ಧಾರವಾಡ | ಎಲ್‌ಇಡಿ ಬೀದಿದೀಪ ಯೋಜನೆಗೆ ಎಚ್‌ಡಿಎಂಸಿ ಅನುಮೋದನೆ

Date:

Advertisements

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಬಹುನಿರೀಕ್ಷಿತ ಎಲ್‌ಇಡಿ ಬೀದಿದೀಪಗಳ ಯೋಜನೆಗೆ ಕೊನೆಗೂ ಅಧಿಕೃತ ಚಾಲನೆ ದೊರೆತಿದ್ದು, ನಗರಾಭಿವೃದ್ಧಿಯ ಕಡೆಗೆ ಒಂದು ಹೆಜ್ಚೆಯನ್ನಿಟ್ಟಿರುವ ಈ ಯೋಜನೆಯು ಆಗಸ್ಟ್‌ 18ರಂದು ಅನುಮೋದನೆಗೊಂಡಿದೆ.

ಬಹುನಿರೀಕ್ಷಿತ ಈ ಯೋಜನೆಯಡಿಯಲ್ಲಿ ಹುಬ್ಬಳ್ಳಿ ಧಾರವಾಡ ಅವಳಿ ನಗರಗಳಲ್ಲಿ ಈಗಾಗಲೇ ಅಸ್ಥಿತ್ವದಲ್ಲಿದ್ದ ಸಾಂಪ್ರದಾಯಿಕ ಬೀದಿದೀಪಗಳ ಬದಲಿಗೆ ಎಲ್‌ಇಡಿ ದೀಪಗಳನ್ನು ಅಳವಡಿಸಲಾಗುತ್ತದೆ. ಹೆಚ್ಚುವರಿಯಾಗಿ ಈ ಯೋಜನೆಯು ಬೀದಿದೀಪಗಳ ನಿರ್ವಹಣೆ ಮತ್ತು ದಕ್ಷತೆಗೆ ಕೇಂದ್ರೀಕೃತ ನಿರ್ವಹಣೆ ಹಾಗೂ ಮೇಲ್ವಿಚಾರಣಾ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ. ಸಾರ್ವಜನಿಕ­-ಖಾಸಗಿ ಸಹಭಾಗಿತ್ವದ ಮಾದರಿಯೊಂದಿಗೆ ಏಳು ವರ್ಷಗಳ ರಿಯಾಯಿತಿ ಅವಧಿಯಲ್ಲಿ ಮಾದರಿ ರೂಪಿಸಲು ಯೋಜನೆ ತಯಾರಿಸಲಾಗಿದೆ. ಈ ಯೋಜನೆಗೆ ಒಟ್ಟು 93.6 ಕೋಟಿ ರೂಪಾಯಿ ಮಂಜೂರಾಗಿದೆ.

ಎಚ್‌ಡಿಎಂಸಿ ಆಯುಕ್ತರ ನೇತೃತ್ವದಲ್ಲಿ ನಡೆದ ವ್ಯಾಪಕ ಚರ್ಚೆ ಮತ್ತು ಸಮಾಲೋಚನೆಯ ಬಳಿಕ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದ್ದು, ಪುರಸಭೆ ಆಡಳಿತ ನಿರ್ದೇಶನಾಲಯದ ವತಿಯಿಂದ ಯೋಜನೆಗೆ ವ್ಯಾಪಕ ಬೆಂಬಲ ದೊರೆತಿದೆ. ಹಣಕಾಸಿನ ಸಂಪೂರ್ಣ ಮೌಲ್ಯಮಾಪನದ ಬಳಿಕ ತುಮಕೂರಿನ ಶ್ರೀ ಮಂಜು ಎಲೆಕ್ಟ್ರಿಕಲ್ಸ್‌ಗೆ ಗುತ್ತಿಗೆ ನೀಡಲಾಯಿತು. ಅನ್ವಯವಾಗುವ ಎಲ್ಲ ತೆರಿಗೆಗಳನ್ನು ಒಳಗೊಂಡಂತೆ 1.1 ಕೋಟಿ ರೂಪಾಯಿ ಮಾಸಿಕ ಕಂತನ್ನು ಈ ಸಂದರ್ಭದಲ್ಲಿ ಉಲ್ಲೇಖಿಸಿದರು.

