ಮರಾಠ ಮೀಸಲಾತಿ ನೀಡಿ ಅಥವಾ ನಮಗೆ ಗುಂಡಿಕ್ಕಿ ಕೊಲ್ಲಿ: ಜಾರಂಗೆ ಉಪವಾಸಕ್ಕೆ ಬೆಂಬಲ ವ್ಯಕ್ತಪಡಿಸಿದ ರೈತ

Date:

Advertisements

“ನಮಗೆ ಮೀಸಲಾತಿ ನೀಡಲು ಸಾಧ್ಯವಾಗದಿದ್ದರೆ, ನಮ್ಮನ್ನು ಗುಂಡಿಕ್ಕಿ ಕೊಲ್ಲಿರಿ” ಎಂದು ಶುಕ್ರವಾರ ಮರಾಠ ಮೀಸಲಾತಿ ಪರ ಹೋರಾಟಗಾರ ಮನೋಜ್ ಜಾರಂಗೆ ಅವರಿಗೆ ಬೆಂಬಲ ವ್ಯಕ್ತಪಡಿಸಿ ಮಾತನಾಡಿದ ನಾಂದೇಡ್ ರೈತ ಮಾರುತಿ ಪಾಟೀಲ್ ಹೇಳಿದ್ದಾರೆ.

ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ ಬಳಿಯ ಐತಿಹಾಸಿಕ ಆಜಾದ್ ಮೈದಾನದಲ್ಲಿ ಮರಾಠ ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆ ನಡೆಯುತ್ತಿದ್ದು, “ಈ ಚಳವಳಿಯಲ್ಲಿ ಗೆಲ್ಲುವವರೆಗೂ ನಾವು ಇಲ್ಲಿಂದ ಹೊರಡುವುದಿಲ್ಲ” ಎಂದು ಪಾಟೀಲ್ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಮರಾಠ ಸಮುದಾಯದ ಮೀಸಲಾತಿಗೆ ಸಿಎಂ ಏಕನಾಥ್ ಶಿಂಧೆ ಸಮ್ಮತಿ

“ನಮಗೆ ಮೀಸಲಾತಿ ನೀಡಲು ಸಾಧ್ಯವಾಗದಿದ್ದರೆ, ನಾವು ಬದುಕಲು ಬಯಸುವುದಿಲ್ಲ. ಸರ್ಕಾರವು ಕಂಡ ತಕ್ಷಣ ಗುಂಡಿಕ್ಕಿ ನಮ್ಮನ್ನು ಕೊಲ್ಲಬೇಕು. ನಮ್ಮ ಜೀವನ ಎಷ್ಟು ಕಷ್ಟಕರವಾಗಿದೆ ಎಂದು ಸರ್ಕಾರಕ್ಕೆ ತಿಳಿದಿಲ್ಲ” ಎಂದು 40 ವರ್ಷದ ಪಾಟೀಲ್ ಗುರುವಾರ ರಾತ್ರಿ ಆಜಾದ್ ಮೈದಾನದಲ್ಲಿ ತಿಳಿಸಿರುವುದಾಗಿ ಪಿಟಿಐ ವರದಿ ಮಾಡಿದೆ.

“ಆಂದೋಲನದಲ್ಲಿ ಭಾಗವಹಿಸುವವರನ್ನು ರಕ್ಷಿಸಲು ತಾತ್ಕಾಲಿಕ ರಚನೆಯನ್ನು ಒದಗಿಸುವ ಬಗ್ಗೆ ಸರ್ಕಾರ ತಲೆಕೆಡಿಸಿಕೊಳ್ಳದೆ ಇರುವುದು ನಾಚಿಕೆಗೇಡಿನ ಸಂಗತಿ. ಎಲ್ಲರೂ ಒದ್ದೆಯಾಗಿದ್ದಾರೆ, ನೆಲವು ಕೆಸರಿನಿಂದ ತುಂಬಿದೆ. ಈ ಕಾರ್ಯಕ್ರಮವನ್ನು ಇತರೆ ಪ್ರಮುಖ ನಾಯಕರು ನಡೆಸಿದ್ದರೆ, ಸರ್ಕಾರವೇ ಪೆಂಡಾಲ್, ಶೆಡ್‌ಗಳನ್ನು ನಿರ್ಮಿಸುತ್ತಿತ್ತು” ಎಂದು ಮೋಹಾ ಗ್ರಾಮದ ನಿವಾಸಿ ಉದ್ಧವ್ ನಿಂಬಾಳ್ಕರ್ ಹೇಳಿದ್ದಾರೆ.

