ರಾಯಚೂರು | ಸೈಬರ್ ವಂಚನೆ, ಜೂಜಾಟ, ವ್ಯಸನದ ವಿರುದ್ಧ ಸಾಲಿಡಾರಿಟಿ ಜಾಗೃತಿ ಅಭಿಯಾನ : ಸೈಯದ್ ತನ್ವೀರ್

Date:

Advertisements

ಯುವ ಪೀಳಿಗೆಯನ್ನು ಸೈಬರ್ ವಂಚನೆ, ಆನ್‌ಲೈನ್ ಜೂಜಾಟ ಹಾಗೂ ಗೇಮಿಂಗ್ ವ್ಯಸನದ ದುಷ್ಪರಿಣಾಮಗಳಿಂದ ರಕ್ಷಿಸುವ ಉದ್ದೇಶದಿಂದ ಸೆಪ್ಟೆಂಬರ್ 15 ರವರಗೆ ಸಾಲಿಡಾರಿಟಿ ಯೂತ್ ಮೂವ್ಮೆಂಟ್ ಸಂಘಟನೆ ವತಿಯಿಂದ ರಾಜ್ಯಾದ್ಯಂತ ಜಾಗೃತಿ ಅಭಿಯಾನವನ್ನು ಆರಂಭಿಸಲಾಗಿದೆ ಎಂದು ಸಂಘಟನೆಯ ವಿಜಯನಗರ ಜಿಲ್ಲಾಧ್ಯಕ್ಷ ಸೈಯದ್ ತನ್ವೀರ್ ಹೇಳಿದರು.

ನಗರದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿ, ಯುವಕರು ಸೈಬರ್ ವಂಚನೆ, ಆನ್‌ಲೈನ್ ಜೂಜಾಟ, ಬೆಟ್ಟಿಂಗ್ ಹಾಗೂ ಗೇಮಿಂಗ್ ವ್ಯಸನದಿಂದ ಹೆಚ್ಚುತ್ತಿರುವ ಅಪಾಯಗಳ ಆತಂಕಕ್ಕೆ ಕಾರಣವಾಗಿದೆ. ಇತ್ತೀಚಿನ ದಿನಗಳಲ್ಲಿ ಇವು ಕೇವಲ ಮನರಂಜನೆ ಎಂಬ ನೆಪದಲ್ಲಿ ಪ್ರವೇಶಿಸಿ, ಜೀವನವನ್ನು ಹಾಳುಮಾಡುವುದು, ಕುಟುಂಬದ ಉಳಿತಾಯವನ್ನು ನಾಶಮಾಡುವುದು, ಜನರನ್ನು ಸಾಲದ ಬಲೆಗೆ ಸಿಲುಕಿಸುವುದು ಹಾಗೂ ಆತ್ಮಹತ್ಯೆಗಳ ಮಟ್ಟಿಗೆ ಕರೆದೊಯ್ಯುತ್ತಿರುವುದು ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಜಾಗೃತಿ ಅಭಿಯಾನವನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಹೇಳಿದರು.

ಅಭಿಯಾನದ ಅಂಗವಾಗಿ ಜಾಗೃತಿ ಭಾಷಣಗಳು, ಪೋಸ್ಟರ್‌ಗಳ ಪ್ರದರ್ಶನ, ಸಾಮಾಜಿಕ ಮಾಧ್ಯಮ ಸವಾಲು, ಜಿಲ್ಲಾ ಮಟ್ಟದ ಬೀದಿ ನಾಟಕಗಳು, ವಿಚಾರ ಸಂಕಿರಣಗಳು ಹಾಗೂ ರ್ಯಾಲಿಗಳ ಮೂಲಕ ಸಂದೇಶ ಹಂಚಲಾಗುವುದು ಹಾಗೂ ಅಭಿಯಾನದ ಮೂಲಕ ಜಿಲ್ಲಾಧಿಕಾರಿ ಮತ್ತು ತಹಶೀಲ್ದಾರರಿಗೆ ಮನವಿ ಪತ್ರ ಸಲ್ಲಿಸಿ ಸರಕಾರಕ್ಕೆ ಒತ್ತಾಯಿಸಲಾಗುವುದು ಎಂದರು.

