ಮುಂಡಗೋಡು | ಸಾಲ ತೀರಿಸುವ ನೆಪದಲ್ಲಿ ಜಮೀನು ಕಬಳಿಕೆ ಆರೋಪ; ಪ್ರಕರಣ ದಾಖಲು

Date:

Advertisements

ಸಾಲ ತೀರಿಸಲು ಸಹಾಯ ಮಾಡುವ ನೆಪದಲ್ಲಿ 21 ಲಕ್ಷ ರೂ. ನೀಡಿ, ಕೊನೆಗೆ ಸಹಾಯ ಕೇಳಿಕೊಂಡು ಬಂದವರ ಪೂರ್ತಿ ಆಸ್ತಿಯನ್ನೇ ಕಬಳಿಸಿರುವ ವಂಚನೆ ಪ್ರಕರಣವು ಮುಂಡಗೋಡಿನಲ್ಲಿ ಬೆಳಕಿಗೆ ಬಂದಿದೆ.

ಮುಂಡುಗೋಡ ಪಟ್ಟಣದ ಜಮೀರ್ ಅಹ್ಮದ್ ದರ್ಗಾವಾಲೆ ಎಂಬಾತ ತನ್ನ ಸಹಚರರೊಂದಿಗೆ ಸೇರಿ ಹಳೂರ ಓಣಿಯ ನಿವಾಸಿಗಳಾದ ರಾಜೇಶ್ ಚಿದಾನಂದ ಹುಲಿಯಪ್ಪನವರ ಹಾಗೂ ಅವರ ತಮ್ಮ ರಾಹುಲ ಹುಲಿಯಪ್ಪನವರ ಇಬ್ಬರನ್ನು ಅಪಹರಿಸಿ, ಮುಂಡಗೋಡ ತಾಲೂಕಿನ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಬಲವಂತವಾಗಿ (ಸರ್ವೇ ನಂ. 73/1, ಕ್ಷೇತ್ರ 02-33-00) ಜಮೀನನ್ನು ತನ್ನ ಹೆಸರಿಗೆ ದಾಖಲಿಸಿಕೊಂಡಿದ್ದಾನೆಂದು ಪೋಲಿಸ್ ಠಾಣೆಗೆ ದೂರು ನೀಡಲಾಗಿದೆ.

ಅಷ್ಟೇ ಅಲ್ಲದೆ ಇಬ್ಬರು ಸಹೋದರರನ್ನು ಗೋವಾ, ಹುಬ್ಬಳ್ಳಿ, ಬಾಂಬೆ, ದೆಹಲಿ, ದಾಂಡೇಲಿ ಸೇರಿದಂತೆ ಹಲವೆಡೆ ಬಲವಂತವಾಗಿ ಹಿಡಿದಿಟ್ಟುಕೊಂಡು ಸುತ್ತಾಡಿಸಿ, ಅವರ ಹೆಸರಿನಲ್ಲಿ ಇದ್ದ ಜಮೀನನ್ನು ತನ್ನ ಹೆಸರಿಗೆ ವರ್ಗಾಯಿಸಿಕೊಂಡಿರುವುದಾಗಿ ಆರೋಪಿಸಲಾಗಿದೆ.

ಇದನ್ನೂ ಓದಿ: ಉತ್ತರ ಕನ್ನಡ | 261 ದೇಸಿ ಸಾಂಪ್ರದಾಯಿಕ ಬೆಳೆ, ತಳಿಗಳ ಸಂರಕ್ಷಣೆ

ಈ ಸಂಬಂಧ ಶಿರಸಿ ನಗರ ಪೊಲೀಸ್ ಠಾಣೆಯಲ್ಲಿ ಜೀರೋ FIR ದಾಖಲಾಗಿದ್ದು, ಮುಂದಿನ ತನಿಖೆಗಾಗಿ ಪ್ರಕರಣವನ್ನು ಮುಂಡಗೋಡು ಪೋಲಿಸ್ ಠಾಣೆಗೆ ವರ್ಗಾಯಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ‘ಮಾದಕ ಮುಕ್ತ ಸಮಾಜ ಮತ್ತು ಡಿಜಿಟಲ್ ಸ್ವಾತಂತ್ರ್ಯ’ ಕುರಿತು ಜಿಲ್ಲಾ ಮಟ್ಟದ ಯುವ ಸಮಾವೇಶ

"ಮಾದಕ ವಸ್ತುಗಳ ಸೇವನೆ ಹಾಗೂ ಡಿಜಿಟಲ್ ವ್ಯಸನದಿಂದ ಯುವಕರು ತಮ್ಮ ಜೀವನವನ್ನು...

ಗದಗ | ಸರಕಾರ ದೇವದಾಸಿ ಮಹಿಳೆಯರ ಕುಟುಂಬ ಸದಸ್ಯರನ್ನು ಗಣತಿ ಪಟ್ಟಿಗೆ ಸೇರಿಸುವ ಕ್ರಮ ಸ್ವಾಗತ

"ಸರಕಾರ ಈಚೆಗೆ ದೌರ್ಜನ್ಯದ ದೇವದಾಸಿ ಪದ್ಧತಿಗೆ ಪರಿಣಾಮಕಾರಿ ಕ್ರಮ ಕೈಗೊಳ್ಳಲು ದೇವದಾಸಿ...

ಗದಗ | ತಹಸೀಲ್ದಾರ ಕಚೇರಿಗಳಲ್ಲಿ ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ ಆರೋಪ

"ಜಿಲ್ಲೆಯ ಎಲ್ಲಾ ತಾಲೂಕ ತಹಶೀಲ್ದಾರ್ ಕಚೇರಿ ಹಾಗೂ ಹೋಬಳಿಗಳಲ್ಲಿ ವೃಧ್ಯಾಪ್ಯ ವೇತನ,...

ಜನಮನ ಗೆದ್ದ ತುಮಕೂರು ದಸರಾ ಉತ್ಸವ : ಡಾ. ಜಿ.ಪರಮೇಶ್ವರ

 ತುಮಕೂರು ದಸರಾ ಉತ್ಸವವು ನಾಡಿನಾದ್ಯಂತ ಜನರ ಮನಸ್ಸನ್ನು ಗೆಲ್ಲುವ ಮೂಲಕ ಐತಿಹಾಸಿಕ...

Download Eedina App Android / iOS

X