿ ಸಮೀಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Date:

Advertisements

ಅತಿವೃಷ್ಟಿಯಿಂದ ಉಂಟಾಗಿರುವ ಬೆಳೆ ನಷ್ಟದ ಬಗ್ಗೆ ಜಂಟಿ ಸಮೀಕ್ಷೆ ನಡೆಸುವಂತೆ ಚಾಮರಾಜನಗರ ಜಿಲ್ಲಾಡಳಿತ ಅಧಿಕಾರಿಗಳಿಗೆ ಸೂಚನೆ ನೀಡಿದೆ.

ಮುಂಗಾರು ಬಿತ್ತನೆಯ ನಂತರದ ನಿರ್ಣಾಯಕ ತಿಂಗಳುಗಳಾದ ಜೂನ್ ಮತ್ತು ಜುಲೈ ತಿಂಗಳಲ್ಲಿ ಜಿಲ್ಲೆಯಲ್ಲಿ ಶೇ.30ರಷ್ಟು ಮಳೆಯ ಕೊರತೆ ದಾಖಲಾಗಿರುವುದರಿಂದ, ಸಮೀಕ್ಷೆ ಮಹತ್ವವನ್ನು ಪಡೆದುಕೊಂಡಿದೆ.

ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ಮಾನಿಟರಿಂಗ್ ಸೆಂಟರ್ (ಕೆಎಸ್ಎನ್‌ಡಿಎಂಸಿ) ವರದಿಗಳ ಪ್ರಕಾರ, “ಜಿಲ್ಲೆಯಲ್ಲಿ ಶೇ.30 ರಷ್ಟು ಮಳೆ ಕೊರತೆಯನ್ನು ಎದುರಿಸುತ್ತಿದ್ದು, ಬೆಳೆಹಾನಿಗೆ ಕಾರಣವಾಗಿದೆ. ಬೆಳೆದ ಬೆಳೆಗಳು ಒಣಗಿರುವುದರಿಂದ ಬೆಳೆ ಇಳುವರಿ ಕಡಿಮೆಯಾಗುತ್ತದೆ. ಇದೇ ರೀತಿ ಒಣ ಹವೆ ಮುಂದುವರೆದರೆ ಬೆಳೆಯ ಉತ್ಪಾದಕತೆಯ ಮೇಲೂ ಪರಿಣಾಮ ಬೀರುತ್ತದೆ” ಎಂದು ತಿಳಿದುಬಂದಿದೆ.

Advertisements

“ಜೂನ್‌ನಿಂದ ಆಗಸ್ಟ್ ಮೊದಲ ವಾರದವರೆಗೆ ಸರಾಸರಿ 138 ಮಿಮೀ ಮಳೆಯಾಗಿದ್ದು, ಜಿಲ್ಲೆಯಲ್ಲಿ ಕೇವಲ 96 ಮಿಮೀ ಮಳೆಯಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಜಿಲ್ಲೆಯಲ್ಲಿ 248 ಮಿಮೀ ದಾಖಲೆಯ ಮಳೆಯಾಗಿದ್ದು, ಪ್ರವಾಹಕ್ಕೆ ಕಾರಣವಾಯಿತು. ಈ ಹಿಂದೆ ಸುರಿದ ಮಳೆಯಿಂದಾಗಿ ಜಿಲ್ಲಾದ್ಯಂತ 290ಕ್ಕೂ ಹೆಚ್ಚು ದೊಡ್ಡ ಮತ್ತು ಸಣ್ಣ ಕೆರೆಗಳು ತುಂಬಿದ್ದವು. ಆದರೆ ಈ ವರ್ಷ ಹೆಚ್ಚು ಮಳೆಯಿಲ್ಲದೆ ಪರಿಸ್ಥಿತಿ ಮಂಕಾಗಿದೆ” ಎಂದು ಕೆಎಸ್‌ಎನ್‌ಡಿಎಂಸಿ ವರದಿ ಮಾಡಿದೆ.

“ಪ್ರಸ್ತುತ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಲ್ಲಿ ಶೇ.42ರಷ್ಟು ಮಾತ್ರ ಬಿತ್ತನೆಯಾಗಿದೆ. 1,17,897 ಎಕರೆ ಪ್ರದೇಶದ ಪೈಕಿ ಆಗಸ್ಟ್ ಮೊದಲ ವಾರದೊಳಗೆ 49,867 ಎಕರೆ ಪ್ರದೇಶದಲ್ಲಿ ಮಾತ್ರ ಬಿತ್ತನೆ ಪೂರ್ಣಗೊಂಡಿದೆ” ಎನ್ನಲಾಗಿದೆ.

