ಧರ್ಮಸ್ಥಳ ಪ್ರಕರಣ | ದೆಹಲಿ ನಾಯಕರಿಂದ ಎಸ್‌ಐಟಿ ರಚನೆಗೆ ಸೂಚನೆ: ಸಂಸದ ತೇಜಸ್ವಿ ಸೂರ್ಯ

Date:

Advertisements

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ಕೆಲ ನಾಯಕರಿಂದ ಎಸ್‌ಐಟಿ ರಚನೆಗೆ ಸೂಚನೆ ಬಂದಿದ್ದು, ಸಿಎಂ ಸಿದ್ದರಾಮಯ್ಯ ಅವರು ಅವರ ಹೆಸರುಗಳನ್ನು ಬಹಿರಂಗಪಡಿಸಬೇಕು ಎಂದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಒತ್ತಾಯಿಸಿದ್ದಾರೆ.

ಸೋಮವಾರ ಕರ್ನಾಟಕ ಬಿಜೆಪಿ ಆಯೋಜಿಸಿದ್ದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ‘ಧರ್ಮ ಯಾತ್ರೆ’ಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಇದು ಕೇವಲ ತನಿಖೆಯ ವಿಚಾರವಲ್ಲ, ಕರ್ನಾಟಕದ ಪ್ರಮುಖ ಹಿಂದೂ ಧಾರ್ಮಿಕ ಸಂಸ್ಥೆಯನ್ನು ಅಪಕೀರ್ತಿ ಪಡಿಸಿ ಅಸ್ಥಿರಗೊಳಿಸುವ ದೊಡ್ಡ ಷಡ್ಯಂತ್ರದ ಭಾಗವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೋರಿದ “ತುರ್ತುತನ ಮತ್ತು ಉತ್ಸಾಹ”ವೇ ಸಂಶಯಾಸ್ಪದವಾಗಿದೆ ಎಂದು ಹೇಳಿದ್ದಾರೆ.

“ಸಾವಿರಾರು ಹತ್ಯೆಗಳು ನಡೆದಿವೆ ಎಂಬ ಅನಾಮಿಕ ಪೌರ ಕಾರ್ಮಿಕನ ಆರೋಪದ ಮೇಲೆ, ಯಾವುದೇ ಪ್ರಾಥಮಿಕ ತನಿಖೆ ನಡೆಸದೇ, ಆ ವ್ಯಕ್ತಿಯ ಹಿನ್ನೆಲೆ ಪರಿಶೀಲನೆ ಮಾಡದೇ, ತಕ್ಷಣವೇ ಎಸ್‌ಐಟಿ ರಚಿಸಲು ಸಿಎಂ ಯಾಕೆ ಇಷ್ಟು ತುರ್ತು ತೋರಿಸಿದರು? ಇದೇ ರೀತಿಯ ಆರೋಪಗಳು ಯಾವುದೇ ಬೇರೆ ಧರ್ಮದ ಸಂಸ್ಥೆಯ ವಿರುದ್ಧ ಬಂದಿದ್ದರೆ ಸಿಎಂ ಇದೇ ಆತುರ ತೋರಿಸುತ್ತಿದ್ದರೆ? ಹಿರಿಯ ಪೊಲೀಸ್ ಅಧಿಕಾರಿಗಳು ಪ್ರಾಥಮಿಕ ವಿಚಾರಣೆ ಮಾಡದೆ ಎಸ್‌ಐಟಿ ರಚಿಸಬಾರದೆಂದು ಸರ್ಕಾರಕ್ಕೆ ಸಲಹೆ ನೀಡಿದ್ದರೂ ಅದನ್ನು ಸಿಎಂ ನಿರ್ಲಕ್ಷಿಸಿದ್ದಾರೆ ಎಂದು ಹೇಳಿದರು.

Advertisements

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಅಲೆಮಾರಿ ಸಮುದಾಯಗಳಿಗೆ ಅನ್ಯಾಯ – ಜಾತಿಗಣತಿಯ ಮೇಲೂ ಕರಿನೆರಳು: ರಾಹುಲ್‌ ಗಾಂಧಿ ಗಮನಿಸುವರೇ?