Advertisements

ಈ ಯೋಜನೆಯ ಮೂಲಕ ಬೀದಿದೀಪಗಳ ಇಂಧನಾ ವೆಚ್ಚ ಮತ್ತು ನಿರ್ವಹಣಾ ವೆಚ್ಚವನ್ನು ಗಣನೀಯವಾಗಿ ಕಡಿಮೆ ಮಾಡುವ ಮೂಲಕ ನಗರದ ಮೂಲ ಸೌಕರ್ಯಗಳಲ್ಲಿ ಮಹತ್ತರ ಬದಲಾವಣೆ ತರುವ ನಿರೀಕ್ಷೆಯಿದೆ. ಆಧುನಿಕ ತಂತ್ರಜ್ಞಾನದ ಎಲ್‌ಇಡಿ ಬೀದಿದೀಪಗಳು ಉತ್ತಮ ಗುಣಮಟ್ಟದೊಂದಿಗೆ ನಿವಾಸಿಗಳು ಮತ್ತು ಪ್ರಯಾಣಿಕರಿಗೆ ಸುರಕ್ಷಿತವಾಗಿರುತ್ತವೆ.

ಎಲ್‌ಇಡಿ ಅಳವಡಿಕೆ ಯೋಜನೆಯು ವಾಸ್ತವವಾಗಿ ಹುಬ್ಬಳ್ಳಿ ಧಾರವಾಡ ಸ್ಮಾರ್ಟ್‌ ಸಿಟಿ ಅಡಿಯಲ್ಲಿ ಬರುವ ಯೋಜನೆಯಾಗಿದ್ದು, 58 ಸಾವಿರ ಬೀದಿದೀಪಗಳನ್ನು ಎಲ್‌ಇಡಿ ದೀಪಗಳನ್ನಾಗಿ ಪರಿವರ್ತಿಸುವ ಯೋಜನೆಯನ್ನು ರೂಪಿಸಿತ್ತು. 2018ರಿಂದ 2022ರವರೆಗೆ ಎಚ್‌ಡಿಎಸ್‌ಸಿಎಲ್‌ 7 ಬಾರಿ ಗುತ್ತಿಗೆ ಕರೆದಿತ್ತು. ಆದರೆ ಪಾಲುದಾರರು ಇಲ್ಲದಿರುವ ಕಾರಣಕ್ಕಾಗಿ ಈ ಯೋಜನೆಯನ್ನು ಎಚ್‌ಡಿಎಂಸಿಗೆ ವಹಿಸಲಾಗಿದೆ. ಮಹಾನಗರ ಪಾಲಿಕೆಯು 75 ಸಾವಿರ ಬೀದಿ ದೀಪಗಳನ್ನು ಪರಿವರ್ತಿಸುವ ಯೋಜನೆ ಹಾಕಿಕೊಂಡಿದೆ.

ಈ ಸುದ್ದಿ ಓದಿದ್ದೀರಾ? ಗ್ರಾಮೀಣ ಆರ್ಥಿಕತೆಯ ಶಕ್ತಿಯೇ ಕೃಷಿ ಕೂಲಿ ಕಾರ್ಮಿಕರು: ಸಂಕಷ್ಟದಲ್ಲಿರುವ ಕಾರ್ಮಿಕರಿಗೆ ಸರ್ಕಾರ ಸ್ಪಂದಿಸುವುದೇ?

