ಮುಂದಿನ ಶೈಕ್ಷಣಿಕ ವರ್ಷದಿಂದ NEP ರದ್ದು: ಸಿಎಂ ಸಿದ್ದರಾಮಯ್ಯ

Date:

Advertisements

ಮುಂದಿನ ಶೈಕ್ಷಣಿಕ ವರ್ಷದಿಂದ ಎನ್‌ಇಪಿ (ರಾಷ್ಟ್ರೀಯ ಶಿಕ್ಷಣ ನೀತಿ) ರದ್ದುಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಕರ್ನಾಟಕ ಕಾಂಗ್ರೆಸ್ ಸಮಿತಿಯ ಸರ್ವ ಸದಸ್ಯರ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.

ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿರುವ NEP ಯನ್ನು ಮುಂದಿನ ಶೈಕ್ಷಣಿಕ ವರ್ಷದಿಂದ ಸಂಪೂರ್ಣ ರದ್ದುಗೊಳಿಸಲಾಗುವುದು. ಅಗತ್ಯವಾದ ಕೆಲವೊಂದು ಸಿದ್ಧತೆಗಳನ್ನು ಮಾಡಿಕೊಂಡು NEP ರದ್ದುಗೊಳಿಸಬೇಕಿದೆ. ಈ ವರ್ಷ ಅದಕ್ಕೆ ಸಮಯ ಇರಲಿಲ್ಲ. ಚುನಾವಣೆ ಫಲಿತಾಂಶ ಬಂದು ಸರ್ಕಾರ ರಚನೆ ಆಗುವ ವೇಳೆಗೆ ಶೈಕ್ಷಣಿಕ ವರ್ಷ ಆರಂಭವಾಗಿತ್ತು. ಮಧ್ಯದಲ್ಲಿ ಸಮಸ್ಯೆ ಆಗಬಾರದು ಎನ್ನುವ ಕಾರಣದಿಂದ ಈ ವರ್ಷ ಹಾಗೆಯೇ ಮುಂದುವರೆದಿದೆ.

Advertisements

“NEP ಗೆ ಏಕ ಕಾಲದಲ್ಲಿ ವಿದ್ಯಾರ್ಥಿಗಳು, ಪೋಷಕರು ಮತ್ತು ಉಪನ್ಯಾಸಕರು ಹಾಗೂ ಶಿಕ್ಷಕರ ವಿರೋಧವಿದೆ. ಬಿಜೆಪಿ ದೇಶದಲ್ಲಿ ಎಲ್ಲ NEP ಜಾರಿಗೊಳಿಸದೆ ರಾಜ್ಯದಲ್ಲಿ ಮೊದಲ ಬಾರಿಗೆ ಜಾರಿಗೊಳಿಸಿ ನಾಡಿನ ವಿದ್ಯಾರ್ಥಿ ಸಮೂಹದ ಹಿತಾಸಕ್ತಿಯನ್ನು ಬಲಿಕೊಟ್ಟಿದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X