ಬಾಲಕಿ ಮೇಲೆ ಅತ್ಯಾಚಾರ | ಅನಧಿಕೃತವಾಗಿ ನಿರ್ಮಾಣ ಮಾಡಿದ್ದ ಶಾಲೆ ಬಂದ್

Date:

Advertisements

ರಾಜಧಾನಿ ಬೆಂಗಳೂರಿನ ಖಾಸಗಿ ಶಾಲೆಯೊಂದರಲ್ಲಿ 10 ವರ್ಷದ ಬಾಲಕಿ ಮೇಲೆ ಪ್ರಾಂಶುಪಾಲ ಅತ್ಯಾಚಾರ ಎಸಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಕ್ಷೇತ್ರ ಶಿಕ್ಷಣಾಧಿಕಾರಿ ಆದೇಶದ ಮೇರೆಗೆ ಶಾಲೆ ಬಂದ್ ಮಾಡಲಾಗಿದೆ.

ಆರೋಪಿ ಪ್ರಾಂಶುಪಾಲ ಲ್ಯಾಂಬರ್ಟ್ ಪುಷ್ಪರಾಜ್‌ ​ಕೋರಮಂಗಲದಲ್ಲಿ ಶಾಲೆ ಕಟ್ಟಲು ಅನುಮತಿ ಪಡೆದಿದ್ದನು. ಆದರೆ, ಅನಧಿಕೃತವಾಗಿ ಬೆಂಗಳೂರಿನ ವರ್ತೂರು ಸಮೀಪ ಶಾಲೆ ನಿರ್ಮಾಣ ಮಾಡಿದ್ದಾನೆ.

ಅನಧಿಕೃತವಾಗಿ ಶಾಲೆ ನಿರ್ಮಾಣ ಮಾಡಿದ ಹಿನ್ನೆಲೆ, ಕ್ಷೇತ್ರ ಶಿಕ್ಷಣಾಧಿಕಾರಿ ಶಾಲೆ ಬಂದ್ ಮಾಡುವಂತೆ ಆದೇಶಿಸಿದ್ದಾರೆ. ಇದರಿಂದ 140ಕ್ಕೂ ಹೆಚ್ಚಿನ ಮಕ್ಕಳ ಮುಂದಿನ ಶಿಕ್ಷಣದ ಭವಿಷ್ಯ ಅತಂತ್ರವಾಗಿದೆ.

Advertisements

“ಮಕ್ಕಳ ಮುಂದಿನ ಶಿಕ್ಷಣದ ಭವಿಷ್ಯಕ್ಕೆ ಯಾವುದೇ ತೊಂದರೆ ಉಂಟಾಗಬಾರದು. ಹಾಗಾಗಿ, ಪಾಲಕರು ಹೇಳಿದ ಶಾಲೆಯಲ್ಲಿ ಸರ್ಕಾರದಿಂದ ದರ ನಿಗದಿ ಮಾಡಿ ಸೀಟ್‌ ವ್ಯವಸ್ಥೆ ಮಾಡಲಾಗುವುದು” ಎಂದು ಅಧಿಕಾರಿಗಳು ಭರವಸೆ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕರಾಳ ಶನಿವಾರ | ರಾಜ್ಯದಲ್ಲಿ ಅಪಘಾತಗಳಿಂದ 37 ಸಾವು ; ಎಡಿಜಿಪಿ ಟ್ವೀಟ್

ಏನಿದು ಪ್ರಕರಣ?

ನಗರದ ಖಾಸಗಿ ಶಾಲೆಯಲ್ಲಿ 2ನೇ ತರಗತಿ ಓದುತ್ತಿದ್ದ 10 ವರ್ಷದ ಬಾಲಕಿಯನ್ನು ಶಾಲಾ ಪ್ರಾಂಶುಪಾಲ ಲ್ಯಾಂಬರ್ಟ್ ಪುಷ್ಪರಾಜ್‌ (65) ಮನೆಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದ ಘಟನೆ ಬೆಂಗಳೂರಿನಲ್ಲಿ ನಡೆದಿತ್ತು.

ಬೆಂಗಳೂರಿನ ವರ್ತೂರು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಶಾಲಾ ಪ್ರಾಂಶುಪಾಲ ಲ್ಯಾಂಬರ್ಟ್ ಪುಷ್ಪರಾಜ್‌ನನ್ನು ಪೊಲೀಸರು ಬಂಧಿಸಿದ್ದಾರೆ.

ಬಾಲಕಿ ನರ ದೌರ್ಬಲ್ಯ ಖಾಯಿಲೆಯಿಂದ ಬಳಲುತ್ತಿದ್ದಳು. ಆಗಸ್ಟ್ 3ರ ಬೆಳಗ್ಗೆ 8.30ಕ್ಕೆ ಬಾಲಕಿ ಶಾಲೆಗೆ ತೆರಳಿದ್ದಾಳೆ. 11.30ಕ್ಕೆ ಶಾಲೆಯಿಂದ ತನ್ನ ಕೊಠಡಿಗೆ ಕರೆದೊಯ್ದ ಪ್ರಾಂಶುಪಾಲ‌‌ ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಐಸ್‌ಕ್ರೀಂ ಕೊಟ್ಟು ಕಳುಹಿಸಿದ್ದನು.

ಮಧ್ಯಾಹ್ನ 3.30ಕ್ಕೆ ಶಾಲೆಯಿಂದ ಮನೆಗೆ ವಾಪಸ್ಸಾಗಿದ್ದ ಬಾಲಕಿ, ತಾಯಿಗೆ ಹೊಟ್ಟೆ ನೋವು ಎಂದು ಹೇಳಿದ್ದಳು. ಸ್ನಾನ ಮಾಡಿಸಿ ಕರೆತರುವಾಗ ರಕ್ತದ ಕಲೆಗಳು ಕಂಡುಬಂದಿದೆ. ಇದೇ ವಿಚಾರವಾಗಿ ಮಗುವನ್ನು ತಾಯಿ ಕೇಳಿದಾಗ ನಡೆದ ಘಟನೆ ಬಗ್ಗೆ ವಿವರಿಸಿದ್ದಾಳೆ.

ಈ ಘಟನೆ ಸಂಬಂಧ ಬಾಲಕಿ ತಾಯಿ ವರ್ತೂರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆರೋಪಿ ವಿರುದ್ದ ಪೋಕ್ಸೋ ಪ್ರಕರಣ ದಾಖಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

Download Eedina App Android / iOS

X