ಯಾದಗಿರಿ | ವಸತಿಶಾಲೆ ಶೌಚಾಲಯದಲ್ಲಿ ಬಾಲಕಿಗೆ ಹೆರಿಗೆ ಪ್ರಕರಣ: ಪ್ರಮುಖ ಆರೋಪಿ ಬಂಧನ

Date:

Advertisements

ಯಾದಗಿರಿ ಜಿಲ್ಲೆಯ ವಸತಿಶಾಲೆಯ ಶೌಚಾಲಯದಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಗಂಡು ಮಗುವಿಗೆ ಜನ್ಮನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಶಹಾಪುರ ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ.

ಸುರಪುರ ತಾಲೂಕಿನ ಕಕ್ಕೇರ ಗ್ರಾಮದ ಪರಮಣ್ಣ(30) ಬಂಧಿತ ಆರೋಪಿ. ಸದ್ಯ ಶಹಾಪುರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸ್ಟೆಲ್ ವಾರ್ಡನ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾದಾಗ ಎ1 ಆರೋಪಿ ಸ್ಥಾನ ಖಾಲಿ ಇಡಲಾಗಿತ್ತು. ಈಗ ಪರಮಣ್ಣನನ್ನು ಬಂಧಿಸಿ ಎ1 ಆರೋಪಿ ಮಾಡಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಈ ದಿನ.ಕಾಮ್‌ ಶಹಾಪುರ ಸರ್ಕಲ್‌ ಇನ್‌ಸ್ಪೆಕ್ಟರ್‌ ಸಂಪರ್ಕಿಸಿದಾಗ ಪ್ರತಿಕ್ರಿಯಿಸಿದ ಅವರು, ಆರೋಪಿಯ ಬಂಧನ ಆಗಿರುವುದಾಗಿ ತಿಳಿಸಿದರು.

ಬಂಧಿತ ಆರೋಪಿ ಪರಮಣ್ಣ, ಅಪ್ರಾಪ್ತ ಬಾಲಕಿ ಜತೆ ಸಂಬಂಧ ಬೆಳೆಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಕೃತ್ಯದ ಬಗ್ಗೆ ಯಾರಿಗೂ ಹೇಳದಂತೆ ಬಾಲಕಿಗೆ ಬೆದರಿಕೆಯನ್ನೂ ಹಾಕಿದ್ದ ಎಂದು ತಿಳಿದುಬಂದಿದೆ.

ಘಟನೆ ಹಿನ್ನಲೆ

ವಸತಿ ಶಾಲೆಯ ಶೌಚಾಲಯದಲ್ಲಿ ವಿದ್ಯಾರ್ಥಿನಿಯೊಬ್ಬಳು ಚೀರಾಡುವ ಶಬ್ದ ಕೇಳಿಬಂದಿತ್ತು. ಹೀಗಾಗಿ ಎಲ್ಲರೂ ಓಡಿಹೋಗಿ ನೋಡುವಷ್ಟರಲ್ಲಿ ಓರ್ವ ವಿದ್ಯಾರ್ಥಿನಿ ಹೆರಿಗೆ ನೋವಿನಿಂದ ಬಳಲುತ್ತಿದ್ದ ದೃಶ್ಯ ಕಂಡುಬಂದಿತ್ತು.

ಸಹಪಾಠಿ ವಿದ್ಯಾರ್ಥಿನಿಯರು, ವಸತಿ ಶಾಲೆಯ ಪ್ರಾಂಶುಪಾಲರು, ವಾರ್ಡನ್ ಹಾಗೂ ಸ್ಟಾಪ್‌ ನರ್ಸ್​ಗೆ ವಿಷಯ ತಿಳಿದ ಕೂಡಲೇ ವಿದ್ಯಾರ್ಥಿನಿ ತಾಯಿಗೆ ವಿಷಯ ತಿಳಿಸಲಾಗಿತ್ತು. ಇನ್ನು ನವಜಾತ ಶಿಶುವನ್ನು ಶಹಾಪುರ ಸರ್ಕಾರಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಯಾದಗಿರಿ | ವಸತಿ ಶಾಲೆ ಶೌಚಾಲಯದಲ್ಲಿ 9ನೇ ತರಗತಿ ಬಾಲಕಿ ಹೆರಿಗೆ ಪ್ರಕರಣ : ನಾಲ್ವರು ಅಮಾನತು

