ಔರಾದ್‌ | ಬಸವಲಿಂಗ ಪಟ್ಟದ್ದೇವರು ಸುದೈವಿ ಮಕ್ಕಳ ಪೋಷಕರು : ನವೀಲಕುಮಾರ್ ಉತ್ಕಾರ್

Date:

Advertisements

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ತಮ್ಮ ಜೀವನದುದ್ದಕ್ಕೂ ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ, ದಲಿತೋದ್ದಾರ, ಅನಾಥ ಮಕ್ಕಳ ರಕ್ಷಕರಾಗಿ ಸಮಾಜಕ್ಕೆ ಮಾದರಿಯಾಗಿದ್ದಾರೆ ಎಂದು ಪ್ರಾಚಾರ್ಯ ನವೀಲಕುಮಾರ್ ಉತ್ಕಾರ್ ಹೇಳಿದರು.

ಔರಾದ ತಾಲೂಕಿನ ಸಂತಪುರ ಗ್ರಾಮದ ಸಿದ್ದರಾಮೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರ ಆಯೋಜಿಸಿದ್ದ ಡಾ. ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ಹಾಗೂ ಅನಾಥ ಮಕ್ಕಳಿಗೆ ಸಮವಸ್ತ್ರ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಅನಾಥ, ನಿರ್ಗತಿಕ ಮಕ್ಕಳ ಪಾಲನೆ-ಪೋಷಣೆ ಜತೆಗೆ ಹೆತ್ತವರು, ಸಮಾಜ ಬೇಡವೆಂದು ತಿಪ್ಪೆಗುಂಡಿ, ದೇವಾಲಯ, ರಸ್ತೆ ಅಕ್ಕಪಕ್ಕ ಇತರ ಸ್ಥಳಗಳಲ್ಲಿ ಎಸೆದ ನವಜಾತ ಶಿಶುಗಳನ್ನು ಕಾನೂನು ಪ್ರಕಾರ ಹಿರೇಮಠ ಸಂಸ್ಥಾನದ ಸ್ವದೇಶಿ ದತ್ತು ಕೇಂದ್ರಕ್ಕೆ ಪಡೆದು ತಮ್ಮಲ್ಲಿ ಇರುವಷ್ಟು ದಿನ ಅನ್ನ ಆಶ್ರಯ, ಗುಣಾತ್ಮ ಕ ಶಿಕ್ಷಣ ನೀಡುವ ಮೂಲಕ ಸುಂದರ ಬದುಕು ರೂಪಿಸುತ್ತಿದ್ದಾರೆ’ ಎಂದು ಹೇಳಿದರು.

Advertisements

ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಶಿವಪುತ್ರ ಧರಣಿ, ಸುಧಾ ಕೌಟಿಗೆ, ಮೀರಾತಾಯಿ ಕಾಂಬಳೆ, ಪ್ರಿಯಾಂಕಾ ಗೂನ್ನಳ್ಳಿಕರ, ಅಶ್ವಿನಿ ಹಿಂದೊಡ್ಡಿ, ಮಹಾಂತೇಶ ಪಂಚಾಳ, ಜಿತೇಂದ್ರ ಡಿಗ್ಗಿ, ಸಂತೋಷ ಧೂಳ್ಗಂಡೆ, ಸುಧೀರ್ ಆಲೂರೇ, ಸುರೇಶ್ ಬಂಡೆ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

ಬಸವಲಿಂಗ ಪಟ್ಟದ್ದೇವರ ಜನ್ಮದಿನ : ದಸಂಸದಿಂದ ವೃದ್ಧರಿಗೆ ಹಣ್ಣು ಹಂಪಲು ವಿತರಣೆ

ಔರಾದ್ ಪಟ್ಟಣದ ರಮಾಬಾಯಿ ಅಂಬೇಡ್ಕರ್ ವೃದ್ಧಾಶ್ರಮದಲ್ಲಿ ಕರ್ನಾಟಕ ದಲಿತ ಸಂಸರ್ಷ ಸಮಿತಿ (ಪ್ರೊ.ಕೃಷ್ಣಪ್ಪ ಬಣ) ಸಂಘಟನೆಯಿಂದ ಭಾಲ್ಕಿ ಹಿರೇಮಠದ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ಅಂಗವಾಗಿ ವೃದ್ಧರಿಗೆ ಹಣ್ಣು ಹಂಪಲು, ಶಾಲಾ ಮಕ್ಕಳಿಗೆ ನೋಟ್ ಬುಕ್ ವಿತರಣೆ ಮಾಡಲಾಯಿತು.

WhatsApp Image 2025 08 25 at 7.43.26 PM 1

ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷರಾದ ಡಾ.ಬಸವಲಿಂಗ ಪಟ್ಟದ್ದೇವರು ಜೀವನದುದ್ದಕ್ಕೂ ಗಡಿಭಾಗದಲ್ಲಿ ವಚನ ಸಾಹಿತ್ಯ ಹಾಗೂ ಕನ್ನಡ ಭಾಷೆ ಪ್ರಸಾರದ ಕೈಂಕರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ ಎಂದು ಔರಾದ್ ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಶಿವಕುಮಾರ ಘಾಟೆ ಹೇಳಿದರು.

