ಮಧುಗಿರಿ | ರಾಜಣ್ಣಗೆ ಮತ್ತೆ ಸಚಿವ ಸ್ಥಾನ ನೀಡುವಂತೆ ಯಾದವ ಯುವ ವೇದಿಕೆ ಒತ್ತಾಯ

Date:

Advertisements

 ಶಾಸಕ  ಕೆ.ಎನ್. ರಾಜಣ್ಣನವರನ್ನು ಯಾವುದೇ ತಿಳುವಳಿಕೆ ನೀಡದೆ ಕಾಂಗ್ರೆಸ್ ಹೈ ಕಮಾಂಡ್ ಏಕಾಏಕಿ ಸಂಪುಟದಿಂದ ವಜಾ ಮಾಡಿರುವುದು ಸರಿಯಾದ ಕ್ರಮವಲ್ಲ ಎಂದು ಸಿದ್ದಾಪುರ ಗ್ರಾ.ಪಂ ಮಾಜಿ ಅಧ್ಯಕ್ಷ, ಸದಸ್ಯ ಸಿದ್ದಾಪುರ ವೀರಣ್ಣ ತಿಳಿಸಿದರು. 

ಮಧುಗಿರಿ ಪಟ್ಟಣದ ಕನ್ನಡ ಭವನದಲ್ಲಿರುವ ಕೆ.ಎನ್. ರಾಜಣ್ಣನವರ ಸಭಾಂಗಣದಲ್ಲಿ ಮಂಗಳವಾರ ತಾಲೂಕು ಯಾದವ ಯುವ ವೇದಿಕೆಯ ವತಿಯಿಂದ ಏರ್ಪಡಿಸಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ತಳ ಸಮುದಾಯದ ಜನರನ್ನು ಗುರುತಿಸಿ ರಾಜಕೀಯ ಅಧಿಕಾರ ನೀಡುವುದರಲ್ಲಿ ರಾಜಣ್ಣನವರು ಪ್ರಮುಖರು. ಈ ಹಿಂದೆ ಜಿಲ್ಲೆಯಲ್ಲಿ ರಾಜಣ್ಣನವರು ಕಾಂಗ್ರೆಸ್ ನಲ್ಲಿ ಇಲ್ಲದ ಸಂದರ್ಭದಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಕೇವಲ ಒಂದು ಸ್ಥಾನ ಮಾತ್ರ ಗಳಿಸಿತ್ತು. ಅವರು ಜಿಲ್ಲೆಯ ಶಕ್ತಿಯಾಗಿದ್ದು, ಅವರನ್ನು ಮತ್ತೆ ಶೀಘ್ರವಾಗಿ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಬೇಕು ಇಲ್ಲದಿದ್ದರೆ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ತೀವ್ರವಾಗಿ ನೆಲ ಕಚ್ಚುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದರು.

ಉಪನ್ಯಾಸಕ ಚಿತ್ತಯ್ಯ ಮಾತನಾಡಿ ಕೆ.ಎನ್. ರಾಜಣ್ಣನವರನ್ನು  ಷಡ್ಯಂತ್ರ ರೂಪಿಸಿ ಸಚಿವ ಸ್ಥಾನದಿಂದ ವಜಾ ಮಾಡಿರುವುದು ಖಂಡನೀಯ. ಕಾಂಗ್ರೆಸ್ ಹೈ ಕಮಾಂಡ್ ಇದರ ಬಗ್ಗೆ ಪರಿಶೀಲಿಸಿ ಅವರನ್ನು ಮತ್ತೆ ಸಂಪುಟಕ್ಕೆ ಮರು ಸೇರ್ಪಡೆ ಮಾಡಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ತಾಲೂಕಿನ ಗೊಲ್ಲ ಸಮುದಾಯದ ವತಿಯಿಂದ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು

