ಚಾಮರಾಜನಗರ ಜಿಲ್ಲೆ, ಕೊಳ್ಳೇಗಾಲ ಹಾಗೂ ಹನೂರು ಭಾಗಕ್ಕೆ ಭೇಟಿ ನೀಡಿ ಕೈಗೊಳ್ಳಬೇಕಿರುವ ವಿವಿಧ ಅಭಿವೃದ್ದಿ ಕಾಮಗಾರಿ ಸಂಬಂಧ ಸ್ಥಳ ಪರಿಶೀಲನೆಯನ್ನು ಶಾಸಕ ಎಂ. ಆರ್. ಮಂಜುನಾಥ್ ಹಾಗೂ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ನಡೆಸಿದರು.
ಕೊಳ್ಳೇಗಾಲದ ಮುಡಿಗುಂಡ ನೂತನ ಸೇತುವೆಯನ್ನು ₹15 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡಲು ಸಚಿವ ಸಂಪುಟದಲ್ಲಿ ಅನುಮೋದನೆ ದೊರೆತಿದೆ. ಶೀಘ್ರದಲ್ಲೇ ಈ ಸಂಬಂಧ ಸರ್ಕಾರದ ಅಂದಾಜು ಪರಿಶೀಲನಾ ಸಮಿತಿಯ ಮುಂದೆ ಮಂಡನೆಯಾಗಲಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ವಿವರವಾಗಿ ಪರಿಶೀಲಿಸಿ ಅಧಿಕಾರಿಗಳೊಂದಿಗೆ ಚರ್ಚಿಸಿದರು. ಮುಂದಿನ ಪ್ರಕ್ರಿಯೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಸೂಚನೆ ನೀಡಿದರು.
ಹನೂರಿನಲ್ಲಿ ₹8.60 ಕೋಟಿ ರೂಪಾಯಿ ವೆಚ್ಚದಲ್ಲಿ ಪ್ರಜಾಸೌಧ ನಿರ್ಮಾಣ ಮಾಡಲು ಆಡಳಿತಾತ್ಮಕ ಅನುಮೋದನೆ ದೊರೆತಿರುವ ಹಿನ್ನಲೆಯಲ್ಲಿ ಶಾಸಕ ಎಂ. ಆರ್. ಮಂಜುನಾಥ್ ಅವರೊಂದಿಗೆ ಸ್ಥಳಕ್ಕೆ ಭೇಟಿನೀಡಿ ಪರಿಶೀಲಿಸಿದರು. ಕಾಮಗಾರಿ ಅನುಷ್ಠಾನ ಸಂಭಂದ ವಹಿಸಬೇಕಿರುವ ಕ್ರಮಗಳನ್ನು ತ್ವರಿತವಾಗಿ ಕೈಗೊಳ್ಳುವಂತೆ ತಿಳಿಸಿದರು.
ಹನೂರು ತಾಲ್ಲೂಕಿನ ಬೈರನತ್ತ, ಬಿ.ಎಂ. ಹಳ್ಳಿ ಮಾರ್ಗ ಮಧ್ಯದ ಸಂಪರ್ಕವಾದ ತಟ್ಟೆಹಳ್ಳ ಸೇತುವೆಯನ್ನು ₹2.94 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡಲಿರುವ ಹಿನ್ನಲೆಯಲ್ಲಿ ಸ್ಥಳ ಪರಿಶೀಲಿಸಿ ಅಗತ್ಯ ಕ್ರಮ ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸುದ್ದಿ ಓದಿದ್ದೀರಾ? ಮೈಸೂರು | ಗೌರಿ ಗಣೇಶ ಹಬ್ಬ; ಸೌಹಾರ್ದತೆ ಸಂದೇಶ ಸಾರಿದ ಹಿಂದೂ, ಮುಸ್ಲಿಂ ಯುವಕರು
ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ಕಿರಣ್ ಕುಮಾರ್, ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ರಮೇಶ್ಕುಮಾರ್ ಇನ್ನೀತರ ಅಧಿಕಾರಿಗಳು ಭೇಟಿ ಸಂದರ್ಭದಲ್ಲಿ ಇದ್ದರು.