ಚಿಂತಾಮಣಿ | ಆರು ತಿಂಗಳ ಹಿಂದೆಯೇ ಚಾಲನೆ ಸಿಕ್ಕರೂ ಆಮೆಗತಿಯಲ್ಲಿ ಸಾಗುತ್ತಿರುವ ಚೇಳೂರು ರಸ್ತೆ ಕಾಮಗಾರಿ!

Date:

Advertisements

ರಾಜ್ಯ ಸರ್ಕಾರವು ಹಾಗೂ ಚಿಂತಾಮಣಿ ಶಾಸಕರು, ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಸಿ.ಸುಧಾಕರ್ ಅವರು ಕಳೆದ ಆರು ತಿಂಗಳ ಹಿಂದೆಯೇ ಚಿಂತಾಮಣಿ ಚೇಳೂರು ರಸ್ತೆಯ ರೈಲ್ವೆ ಬ್ರಿಡ್ಜ್ ಯಿಂದ ಚೇಳೂರು ರಸ್ತೆಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದ್ದಾರೆ. ಆದರೆ, ಕಾಮಗಾರಿ ಮಾತ್ರವು ಆಮೆಗತಿಯಲ್ಲಿ ಸಾಗುತ್ತಿರುವ ಆರೋಪ ಕೇಳಿಬಂದಿದೆ.

ಅಧಿಕಾರಿಗಳ ಮತ್ತು ಗುತ್ತಿಗೆದಾರದ ನಿರ್ಲಕ್ಷ್ಯದಿಂದ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿರುವುದಾಗಿ ಸಾರ್ವಜನಿಕರು ಆರೋಪಿಸಿದ್ದಾರೆ. ಇದರಿಂದ ರಸ್ತೆಯಲ್ಲಿ ವಾಹನ ಸಂಚಾರವು ಮತ್ತು ಬಸ್ ಸೇರಿದಂತೆ ಭಾರಿ ಗಾತ್ರದ ವಾಹನ ಸಂಚಾರಕ್ಕೆ ತೀವ್ರ ಸಮಸ್ಯೆ ಉಂಟಾಗಿದೆ.

ಆಮೆಗತಿಯಲ್ಲಿ ಕಾಮಗಾರಿ ಸಾಗುತ್ತಿರುವುದರಿಂದ ರಸ್ತೆಯಲ್ಲಿನ ಧೂಳು, ದ್ವಿಚಕ್ರ ವಾಹನ ಸವಾರರ ಜೀವಕ್ಕೆ ಅಪಾಯ ತಂದೊಡಿಡುತ್ತಿದೆ. ಇವಲ್ಲದೇ, ರಸ್ತೆಯ ಎರಡು ಬದಿಯಲ್ಲಿರುವ ರೈತರ ಜಮೀನುಗಳಲ್ಲಿ ಕಳೆದ ಆರು ತಿಂಗಳಿಂದಲೂ ಕೂಡ ಯಾವುದೇ ಬೆಳೆಗಳನ್ನು ಬೆಳೆದರೂ ಆ ಬೆಳೆಗಳ ಮೇಲೆ ಧೂಳು ತುಂಬಿಕೊಳ್ಳುತ್ತಿದೆ. ಇದರಿಂದಾಗಿ ಲಕ್ಷಾಂತರ ರೂ.ನಷ್ಟ ಕಂಡು ಬರುತ್ತಿರುವುದಾಗಿ ಸ್ಥಳೀಯ ರೈತರು ದೂರುತ್ತಿದ್ದಾರೆ.