1000175236

ವ್ಯಸನ ಸಮಸ್ಯೆ ಕೇವಲ ವ್ಯಕ್ತಿಗಷ್ಟೇ ಸೀಮಿತವಾಗಿರುವುದಿಲ್ಲ; ಅದು ಕುಟುಂಬ, ಸಮಾಜ ಮತ್ತು ರಾಷ್ಟ್ರದ ಭವಿಷ್ಯದ ಮೇಲೆಯೂ ಪರಿಣಾಮ ಬೀರುತ್ತದೆ. ಯುವ ಸಮುದಾಯದ ಭವಿಷ್ಯವನ್ನು ಗಟ್ಟಿಗೊಳಿಸಲು ಸಮಾಜ ಸುಧಾರಕ ಸಂಘಟನೆಗಳು ಹಾಗೂ ಯುವ ಸಂಘಟನೆಗಳು ಕೈಜೋಡಿಸಿ ನಡೆಯಲಿರುವ ಅಭಿಯಾನಕ್ಕೆ ಎಲ್ಲರ ಸಹಕಾರ ಅಗತ್ಯವಿದೆ ಎಂದು ಸಾಲಿಡಾರಿಟಿ ಯೂತ್ ಮೂವ್ಮೆಂಟ್ ಕರೆ ನೀಡಿದೆ ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಬಾಣಂತಿ, ಮಗು ಸಾವು

Advertisements

ಈ ವೇಳೆ ರಾಯಚೂರು ಜಿಲ್ಲಾಧ್ಯಕ್ಷ ಡಾ. ವಾಸೀಮ್ ಅಹ್ಮದ್,
ಜಿಲ್ಲಾ ಕಾರ್ಯದರ್ಶಿ ಸಾದ್ ಮನಿಯಾರ್, ಸ್ಥಾನೀಯ ಅಧ್ಯಕ್ಷರು ಓವೈಸ ಅಹ್ಮದ್ ಸಜ್ಜಾದ, ಸಿಂಧನೂರು ಸ್ಥಾನೀಯ ಅಧ್ಯಕ್ಷರು ಅಬುಲೈಸ ನಾಯ್ಕ ,ಮೋಹಮ್ಮದ್ ನಾಸಿರ್, ಅನ್ಸರ್ ಖತೀಬ್, ಇನ್ನಿತರರು ಹಾಜರಿದ್ದರು.







ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ನೂತನ ವಿದ್ಯಾರ್ಥಿನಿಲಯ ನಿರ್ಮಾಣ : ಸಚಿವರಿಂದ ಶಂಕುಸ್ಥಾಪನೆ

ತುಮಕೂರು ನಗರದ ರೈಲ್ವೆ ನಿಲ್ದಾಣ ರಸ್ತೆಯಲ್ಲಿ ಶ್ರೀ ಡಿ. ದೇವರಾಜ ಅರಸು...

ಗದಗ | ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ ( ಕಭೀ) ಕಾರ್ಯಕ್ರಮದಡಿಯಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ...

ಉಡುಪಿ‌ | ಹುಡುಗಿಯ ವಿಚಾರಕ್ಕೆ ಜಗಳ, ಕೊಲೆಯಲ್ಲಿ ಅಂತ್ಯ, ಆರೋಪಿಯ ಬಂಧನ

ಉಡುಪಿ‌ ಜಿಲ್ಲೆಯ ಕಾರ್ಕಳದ ಕುಂಟಲ್ಪಾಡಿಯಲ್ಲಿ ಮದ್ಯರಾತ್ರಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ...

ವಿಜಯಪುರ ಬಿಸಿಎಂ ವಸತಿನಿಲಯಕ್ಕೆ ಅಧಿಕಾರಿಗಳ ಭೇಟಿ: ಸಮಸ್ಯೆ ಬಗೆಹರಿಸುವ ಭರವಸೆ

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡದ ಬಿಸಿಎಂ ವಸತಿನಿಲಯಕ್ಕೆ ಉಪತಹಶೀಲ್ದಾರ್ ಎನ್...

Download Eedina App Android / iOS

X