ಬೆಳೆಗಳ ಡ್ರೋನ್ ಸಮೀಕ್ಷೆ

ಜಿಲ್ಲೆಯಲ್ಲಿ ಕಳೆದ ತಿಂಗಳು ಕೃಷಿ ಮತ್ತು ತೋಟಗಾರಿಕೆ ಭೂಮಿಯಲ್ಲಿ ಬೆಳೆದ ಬೆಳೆಹಾನಿ ಬಗ್ಗೆ ಡ್ರೋನ್ ಸಮೀಕ್ಷೆ ನಡೆಸಿದ್ದರೂ, ಈಗ ಆಡಳಿತವು ಕೃಷಿ, ತೋಟಗಾರಿಕೆ ಇಲಾಖೆಗಳ ಅಧಿಕಾರಿಗಳು ಮತ್ತು ಹರದನಹಳ್ಳಿ ಕೃಷಿ ವಿಜ್ಞಾನ ಕೇಂದ್ರದ ಕೃಷಿ ವಿಜ್ಞಾನಿಗಳನ್ನು ಒಳಗೊಂಡ ತಂಡದಿಂದ ಜಂಟಿ ಸಮೀಕ್ಷೆ ಪ್ರಾರಂಭಿಸಿದೆ.

ಜಂಟಿ ಸಮೀಕ್ಷೆಯ ಮೇಲ್ವಿಚಾರಣೆ, ಒಂದು ವಾರದೊಳಗೆ ಪೂರ್ಣಗೊಳಿಸಿ ಜಿಲ್ಲಾಡಳಿತಕ್ಕೆ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಶಿಲ್ಪಾ ನಾಗಾ ಅವರು ತಹಶೀಲ್ದಾರ್‌ಗಳಿಗೆ ನಿರ್ದೇಶನ ನೀಡಿದ್ದಾರೆ ಎಂದು ತಿಳಿದುಬಂದಿದೆ.

“ಕೃಷಿ ಇಲಾಖೆ ನಡೆಸಿದ ಪ್ರಾಥಮಿಕ ಸಮೀಕ್ಷೆಯಲ್ಲಿ, ಅಂದಾಜು 23,084 ಎಕರೆ ಭೂಮಿಯಲ್ಲಿ ರೈತರು ಬಿತ್ತನೆ ಮಾಡಿದ ಸೂರ್ಯಕಾಂತಿ, ಹತ್ತಿ, ಮೆಕ್ಕೆಜೋಳ, ದ್ವಿದಳ ಧಾನ್ಯಗಳಂತಹ ಬೆಳೆಗಳು ಒಣಗುತ್ತಿರುವುದು ಕಂಡುಬಂದಿದೆ” ಎಂದು ಜಂಟಿ ಕೃಷಿ ನಿರ್ದೇಶಕ ಎಂ ಮಧುಸೂದನ್ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಉಡುಪಿ | ಕಾನೂನುಬಾಹಿರ ಅಡ್ಡಾಗಳ ಮೇಲೆ ಪೊಲೀಸ್‌ ದಾಳಿ: ಪ್ರಕರಣ ದಾಖಲು

“ಜೂನ್ ಮತ್ತು ಜುಲೈನ ಮಳೆಯ ಕೊರತೆಯಿಂದಾಗಿ ಈ ವರ್ಷ ಬೆಳೆ ಇಳುವರಿ ಶೇ. 25ರಿಂದ 75 ರಷ್ಟು ಕಡಿಮೆಯಾಗುತ್ತದೆ” ಎಂದು ಅವರು ಹೇಳಿದರು.

“ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಸಮೀಕ್ಷೆ ನಡೆಸಲಾಗುತ್ತಿದೆ. ಈ ನಿಟ್ಟಿನಲ್ಲಿ ಮುಂದಿನ ಕ್ರಮಗಳನ್ನು ತೆಗೆದುಕೊಳ್ಳಲು ‌ಮುಂಗಾರಿನ ಬೆಳೆ ಹಾನಿಯನ್ನು ಮೌಲ್ಯಮಾಪನ ಮಾಡಿದ ಬಳಿಕ ರಾಜ್ಯ ಕಂದಾಯ ಇಲಾಖೆಗೆ ವರದಿಯನ್ನು ಕಳುಹಿಸಲಾಗುವುದು” ಎಂದು ಚಾಮರಾಜನಗರ ಅಪರ ಜಿಲ್ಲಾಧಿಕಾರಿ ಗೀತಾ ಹುಡೇದ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X