chelur kamagari 2

ಅಧಿಕಾರಿಗಳು ಗುತ್ತಿಗೆದಾರರಿಗೆ ಹಲವು ಬಾರೀ ಸೂಚಿಸಿದರೂ ಕೂಡ ಮಳೆಯ ನೆಪವೊಡ್ಡಿ ರಸ್ತೆ ಅಭಿವೃದ್ಧಿಯ ಕಾಮಗಾರಿಯನ್ನು ನಿಧಾನಗತಿಯಲ್ಲಿ ಮಾಡುತ್ತಿರುವುದರಿಂದ ರಸ್ತೆಯ ಸಂಚಾರಕರಿಗೆ ಹಾಗೂ ರಸ್ತೆ ಎರಡು ಬದಿಯಲ್ಲಿರುವ ರೈತರ ಜಮೀನುಗಳಲ್ಲಿ ಬೆಳೆಯುವ ಬೆಳೆಗಳೆಲ್ಲವೂ ಹಾಳಾಗಿ ಹೋಗುತ್ತಿವೆ ಎಂದು ಸ್ಥಳೀಯರು ತಮ್ಮ ನೋವು ಹಂಚಿಕೊಂಡಿದ್ದಾರೆ.

ಇದನ್ನು ಓದಿದ್ದೀರಾ? ಬಾಗಲಕೋಟೆ | ಸರ್ಕಾರದಿಂದ ಕುರಿಗಾಹಿಗಳ ಹಿತರಕ್ಷಣೆಗೆ ಕಾಯ್ದೆ: ಕುರುಬರ ಪದವೀಧರರ ಸಂಘ ಸ್ವಾಗತ

ಅಧಿಕಾರಿಗಳು ಸಂಬಂಧಪಟ್ಟ ಗುತ್ತಿಗೆದಾರರಿಗೆ ಶೀಘ್ರದಲ್ಲೇ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚಿಸಬೇಕು. ಸಾರ್ವಜನಿಕರಿಗೆ ಮತ್ತು ರೈತರಿಗೆ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಗಮನಕ್ಕೆ ತರಬೇಕು. ನಿರ್ಲಕ್ಷ್ಯ ತೋರುತ್ತಿರುವ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳಬೇಕು. ಸಂಬಂಧಪಟ್ಟ ಕಾಮಗಾರಿಯನ್ನು ಕೂಡಲೆ ಪೂರ್ಣಗೊಳಿಸಿ ಸಮಸ್ಯೆಗಳಿಂದ ಮುಕ್ತಿ ನೀಡುವಂತೆ ಸಾರ್ವಜನಿಕರು ಹಾಗೂ ರೈತರು ಆಗ್ರಹಿಸಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ತಹಸೀಲ್ದಾರ ಕಚೇರಿಗಳಲ್ಲಿ ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ ಆರೋಪ

"ಜಿಲ್ಲೆಯ ಎಲ್ಲಾ ತಾಲೂಕ ತಹಶೀಲ್ದಾರ್ ಕಚೇರಿ ಹಾಗೂ ಹೋಬಳಿಗಳಲ್ಲಿ ವೃಧ್ಯಾಪ್ಯ ವೇತನ,...

ಜನಮನ ಗೆದ್ದ ತುಮಕೂರು ದಸರಾ ಉತ್ಸವ : ಡಾ. ಜಿ.ಪರಮೇಶ್ವರ

 ತುಮಕೂರು ದಸರಾ ಉತ್ಸವವು ನಾಡಿನಾದ್ಯಂತ ಜನರ ಮನಸ್ಸನ್ನು ಗೆಲ್ಲುವ ಮೂಲಕ ಐತಿಹಾಸಿಕ...

ಶಿವಮೊಗ್ಗ | ಪಾಲಿಕೆಗೆ 19 ಗ್ರಾಮಗಳ ಸೇರ್ಪಡೆಗೆ ಸಿದ್ಧತೆ

ಶಿವಮೊಗ್ಗ, ನಿರೀಕ್ಷೆಯಂತೆಯೇ ತುಮಕೂರು ಮತ್ತು ಶಿವಮೊಗ್ಗ ನಗರ ಪಾಲಿಕೆಗಳ ವ್ಯಾಪ್ತಿ ವಿಸ್ತರಣೆಗೆ...

Download Eedina App Android / iOS

X