ಒಂದೇ ದಿನದಲ್ಲಿ ಸರ್ಕಾರ ಒಬಿಸಿ ಕೋಟಾದಿಂದ ಮರಾಠರಿಗೆ ಮೀಸಲಾತಿ ನೀಡಬೇಕು ಎಂಬ ಆಗ್ರಹ ಕೇಳಿಬಂದಿದೆ. “ಈ ಆಂದೋಲನ ಎಷ್ಟು ದೊಡ್ಡದಾಗುತ್ತದೆ ಎಂದು ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್‌ಗೆ ತಿಳಿದಿಲ್ಲ” ಎಂದು ನಿಂಬಾಳ್ಕರ್ ತಿಳಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ 1% ಪ್ರತ್ಯೇಕ ಮೀಸಲಾತಿಗೆ ಆಗ್ರಹ; ದೆಹಲಿಯಲ್ಲಿ ಪ್ರತಿಭಟನೆ

ಕರ್ನಾಟಕ ಸರ್ಕಾರವು ಒಳಮೀಸಲಾತಿಯನ್ನು ಜಾರಿಗೊಳಿಸಿದೆ. ಆದರೆ, ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ 1%...

‘ನನ್ನ ಗಂಡನನ್ನು ಭೇಟಿಯಾಗುವ ಅರ್ಹತೆ ನನಗಿಲ್ಲವೇ?’: ರಾಷ್ಟ್ರಪತಿ, ಮೋದಿಗೆ ಪತ್ರ ಬರೆದ ವಾಂಗ್ಚುಕ್ ಪತ್ನಿ

ಲಡಾಖ್‌ಗೆ ರಾಜ್ಯ ಸ್ಥಾನಮಾನ ನೀಡಬೇಕು ಎಂಬುದು ಸೇರಿದಂತೆ ಹಲವು ಬೇಡಿಕೆಗಳನ್ನು ಇಟ್ಟುಕೊಂಡು...

ಯುವಜನರಿಗಾಗಿ ಪ್ರಾಣವನ್ನೇ ತ್ಯಾಗ ಮಾಡುತ್ತೇನೆ: ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ

ಸುಡುವ ಬಿಸಿಲಿನಲ್ಲಿ ಕುರಿತು ಯುವಜನರು ತಮ್ಮ ಹಕ್ಕೊತ್ತಾಯಗಳ ಈಡೇರಿಕೆಗಾಗಿ ಹೋರಾಟ ನಡೆಸುತ್ತಿದ್ದಾರೆ....

ದೆಹಲಿ ಶಾಲೆಗಳಲ್ಲಿ RSS ಬೋಧನೆ: ಮಕ್ಕಳ ಎಳೆ ಮನಸ್ಸಲ್ಲಿ ಕೋಮುದ್ವೇಷ ಬಿತ್ತುವ ಹುನ್ನಾರ!

ಕೋಮುವಾದಿ, ಕೋಮುದ್ವೇಷಿ, ಸಮಾಜಘಾತುಕ ಸಂಘಟನೆಯ ಬಗ್ಗೆ ಶಾಲೆಗಳಲ್ಲಿ ಬೋಧಿಸುವುದು ಎಳೆ ಮನಸ್ಸುಗಳಲ್ಲಿ...

Download Eedina App Android / iOS

X