ಗುಬ್ಬಿ | ಸ್ಪ್ರೇ ಮಾಡಿ ಬೈಕ್ ಸವಾರನ ಪ್ರಜ್ಞೆ ತಪ್ಪಿಸಿ ಚಿನ್ನದ ಸರ ಕದ್ದೊಯ್ದ ಖದೀಮರು

Date:

Advertisements

ಯುವತಿಯೊಬ್ಬಳು ರಸ್ತೆಯಲ್ಲಿ ನಿಂತು ಬೈಕ್ ನಲ್ಲಿ ಬರುವವರನ್ನು ಟಾರ್ಗೆಟ್ ಮಾಡಿ ಸ್ಪ್ರೇ ಮಾಡಿ ಅರೆಪ್ರಜ್ಞೆ ಆದ ತಕ್ಷಣ ಚಿನ್ನದಸರ ಕದ್ದೊಯ್ದ ಘಟನೆ ತಾಲ್ಲೂಕಿನ ಪತ್ರೆ ಮತ್ತಿಘಟ್ಟ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ.

ತ್ಯಾಗಟೂರು ನಿವಾಸಿ ಶಿವಾನಂದ್ ಅವರು ಇದೇ ತಿಂಗಳ 12 ರಂದು ರಾತ್ರಿ 9.38 ಗಂಟೆ ಸಮಯದಲ್ಲಿ ಗುಬ್ಬಿಯಿಂದ ಮದುವೆ ಮುಗಿಸಿ ತಮ್ಮೂರಿಗೆ ವಾಪಸ್ ತೆರಳುವಾಗ ನಡೆದು ಹೋಗುತ್ತಿದ್ದ ಯುವತಿ ಸ್ಪ್ರೇ ಮಾಡಿದ ತಕ್ಷಣದಲ್ಲೇ ಅರೆ ಪ್ರಜ್ಞೆಗೆ ಜಾರಿದ್ದರು. ಕೊರಳಲಿದ್ದ ಸುಮಾರು 24 ಗ್ರಾಂ ಚಿನ್ನದ ಸರ ಎಗರಿಸಿ ಸ್ಕೂಟಿನಲ್ಲಿ ಯುವತಿ ಯುವಕನೊಬ್ಬನ ಜೊತೆ ಎಸ್ಕೇಪ್ ಆಗಿದ್ದಾರೆ.

ಹೆದ್ದಾರಿಯ ಪಕ್ಕದ ಸರ್ವಿಸ್ ರಸ್ತೆಯ ಉಬ್ಬುಗಳು ಖದೀಮರಿಗೆ ವರದಾನವಾಗಿದೆ. ಬೈಕ್ ಸವಾರರು ಬ್ರೇಕ್ ಹಿಡಿದ ತಕ್ಷಣ ಸ್ಪ್ರೇ ಮಾಡುತ್ತಾರೆ. ನಡೆದು ಹೊರಟಿದ್ದ ಯುವತಿ ಕೊಂಚ ದೂರದಲ್ಲಿ ಬೈಕ್ ಜೊತೆ ನಿಂತಿದ್ದ ಯುವಕ ಇಬ್ಬರ ಕೈಚಳಕ ಹೆದ್ದಾರಿ ಸಿಸಿ ಕ್ಯಾಮೆರಾದಲ್ಲಿ ಸಿಕ್ಕಿದೆ ಎನ್ನುತ್ತಾರೆ ಸರ ಕಳೆದುಕೊಂಡ ಶಿವಾನಂದ್.

Advertisements

ರಾಷ್ಟ್ರೀಯ ಹೆದ್ದಾರಿ ಪಕ್ಕದ ಸರ್ವಿಸ್ ರಸ್ತೆಯಲ್ಲಿ ಕಾದಿದ್ದು ಬೈಕ್ ಸವಾರರನ್ನು ದೋಚುವ ತಂಡ ತಾಲ್ಲೂಕಿನ ಕೆಲ ಗ್ರಾಮಗಳ ಗೇಟ್ ಆಯ್ಕೆ ಮಾಡಿಕೊಂಡಿದ್ದಾರೆ. ತ್ಯಾಗಟೂರು ಗೇಟ್ ಬಳಿ ಇತ್ತೀಚಿಗೆ ಕಾರು ಅಡ್ಡ ಹಾಕುವ ಪ್ರಯತ್ನ ನಡೆಸಿದ್ದರು ಎಂದು ಸ್ಥಳೀಯರು ಚರ್ಚೆ ಮಾಡುತ್ತಿದ್ದಾರೆ. ಈ ದರೋಡೆಕೋರರ ತಂಡಗಳಿಂದ ಸಾರ್ವಜನಿಕರ ಕಾಪಾಡುವ ಕೆಲಸ ಪೊಲೀಸರು ಮಾಡಬೇಕಿದೆ. ಚುರುಕಿನ ಕಾರ್ಯಾಚರಣೆ ನಡೆಸುವರೇ ಕಾದು ನೋಡಬೇಕಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸತೀಶ್ ಸೈಲ್ ಮನೆ ಮೇಲೆ ಇಡಿ ದಾಳಿ | ಪ್ರಕರಣದ ಸುತ್ತ ಒಂದು ರಾಜಕೀಯ ಒಳನೋಟ

ಉತ್ತರ ಕನ್ನಡ ಜಿಲ್ಲೆಯ ರಾಜಕೀಯ ರಂಗದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ರಾಜ್ಯ ರಾಜಕಾರಣದಲ್ಲೂ...

ಕೊಪ್ಪಳ | ಜಮೀನನಲ್ಲಿ ಕಟ್ಟಿದ್ದ ಜಾನುವಾರುಗಳ ಕಳ್ಳತನ: ಕಂಗಾಲಾದ ರೈತ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಗಡ್ಡಿ ಗ್ರಾಮದ ಆಗೋಲಿ ರಸ್ತೆಯ ಬಳಿಯಿರುವ...

ರಾಮನಗರ | ಬೀಡಿ ಕಾರ್ಮಿಕರಿಗೆ ಸಿಗದ ಮೂಲ ಸೌಲಭ್ಯ: ಹಕ್ಕುಗಳ ಬಗ್ಗೆ ತಿಳಿಸಿದ ಮುಖಂಡರು

ಬೀಡಿ ಕಾರ್ಮಿಕರಿಗೆ ಬೀಡಿ ಕಾರ್ಡ್‌ ದೊರೆಯದಿರುವುದರಿಂದ ಇಎಸ್‌ಐ, ಪಿಎಫ್‌ ಹಾಗೂ ಯಾವುದೇ...

ಕಲಬುರಗಿ | 9ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ

ಕಲಬುರಗಿ ಜಿಲ್ಲೆಯ ಅಫಜಲಪುರ ತಾಲ್ಲೂಕಿನ ಕರಜಗಿ ಗ್ರಾಮದಲ್ಲಿ 9ನೇ ತರಗತಿಯಲ್ಲಿ ಓದುತ್ತಿದ್ದ...

Download Eedina App Android / iOS

X