ಕೆಡಿಪಿ ಸದಸ್ಯೆ  ಜಯಲಕ್ಷ್ಮಿ ಮಾತನಾಡಿ ರಾಜಣ್ಣನವರನ್ನು ಯಾವ ಕಾರಣದಿಂದ ಸಚಿವ ಸ್ಥಾನದಿಂದ ವಜಾ ಮಾಡಲಾಗಿದೆ ಎಂದು ಜಗತ್ತಿಗೆ ತಿಳಿಸಬೇಕು. ವಜಾಗೊಳಿಸಿರುವ ಬಗ್ಗೆ ಯಾವುದೇ ಶಾಸಕರು, ಸಂಸದರು ಏಕೆ ಪ್ರಶ್ನಿಸುತ್ತಿಲ್ಲ ಎಂದರು.

 ಸಿಂಡಿಕೇಟ್ ಸದಸ್ಯರಾದ ಶಿವಣ್ಣ ಪದವೀಧರ ವೇದಿಕೆ ಅಧ್ಯಕ್ಷರಾದ ದಯಾನಂದ ಪುಲಮಾಚಿ ಚಿತ್ತಪ್ಪ, ಶಿವಾನಂದ್, ಶಿವರಾಜು, ಗೋವಿಂದರಾಜು, ರವಿ, ಕುಮಾರ್, ಸುಂದರೇಶ್, ಅಂಬರೀಶ್, ಶಿವಲಿಂಗಯ್ಯ, ರಘು, ನಾಗೇಶ್ ಹಾಗೂ ತಾಲ್ಲೂಕಿನ ಯಲ್ಲಾ ಗೊಲ್ಲರಹಟ್ಟಿ ಇಂದ ಆಗಮಿಸಿದಂತಹ ಯುವಕರು ಮತ್ತು ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗದ ಸಂಚಾರ ವ್ಯವಸ್ಥೆಯಲ್ಲಿ ಅರಾಜಕತೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಾಗರಿಕರು ಹೈರಾಣು

ಒಮ್ಮೆ ಶಾಂತ, ಶಿಕ್ಷಣ ಹಾಗೂ ಸಂಸ್ಕೃತಿಯ ತಾಣವಾಗಿದ್ದ ಶಿವಮೊಗ್ಗ ನಗರ ಇತ್ತೀಚಿನ...

ತುಮಕೂರು | ಗಾಂಧೀ ತತ್ವಗಳಿಗೆ ವಿಶ್ವ ಮನ್ನಣೆ : ಡಾ. ಜಿ.ಪರಮೇಶ್ವರ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಹಿಂಸಾ ತತ್ವಗಳಿಗೆ ಇಡೀ ವಿಶ್ವದಲ್ಲಿಯೇ ಮನ್ನಣೆ ದೊರೆತಿದೆ...

ಶಿವಮೊಗ್ಗ | ಸತ್ಯ – ಅಹಿಂಸೆ ಪ್ರಬಲ ಅಸ್ತ್ರಗಳು : ಡಾ. ಟಿ. ಅವಿನಾಶ್

ಶಿವಮೊಗ್ಗ, ಭಾರತ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಡಲು ಮಹಾತ್ಮ ಗಾಂಧೀಜಿಯವರು ಬಳಸಿದ ಅಸ್ತ್ರಗಳೆಂದರೆ...

ಉಡುಪಿ | ಕಾರ್ಕಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಹಾತ್ಮಾ ಗಾಂಧೀಜಿ ಹಾಗೂ ಶಾಸ್ತ್ರಿ ಜಯಂತಿ ಆಚರಣೆ

ದೇಶದಲ್ಲಿ ಸಮಾನತೆಯನ್ನು ಬಯಸಿದ್ದೇ ಗಾಂಧೀಜಿಯವರ ಹತ್ಯೆಗೆ ಕಾರಣವಾಯಿತು, ಶೂದ್ರ ಮತ್ತು ಅತ್ಯಂತ...

Download Eedina App Android / iOS

X