ಆಸ್ಪತ್ರೆಗೆ ದಾಖಲು ಮಾಡಿದ ಕೂಡಲೇ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಕ್ಕೆ ಮಾಹಿತಿ ಸಿಕ್ಕಿದೆ. ಆಯೋಗ ಪ್ರಕರಣವನ್ನ ಗಂಭೀರವಾಗಿ ತೆಗೆದುಕೊಂಡು ತಪ್ಪಿಸ್ಥರ ವಿರುದ್ಧ ಕ್ರಮಕ್ಕೆ ಮುಂದಾಗಿತ್ತು. ವಸತಿ ಶಾಲೆಯ ಶೌಚಾಲಯದಲ್ಲಿ ಹೆರಿಗೆಯಾದರೂ ಪ್ರಾಂಶುಪಾಲರಿಗೆ, ವಾರ್ಡನ್ ಹಾಗೂ ಸ್ಟಾಪ್‌ ನರ್ಸ್​ಗೆ ಮಾಹಿತಿ ಇಲ್ಲದ ಕಾರಣಕ್ಕೆ ಮೂವರ ವಿರುದ್ಧ ಪ್ರಕರಣ ದಾಖಲಿಸಿ ಅಮಾನತು ಮಾಡಲಾಗಿದೆ. ಅಷ್ಟೇ ಅಲ್ಲದೆ ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸಿದ ವಿದ್ಯಾರ್ಥಿನಿಯ ಸಹೋದರನ ಮೇಲೂ ಶಹಾಪುರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗದ ಸಂಚಾರ ವ್ಯವಸ್ಥೆಯಲ್ಲಿ ಅರಾಜಕತೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಾಗರಿಕರು ಹೈರಾಣು

ಒಮ್ಮೆ ಶಾಂತ, ಶಿಕ್ಷಣ ಹಾಗೂ ಸಂಸ್ಕೃತಿಯ ತಾಣವಾಗಿದ್ದ ಶಿವಮೊಗ್ಗ ನಗರ ಇತ್ತೀಚಿನ...

ತುಮಕೂರು | ಗಾಂಧೀ ತತ್ವಗಳಿಗೆ ವಿಶ್ವ ಮನ್ನಣೆ : ಡಾ. ಜಿ.ಪರಮೇಶ್ವರ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಹಿಂಸಾ ತತ್ವಗಳಿಗೆ ಇಡೀ ವಿಶ್ವದಲ್ಲಿಯೇ ಮನ್ನಣೆ ದೊರೆತಿದೆ...

ಶಿವಮೊಗ್ಗ | ಸತ್ಯ – ಅಹಿಂಸೆ ಪ್ರಬಲ ಅಸ್ತ್ರಗಳು : ಡಾ. ಟಿ. ಅವಿನಾಶ್

ಶಿವಮೊಗ್ಗ, ಭಾರತ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಡಲು ಮಹಾತ್ಮ ಗಾಂಧೀಜಿಯವರು ಬಳಸಿದ ಅಸ್ತ್ರಗಳೆಂದರೆ...

ಉಡುಪಿ | ಕಾರ್ಕಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಹಾತ್ಮಾ ಗಾಂಧೀಜಿ ಹಾಗೂ ಶಾಸ್ತ್ರಿ ಜಯಂತಿ ಆಚರಣೆ

ದೇಶದಲ್ಲಿ ಸಮಾನತೆಯನ್ನು ಬಯಸಿದ್ದೇ ಗಾಂಧೀಜಿಯವರ ಹತ್ಯೆಗೆ ಕಾರಣವಾಯಿತು, ಶೂದ್ರ ಮತ್ತು ಅತ್ಯಂತ...

Download Eedina App Android / iOS

X