ಬೀದರ್‌ | ನಿರಂತರ ಮಳೆ : ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಸಚಿವ ಈಶ್ವರ ಖಂಡ್ರೆ ಮನವಿ

Date:

Advertisements

ಬೀದರ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು. ಮಕ್ಕಳು, ವಯೋವೃದ್ಧರ ಸುರಕ್ಷತೆಗಾಗಿ ವಿಶೇಷ ಗಮನ ಹರಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಮನವಿ ಮಾಡಿದ್ದಾರೆ.

ನದಿ, ಹಳ್ಳ, ಕೆರೆಗಳನ್ನು ದಾಟದಂತೆ ಹಾಗೂ ಜಾನುವಾರುಗಳನ್ನು ನದಿ ದಂಡೆ ಅಥವಾ ಹಳ್ಳದ ತಟಕ್ಕೆ ಬಿಡಬಾರದು ಎಂದು ಮನವಿ ಮಾಡಿದ ಅವರು, ʼಅಧಿಕಾರಿಗಳಿಗೆ ಕೂಡ ನಿರ್ದೇಶನ ನೀಡಿದ್ದು, ಅವರು ತಮ್ಮ ತಮ್ಮ ಪ್ರದೇಶಗಳಲ್ಲಿ ಸತತವಾಗಿ ಹಾಜರಿದ್ದು ತುರ್ತು ಪರಿಸ್ಥಿತಿಯನ್ನು ಎದುರಿಸಲು ಸಜ್ಜಾಗಿರಬೇಕುʼ ಎಂದಿದ್ದಾರೆ.

ಸಾರ್ವಜನಿಕರ ಜೀವ ಮತ್ತು ಆಸ್ತಿ ರಕ್ಷಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಸೂಚಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಇತ್ತೀಚೆಗೆ ಔರಾದ್‌, ಕಮಲನಗರ ತಾಲೂಕಿನಲ್ಲಿ ಅಧಿಕ ಮಳೆಯಿಂದ ಅಪಾರ ಹಾನಿ ಉಂಟಾಗಿತ್ತು. ತದನಂತರ ಕೆಲ ದಿನಗಳ ಕಾಲ ಬಿಡುವು ಕೊಟ್ಟ ಮಳೆ ಮಂಗಳವಾರದಿಂದ ಮತ್ತೆ ಆರಂಭವಾಗಿದ್ದು, ಬುಧವಾರ ರಾತ್ರಿಯಿಂದ ಜಿಲ್ಲಾದ್ಯಂತ ಮಳೆ ಅಬ್ಬರ ಮುಂದುವರೆದ ಹಿನ್ನೆಲೆ ಅನೇಕ ಕಡೆ ಕೆರೆ, ಕಟ್ಟೆಗಳು ಉಕ್ಕಿ ಹರಿಯುತ್ತಿವೆ. ಕೆಲವೆಡೆ ಸೇತುವೆ ಮೇಲಿಂದ ನೀರು ಹರಿಯುತ್ತಿದ್ದು ರಸ್ತೆ ಸಂಪರ್ಕ ಕಡಿತವಾಗಿದೆ.

ಇದನ್ನೂ ಓದಿ : ಔರಾದ್ ಸೀಮೆಯ ಕನ್ನಡ | ದನ ಕಾಯೋರು ತಿಂಗಳಿಗೆ ಪಗಾರ್‌ ಎಷ್ಟು ತಕೋತಾರ್‌ ಗೊತ್ತಾ!

ಅಧಿಕ ಮಳೆ ಹಿನ್ನೆಲೆ ಔರಾದ್‌, ಬೀದರ್‌, ಕಮಲನಗರ, ಭಾಲ್ಕಿ, ಹುಲಸೂರ ತಾಲೂಕಿನಲ್ಲಿ ಅಂಗನವಾಡಿ ಹಾಗೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುವಪರಿವರ್ತನೆ ಯಾತ್ರೆ: ಬಾಗಲಕೋಟೆಯಲ್ಲಿ ಚಾಲನೆ

ಯುವಜನರನ್ನು ರಾಜ್ಯದ ಅಭಿವೃದ್ಧಿಯತ್ತ ಚಿತ್ತಹರಿಸಲು, ಪ್ರಜೆಗಳ ಆರೋಗ್ಯ, ಶಿಕ್ಷಣ, ಸಬಲೀಕರಣ, ಉದ್ಯೋಗದ...

ಕೊಪ್ಪಳ | ಪ್ರವಾದಿ ಮಹಮ್ಮದ್‌ ಸಂದೇಶವನ್ನು ನಾವು ಪಾಲನೆ ಮಾಡಬೇಕು: ಲಾಲ್ ಹುಸೇನ್ ಕಂದ್ಗಲ್

'ಖುರಾನ್' ಬರುವ ಪ್ರವಾದಿ ಮಹಮ್ಮದ್‌ ಅವರು ಹೇಳಿದ ಸತ್ಯವನ್ನೇ ಭಾರತೀಯ ಪುರಾಣಗಳು...

ಶಿವಮೊಗ್ಗದ ಸಂಚಾರ ವ್ಯವಸ್ಥೆಯಲ್ಲಿ ಅರಾಜಕತೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಾಗರಿಕರು ಹೈರಾಣು

ಒಮ್ಮೆ ಶಾಂತ, ಶಿಕ್ಷಣ ಹಾಗೂ ಸಂಸ್ಕೃತಿಯ ತಾಣವಾಗಿದ್ದ ಶಿವಮೊಗ್ಗ ನಗರ ಇತ್ತೀಚಿನ...

ತುಮಕೂರು | ಗಾಂಧೀ ತತ್ವಗಳಿಗೆ ವಿಶ್ವ ಮನ್ನಣೆ : ಡಾ. ಜಿ.ಪರಮೇಶ್ವರ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಹಿಂಸಾ ತತ್ವಗಳಿಗೆ ಇಡೀ ವಿಶ್ವದಲ್ಲಿಯೇ ಮನ್ನಣೆ ದೊರೆತಿದೆ...

Download Eedina App Android / iOS

X