ವಿಜಯಪುರ ಬಿಸಿಎಂ ವಸತಿನಿಲಯಕ್ಕೆ ಅಧಿಕಾರಿಗಳ ಭೇಟಿ: ಸಮಸ್ಯೆ ಬಗೆಹರಿಸುವ ಭರವಸೆ

Date:

Advertisements

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡದ ಬಿಸಿಎಂ ವಸತಿನಿಲಯಕ್ಕೆ ಉಪತಹಶೀಲ್ದಾರ್ ಎನ್ ಬಿ ದೊರೆ, ಕಂದಾಯ ನಿರೀಕ್ಷ ವಿ ವಿ ಅಂಬಿಗೇರ ಭೇಟಿ ನೀಡಿ ನಿಲಯದ ವ್ಯವಸ್ಥೆ ಬಗ್ಗೆ ಪರಿಶೀಲನೆ ನಡೆಸಿದರು.

ದಿಢೀರ್ ಭೇಟಿ ನೀಡಿದ ಅಧಿಕಾರಿಗಳು ಕಿಟ್, ತಿಂಡಿ, ಊಟ ಸ್ವಚ್ಛತೆ ಕುರಿತು ಮಕ್ಕಳಿಂದ ಮಾಹಿತಿ ಪಡೆದುಕೊಂಡರು. ಅಡುಗೆಯವರೊಂದಿಗೆ ಚರ್ಚಿಸಿದ ಅವರು, “ನಿಲಯದ ಮಕ್ಕಳ ಸುರಕ್ಷತೆ, ಮೆನು ಪಾಲನೆ ಮಾಡಿ ಊಟ, ತಿಂಡಿ ಒದಗಿಸಬೇಕು. ಮಕ್ಕಳನ್ನು ಯಾವುದೇ ಕಾರಣಕ್ಕೂ ನಿಲಯದಿಂದ ಅನಧಿಕೃತವಾಗಿ ಹೊರಗಡೆ ಬಿಡಬೇಡಿ. ಸ್ವಚ್ಛತೆಗೆ ಆದ್ಯತೆ ನೀಡಿ” ಎಂದು ಸೂಚಿಸಿದರು.

ದೂರು ನೀಡಿದ ಮಕ್ಕಳು: “ಆವರಣದಲ್ಲಿ ನಡೆದಾಡಲೂ ಬರದಂತ ಮಳೆಗಾಲದಲ್ಲಿ ನೀರು ನುಗ್ಗುತ್ತದೆ. ಕೆಸರು ಗದ್ದೆಯಲ್ಲೇ ಅಲೆಯಬೇಕಿದೆ. ಚರಂಡಿ ಶುಚಿಗೊಳಿಸಲು ಮುಂದಾಗುತ್ತಿಲ್ಲ” ಎಂದು ಮಕ್ಕಳು ಅಧಿಕಾರಿಗಳ ಮುಂದೆ ಅಳಲು ತೋಡಿಕೊಂಡರು.

Advertisements

ಅದಕ್ಕೆ ಸ್ಪಂದಿಸಿದ ಅಧಿಕಾರಿಗಳು, “ಶೀಘ್ರ ಪಟ್ಟಣ ಪಂಚಾಯಿತಿ ಅಧ್ಯಕ್ಷರು ಮತ್ತು ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿಗಳ ಗಮನಕ್ಕೆ ತಂದು ಶುಚಿಗೊಳಿಸಲು ತಿಳಿಸುತ್ತೇವೆ” ಎಂದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ-ಬಬಲೇಶ್ವರ ಆ.27ರಿಂದ ಎರಡು ಬಸ್ಸುಗಳ ಸೇವೆ ಪ್ರಾರಂಭ

ದಲಿತ ಮುಖಂಡ ಗುಂಡಪ್ಪ ಚಲವಾದಿ ಮಾತನಾಡಿ, “ವಸತಿ ನಿಲಯದ ವಿದ್ಯಾರ್ಥಿಗಳು ತಂದೆ ತಾಯಿಯನ್ನು ಬಿಟ್ಟು, ಓದಲು ಬಂದಿರುತ್ತಾರೆ. ಆದರೆ ವಸತಿ ನಿಲಯದಲ್ಲಿ ಅವರ ಮೂಲಭೂತ ಸಮಸ್ಯೆಗಳ ಆಗರವಾಗಿರುವುದರಿಂದ ಎಷ್ಟೋ ವಿದ್ಯಾರ್ಥಿಗಳು ವಸತಿನಿಲಯ ಬಿಟ್ಟು ಹೋಗಿದ್ದಾರೆ” ಎಂದು ಅಧಿಕಾರಿಗಳ ಗಮನ ಸೆಳೆದರು.

ಈ ವೇಳೆ ವಸತಿನಿಲಯದ ಸಿಬ್ಬಂದಿಗಳಾದ ಶರಣಮ್ಮ ಹುಗ್ಗಿ, ಲಕ್ಕಣ್ಣ ಬಿರಾದಾರ ಹಾಗೂ ಶಿವಪ್ಪ ದೊಡಮನಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಕಾಡುಗೊಲ್ಲರು ಶ್ರೀ ಕೃಷ್ಣನ ಆರಾಧಕರಲ್ಲ : ಬಿ.ದೊಡ್ಡಯ್ಯ

ವಿಶಿಷ್ಟ ಆಚರಣೆ ಸಂಸ್ಕೃತಿಯಲ್ಲಿ ಬುಡಕಟ್ಟು ಎಂದು ಗುರುತಿಸಿಕೊಂಡ ಕಾಡು ಗೊಲ್ಲರು...

ತುಮಕೂರು | ನೂತನ ವಿದ್ಯಾರ್ಥಿನಿಲಯ ನಿರ್ಮಾಣ : ಸಚಿವರಿಂದ ಶಂಕುಸ್ಥಾಪನೆ

ತುಮಕೂರು ನಗರದ ರೈಲ್ವೆ ನಿಲ್ದಾಣ ರಸ್ತೆಯಲ್ಲಿ ಶ್ರೀ ಡಿ. ದೇವರಾಜ ಅರಸು...

ಗದಗ | ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ ( ಕಭೀ) ಕಾರ್ಯಕ್ರಮದಡಿಯಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ...

ಉಡುಪಿ‌ | ಹುಡುಗಿಯ ವಿಚಾರಕ್ಕೆ ಜಗಳ, ಕೊಲೆಯಲ್ಲಿ ಅಂತ್ಯ, ಆರೋಪಿಯ ಬಂಧನ

ಉಡುಪಿ‌ ಜಿಲ್ಲೆಯ ಕಾರ್ಕಳದ ಕುಂಟಲ್ಪಾಡಿಯಲ್ಲಿ ಮದ್ಯರಾತ್ರಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ...

Download Eedina App Android / iOS

X