“ಈ ಯೋಜನೆಯನ್ನು ಇನ್ನೆರಡು ವಾರಗಳಲ್ಲೇ ಜಾರಿಗೊಳಿಸಲಿದ್ದು, ಗುತ್ತಿಗೆದಾರರೊಂದಿಗೆ ಎಲ್ಲ ಔಪಚಾರಿಕಗಳು ಶ್ರೀಘ್ರದಲ್ಲೇ ಪೂರ್ಣಗೊಳ್ಳಲಿವೆ. ಈಗಾಗಲೇ ಎಚ್‌ಡಿಎಂಸಿಯು ತಿಂಗಳಿಗೆ 2 ಕೋಟಿ ರೂಪಾಯಿ ಇದ್ದ ಮಾಸಿಕ ಕಂತನ್ನು 1 ಕೋಟಿ ರೂಪಾಯಿಗಳಿಗೆ ಇಳಿಸಿದೆ. ಇದರ ಜತೆಗೆ ಬೀದಿ ದೀಪಗಳ ತಿಂಗಳ ನಿರ್ವಹಣಾ ವೆಚ್ಚವೂ ಕೂಡಾ ಉಳಿತಾಯವಾಗಲಿದೆ. ಈ ಯೋಜನೆಯು ಇಂಧನ ದಕ್ಷತೆ ಮತ್ತು ಸುಸ್ಥಿರತೆಯ ಬಹುದೊಡ್ಡ ಗುರಿಯನ್ನು ಹೊಂದಿದೆ” ಎಂದು ಎಚ್‌ಡಿಎಂಸಿ ಎಲೆಕ್ಟ್ರಿಕಲ್‌ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಎಸ್‌ ಎಂ ಗಣಾಚಾರಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಿರ್ಲಕ್ಷ್ಯಕ್ಕೆ ಗುರಿಯಾಗಿ ದುಸ್ಥಿತಿಗೆ ಬಿದ್ದ ರಾಜ್ಯ ಹೆದ್ದಾರಿ; ಶಾಸಕರ ವಿರುದ್ಧ ಸಾರ್ವಜನಿಕರ ಆಕ್ರೋಶ

ಕಲಬುರಗಿ ಜಿಲ್ಲೆಯ ರಾಜ್ಯ ಹೆದ್ದಾರಿ 125, ಶಹಾಬಾದ್ ತಾಲೂಕಿನಿಂದ ಜೇವರ್ಗಿಯ ರಾಷ್ಟ್ರೀಯ...

ಕಲಬುರಗಿ | ಬೆಳೆ ಹಾನಿ: ಎಕರೆಗೆ 25 ಸಾವಿರ ಪರಿಹಾರ ನೀಡುವಂತೆ ಒತ್ತಾಯಿಸಿ ಎಐಕೆಕೆಎಂಎಸ್‌ ಪ್ರತಿಭಟನೆ

ಕಲಬುರಗಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಆಗಿರುವ ಬೆಳೆ ನಷ್ಟಕ್ಕೆ ಕೂಡಲೇ ಪರಿಹಾರವನ್ನು ಬಿಡುಗಡೆ...

ಚಿಕ್ಕಬಳ್ಳಾಪುರ | ಮಂತ್ರಾಲಯದಲ್ಲಿ ಡಾ.ಕೈವಾರ ಶ್ರೀನಿವಾಸ್‌ರವರಿಗೆ ಕನ್ನಡಸಿರಿ ಪ್ರಶಸ್ತಿ ಪ್ರದಾನ

ಮಂತ್ರಾಲಯದ ಸದ್ಗುರು ರಾಘವೇಂದ್ರ ಸ್ವಾಮಿ ಮಠದಲ್ಲಿ ನಡೆದ ಪ್ರಪ್ರಥಮ ಅಂತಾರಾಜ್ಯ ಕನ್ನಡ...

ಕೋಲಾರ | ರಸ್ತೆ ವಿಸ್ತರಣೆಗೆ ಕಾನೂನು ಬಾಹಿರವಾಗಿ ಜಾಗ ಅತಿಕ್ರಮಣ; ಕುರ್ಕಿ ರಾಜೇಶ್ವರಿ ಆರೋಪ

ಕೋಲಾರ ತಾಲೂಕಿನ ನರಸಾಪುರ ಗ್ರಾಮ ಠಾಣಾ ವ್ಯಾಪ್ತಿಯಲ್ಲಿ ರಸ್ತೆ ವಿಸ್ತರಣೆ ಕಾಮಗಾರಿಗೆ...

Download Eedina App Android / iOS

X