ದಸಂಸ ಜಿಲ್ಲಾ ಸಂಚಾಲಕ ಧನರಾಜ ಮುಸ್ತಾಪೂರ ಮಾತನಾಡಿ, ‘ಬಸವಲಿಂಗ ಪಟ್ಟದ್ದೇವರು ಧಾರ್ಮಿಕ, ಶೈಕ್ಷಣಿಕ ಅಷ್ಟೇ ಅಲ್ಲದೆ ಜನಮುಖಿ ಕಾರ್ಯಗಳ ಮುಖಾಂತರ ಮಾನವೀಯತೆ ಮೆರೆಯುತ್ತಿರುವುದು ಶ್ಲಾಘನೀಯ’ ಎಂದರು.

ಬಳಿಕ ಸಂತಪೂರ ‌ಸಮುದಾಯ ಆರೋಗ್ಯ ಕೇಂದ್ರದಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಹಾಗೂ ಮುಸ್ತಾಪುರ ಸರ್ಕಾರಿ ಶಾಲೆಯ ಮಕ್ಕಳಿಗೆ ನೋಟ್ ಬುಕ್ ವಿತರಿಸಿದರು.

WhatsApp Image 2025 08 25 at 7.43.50 PM 1

ಇದನ್ನೂ ಓದಿ : ಕಲ್ಯಾಣ ಕರ್ನಾಟಕದಲ್ಲಿ 36 ಪಿಯು ಉಪನ್ಯಾಸಕರ ಹುದ್ದೆ ಭರ್ತಿಗೆ ಸರ್ಕಾರ ಅನುಮತಿ!

ಈ ಸಂದರ್ಭದಲ್ಲಿ ಪ್ರಮುಖರಾದ ಸಂಜುಕುಮಾರ ಲಾಧಾ, ಶರಣಬಸಪ್ಪ ಮುಸ್ತಾಪುರೆ, ಘಾಳೆಪ್ಪ ಶೆಂಬೆಳ್ಳಿ, ಮಲ್ಲಿಕಾರ್ಜುನ ಜೊನ್ನೇಕೆರಿ, ಶಿವಕುಮಾರ ಸಾದುರೆ, ಅಂಬಾದಾಸ ಪಾಟೀಲ್, ನರಸಿಂಗ್ ಸೇರಿದಂತೆ ಶಾಲಾ ಶಿಕ್ಷಕರು, ಆಸ್ಪತ್ರೆ ಸಿಬ್ಬಂದಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಬೆಳೆ ಹಾನಿ: ಎಕರೆಗೆ 25 ಸಾವಿರ ಪರಿಹಾರ ನೀಡುವಂತೆ ಒತ್ತಾಯಿಸಿ ಎಐಕೆಕೆಎಂಎಸ್‌ ಪ್ರತಿಭಟನೆ

ಕಲಬುರಗಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಆಗಿರುವ ಬೆಳೆ ನಷ್ಟಕ್ಕೆ ಕೂಡಲೇ ಪರಿಹಾರವನ್ನು ಬಿಡುಗಡೆ...

ಚಿಕ್ಕಬಳ್ಳಾಪುರ | ಮಂತ್ರಾಲಯದಲ್ಲಿ ಡಾ.ಕೈವಾರ ಶ್ರೀನಿವಾಸ್‌ರವರಿಗೆ ಕನ್ನಡಸಿರಿ ಪ್ರಶಸ್ತಿ ಪ್ರದಾನ

ಮಂತ್ರಾಲಯದ ಸದ್ಗುರು ರಾಘವೇಂದ್ರ ಸ್ವಾಮಿ ಮಠದಲ್ಲಿ ನಡೆದ ಪ್ರಪ್ರಥಮ ಅಂತಾರಾಜ್ಯ ಕನ್ನಡ...

ಕೋಲಾರ | ರಸ್ತೆ ವಿಸ್ತರಣೆಗೆ ಕಾನೂನು ಬಾಹಿರವಾಗಿ ಜಾಗ ಅತಿಕ್ರಮಣ; ಕುರ್ಕಿ ರಾಜೇಶ್ವರಿ ಆರೋಪ

ಕೋಲಾರ ತಾಲೂಕಿನ ನರಸಾಪುರ ಗ್ರಾಮ ಠಾಣಾ ವ್ಯಾಪ್ತಿಯಲ್ಲಿ ರಸ್ತೆ ವಿಸ್ತರಣೆ ಕಾಮಗಾರಿಗೆ...

ವಿಜಯಪುರ | ಬಿಜೆಪಿ ಮುಖಂಡ ರವೀಂದ್ರ ಲೋಣಿ ಮಾತಿಗೆ, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ತಿರುಗೇಟು

ನಾಗಠಾಣ ಮೀಸಲು ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಆಡಳಿತ ಅವಧಿಯಲ್ಲಿ ಅಭಿವೃದ್ಧಿ ಆಗಿಲ್ಲ....

Download Eedina App Android / iOS

X