“ದೆಹಲಿಯ ಕೆಲ ನಾಯಕರಿಂದಲೇ ಎಸ್‌ಐಟಿ ರಚನೆಗೆ ಸೂಚನೆ ಬಂದಿತೆಂದು ತಿಳಿಯುತ್ತದೆ. ಯಾರು ಆ ದೆಹಲಿ ನಾಯಕರು? ಕರ್ನಾಟಕದ ಪ್ರತಿಯೊಂದು ಹಿಂದು ಭಕ್ತನಿಗೂ, ಪ್ರತಿಯೊಬ್ಬ ನಾಗರಿಕನಿಗೂ ಇದನ್ನು ತಿಳಿದುಕೊಳ್ಳುವ ಹಕ್ಕು ಇದೆ” ಎಂದು ಹೇಳಿದರು.

ಪೌರ ಕಾರ್ಮಿಕನ ಪರವಾಗಿ ಖ್ಯಾತ ವಕೀಲರನ್ನು ನ್ಯಾಯಾಲಯಕ್ಕೆ ಕರೆದೊಯ್ಯಲಾಗಿದೆ. ಇದಕ್ಕೆಲ್ಲ ಯಾರು ಹಣ ನೀಡಿದರು? ಯಾರು ಈ ಸಂಚನ್ನು ರೂಪಿಸಿದರು? ಇದರ ಹಿಂದೆ ಯಾವ ಸಂಘಟನೆಗಳಿವೆ? ಇದು ರಾಹುಲ್ ಗಾಂಧಿಯವರ ‘ಸನಾತನ ಧರ್ಮ ನಿರ್ಮೂಲನೆ ಯೋಜನೆ’ಯ ಭಾಗವೇ ಎಂದು ಪ್ರಶ್ನಿಸಿದರು.

“ಸಿಎಂ ಎಸ್‌ಐಟಿಗೆ ತೋರಿದ ಉತ್ಸಾಹವನ್ನು ಸಿಬಿಐ ತನಿಖೆಗೆ ಸಹ ತಕ್ಷಣ ತೋರಿಸಬೇಕು. ಇಲ್ಲವಾದರೆ ಇದು ಕೇವಲ ಧರ್ಮಸ್ಥಳವನ್ನು ಅಪಕೀರ್ತಿ ಪಡಿಸುವ ಯೋಜನೆಯಲ್ಲ, ಬೃಹತ್ ಮಟ್ಟದ ಸನಾತನ ಧರ್ಮ ನಿರ್ಮೂಲನೆ ಯೋಜನೆಯ ಭಾಗವೆಂಬ ಪ್ರಶ್ನೆ ಉದ್ಭವಿಸುತ್ತದೆ” ಎಂದು ಹೇಳಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ: ಸಂಸದ ಯದುವೀರ್ ಒಡೆಯರ್ ಸ್ವಾಗತ

ಕರ್ನಾಟಕದ ನಾಡಹಬ್ಬವೆಂದೇ ಪ್ರಸಿದ್ಧವಾಗಿರುವ ಮೈಸೂರು ದಸರಾ ಮಹೋತ್ಸವದ ಈ ಬಾರಿಯ ಉದ್ಘಾಟನೆಗೆ...

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿ ಪೋಸ್ಟ್; ಇಬ್ಬರ ಮೇಲೆ ಎಫ್‌ಐಆರ್‌

ನಾಡಹಬ್ಬ ಮೈಸೂರು ದಸರಾ ಉದ್ಘಾಟಿಸಲು ಬೂಕರ್ ಪ್ರಶಸ್ತಿ ಪುರಸ್ಕೃತ ಬಾನು ಮುಷ್ತಾಕ್...

ಎಸ್‌ಸಿ, ಎಸ್ಟಿ ದೌರ್ಜನ್ಯ ಕಾಯ್ದೆ | 60 ದಿನದ ಒಳಗಾಗಿ ಆರೋಪ ಪಟ್ಟಿ ಸಲ್ಲಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ...

ಗ್ರಾಮೀಣ ಆರ್ಥಿಕತೆಯ ಶಕ್ತಿಯೇ ಕೃಷಿ ಕೂಲಿ ಕಾರ್ಮಿಕರು: ಕಾರ್ಮಿಕರ ಕಷ್ಟಕ್ಕೆ ಸ್ಪಂದಿಸುವುದೇ ಸರ್ಕಾರ?

ಗ್ರಾಮೀಣ ಜೀವನವನ್ನು ಹೊತ್ತೊಯ್ಯುವ ಪ್ರಮುಖ ಶಕ್ತಿಯೇ ಕೃಷಿ ಕೂಲಿ ಕಾರ್ಮಿಕರು. ರೈತನು...

Download Eedina App Android / iOS

X