ಶಿವಮೊಗ್ಗ | ಲೋಕಾಯುಕ್ತ ಬಲೆಗೆ ಮಹಾನಗರ ಪಾಲಿಕೆ ಅಧಿಕಾರಿ ಎ.ಪಿ.ಶಶಿಧರ್‌

Date:

Advertisements

ಶಿವಮೊಗ್ಗದಲ್ಲಿ ಲೋಕಾಯುಕ್ತ ದಾಳಿ, ಮಹಾನಗರ ಪಾಲಿಕೆ ಅಧಿಕಾರಿ ಎ.ಪಿ.ಶಶಿಧರ್‌ ಬಲೆಗೆ.

ಶಿವಮೊಗ್ಗ ನಗರದ ಮೊಹಮ್ಮದ್‌ ಆಸಿಫ್‌ ಎಂಬುವವರು ಬೊಮ್ಮನಕಟ್ಟೆಯ ಆಶ್ರಯ ಬಡಾವಣೆಯಲ್ಲಿ ಖರೀದಿಸಿದ್ದ ನಿವೇಶನಕ್ಕೆ ಖಾತೆ ಮಾಡಿಕೊಡಲು ಶಶಿಧರ್‌ ಹಣಕ್ಕೆ ಬೇಡಿಕೆ ಇಟ್ಟಿದ್ದರು.

ಇವರ ವಾಯ್ಸ್‌ ರೆಕಾರ್ಡ್‌ ಅನ್ನು ಮೊಹಮ್ಮದ್‌ ಆಸಿಫ್‌ ಲೋಕಾಯುಕ್ತರಿಗೆ ನೀಡಿದ್ದರು. ಹಣಕ್ಕೆ ಬೇಡಿಕೆ ಇಟ್ಟಿರುವ ಕುರಿತು ದೂರು ನೀಡಿದ್ದರು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಆಶ್ರಯ ಮನೆಯೊಂದಕ್ಕೆ ಖಾತೆ ಮಾಡಿಕೊಡಲು ₹10,000 ಲಂಚ ಪಡೆಯುತ್ತಿದ್ದ ಮಹಾನಗರ ಪಾಲಿಕೆಯ ಆಶ್ರಯ ಕಚೇರಿಯ ಸಮುದಾಯ ಸಂಘಟನಾ ಅಧಿಕಾರಿ ಎ.ಪಿ.ಶಶಿಧರ್‌ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ನೆಹರು ರಸ್ತೆಯ ನೇತಾಜಿ ಸುಭಾಷಚಂದ್ರ ಬೋಸ್‌ ವಾಣಿಜ್ಯ ಸಂಕೀರ್ಣದಲ್ಲಿರುವ ಆ‍ಶ್ರಯ ಕಚೇರಿಯಲ್ಲಿ ಇಂದು ಸಂಜೆ ವೇಳೆಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ₹10,000 ನಗದು ಮತ್ತು ಅಧಿಕಾರಿ ಎ.ಪಿ.ಶಶಿಧರ್‌ನನ್ನು ವಶಕ್ಕೆ ಪಡೆಯಲಾಗಿದೆ.

ಲೋಕಾಯುಕ್ತ ಪೊಲೀಸ್‌ ಅಧೀಕ್ಷಕ ಮಂಜುನಾಥ ಚೌಧರಿ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಉಪಾ‍ಧ್ಯಕ್ಷ ಬಿ.ಪಿ.ಚಂದ್ರಶೇಖರ್‌, ಇನ್ಸ್‌ಪೆಕ್ಟರ್‌ ರುದ್ರೇಶ್‌.ಕೆ.ಪಿ, ಇನ್ಸ್‌ಪೆಕ್ಟರ್‌ಗಳಾದ ಗುರುರಾಜ್‌ ಮೈಲಾರ್‌, ವೀರಬಸಪ್ಪ ಎಲ್‌.ಕುಸಲಾಪುರ, ಸಿಬ್ಬಂದಿ ಯೋಗೇಶ್‌, ಮಂಜುನಾಥ್‌, ಟೀಕಪ್ಪ, ಸುರೇಂದ್ರ, ಪ್ರಶಾಂತ್‌ ಕುಮಾರ್‌, ದೇವರಾಜ್‌, ಪ್ರಕಾಶ್‌ ಬಾರಿಮರದ, ಅರುಣ್‌ ಕುಮಾರ್‌, ಆದರ್ಶ, ಚಂದ್ರಿಬಾಯಿ, ಪ್ರದೀಪ, ಗಂಗಾಧರ, ಆನಂದ, ಗೋಪಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗದ ಸಂಚಾರ ವ್ಯವಸ್ಥೆಯಲ್ಲಿ ಅರಾಜಕತೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಾಗರಿಕರು ಹೈರಾಣು

ಒಮ್ಮೆ ಶಾಂತ, ಶಿಕ್ಷಣ ಹಾಗೂ ಸಂಸ್ಕೃತಿಯ ತಾಣವಾಗಿದ್ದ ಶಿವಮೊಗ್ಗ ನಗರ ಇತ್ತೀಚಿನ...

ತುಮಕೂರು | ಗಾಂಧೀ ತತ್ವಗಳಿಗೆ ವಿಶ್ವ ಮನ್ನಣೆ : ಡಾ. ಜಿ.ಪರಮೇಶ್ವರ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಹಿಂಸಾ ತತ್ವಗಳಿಗೆ ಇಡೀ ವಿಶ್ವದಲ್ಲಿಯೇ ಮನ್ನಣೆ ದೊರೆತಿದೆ...

ಶಿವಮೊಗ್ಗ | ಸತ್ಯ – ಅಹಿಂಸೆ ಪ್ರಬಲ ಅಸ್ತ್ರಗಳು : ಡಾ. ಟಿ. ಅವಿನಾಶ್

ಶಿವಮೊಗ್ಗ, ಭಾರತ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಡಲು ಮಹಾತ್ಮ ಗಾಂಧೀಜಿಯವರು ಬಳಸಿದ ಅಸ್ತ್ರಗಳೆಂದರೆ...

ಉಡುಪಿ | ಕಾರ್ಕಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಹಾತ್ಮಾ ಗಾಂಧೀಜಿ ಹಾಗೂ ಶಾಸ್ತ್ರಿ ಜಯಂತಿ ಆಚರಣೆ

ದೇಶದಲ್ಲಿ ಸಮಾನತೆಯನ್ನು ಬಯಸಿದ್ದೇ ಗಾಂಧೀಜಿಯವರ ಹತ್ಯೆಗೆ ಕಾರಣವಾಯಿತು, ಶೂದ್ರ ಮತ್ತು ಅತ್ಯಂತ...

Download Eedina App Android / iOS

X