ಮಂಗಳೂರು | ಸಿಟಿ ಬಸ್ ಚಾಲಕನ ಸಮಯಪ್ರಜ್ಞೆ; ಉಳಿಯಿತು ಬೈಕ್ ಸವಾರನ‌ ಜೀವ!

Date:

Advertisements

ಮಂಗಳೂರಿನ ನಂತೂರು ಸಮೀಪ ನಿನ್ನೆ ಸಂಜೆ ನಡೆದ ಘಟನೆ ಭಾರೀ ಚರ್ಚೆಗೆ ಕಾರಣವಾಗಿದೆ. ಕೆಪಿಟಿಯಿಂದ ನಂತೂರು ಕಡೆಗೆ ಸಾಗುತ್ತಿದ್ದ 15 ನಂಬರ್ ರಾಜಲಕ್ಷ್ಮಿ ಬಸ್ಸನ್ನು ಮುಂದೆ ಹೋಗುತ್ತಿದ್ದ ಬೈಕ್‌ ಸವಾರ ಓವರ್ ಟೇಕ್ ಮಾಡುವ ಭರದಲ್ಲಿ ರಸ್ತೆಯ ಮೇಲಿನ ಹೊಂಡಕ್ಕೆ ಸಿಕ್ಕಿ ಬಿದ್ದಿದೆ.

ಅಪಘಾತ ಸಂಭವಿಸಬಹುದಾದ ಪರಿಸ್ಥಿತಿಯಲ್ಲಿ ಬಸ್ ಚಾಲಕ ಸಮಯಪ್ರಜ್ಞೆ ಮೆರೆದಿದ್ದು, ತಕ್ಷಣ ಬ್ರೇಕ್ ಹಾಕಿದ ಪರಿಣಾಮ ಸ್ಕೂಟರ್ ಸವಾರ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಘಟನೆಗೆ ಸಂಬಂಧಿಸಿದ ವಿಡಿಯೋಗಳು ಮತ್ತು ವರದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕರಲ್ಲಿ ಆಕ್ರೋಶ ಹುಟ್ಟಿಸಿವೆ.

ಜನಪ್ರತಿನಿಧಿಗಳ ನಿರ್ಲಕ್ಷ್ಯದ ವಿರುದ್ಧ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹೊಂಡ-ಗುಂಡಿಗಳಿಂದ ತುಂಬಿರುವ ರಸ್ತೆಗಳ ಸ್ಥಿತಿಗೆ ಜನರು ಆಕ್ರೋಶ ಹೊರಹಾಕುತ್ತಿದ್ದು, “ಹೆಚ್ಚುವರಿ ಜೀವಗಳು ಹೋಗಬೇಕೇ ಮತ್ತಷ್ಟು ಎಚ್ಚರಿಕೆಗಾಗಿ?” ಎಂಬ ಪ್ರಶ್ನೆ ಸಾಮಾಜಿಕ ಜಾಲತಾಣಗಳಲ್ಲಿ ಮುಗಿಲು ಮುಟ್ಟುತ್ತಿದೆ. “ರಸ್ತೆಗಳ ಗುಂಡಿಗಳನ್ನು ಮುಚ್ಚುವುದು ನಿಮ್ಮ ಕರ್ತವ್ಯವಲ್ಲವೇ? ಕೇವಲ ಅಧಿಕಾರದ ಆಸೆಗೆ ಹೊಟ್ಟೆ ತುಂಬಿಸಿಕೊಂಡರೆ ಸಾಕಾ? ಜನರ ಜೀವಕ್ಕೆ ಬೆಲೆ ಇಲ್ಲವೇ?” ಎಂಬ ತೀವ್ರವಾಗಿ ಪ್ರಶ್ನಿಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಪ್ಪಳ | ಪ್ರವಾದಿ ಮಹಮ್ಮದ್‌ ಸಂದೇಶವನ್ನು ನಾವು ಪಾಲನೆ ಮಾಡಬೇಕು: ಲಾಲ್ ಹುಸೇನ್ ಕಂದ್ಗಲ್

'ಖುರಾನ್' ಬರುವ ಪ್ರವಾದಿ ಮಹಮ್ಮದ್‌ ಅವರು ಹೇಳಿದ ಸತ್ಯವನ್ನೇ ಭಾರತೀಯ ಪುರಾಣಗಳು...

ಶಿವಮೊಗ್ಗದ ಸಂಚಾರ ವ್ಯವಸ್ಥೆಯಲ್ಲಿ ಅರಾಜಕತೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಾಗರಿಕರು ಹೈರಾಣು

ಒಮ್ಮೆ ಶಾಂತ, ಶಿಕ್ಷಣ ಹಾಗೂ ಸಂಸ್ಕೃತಿಯ ತಾಣವಾಗಿದ್ದ ಶಿವಮೊಗ್ಗ ನಗರ ಇತ್ತೀಚಿನ...

ತುಮಕೂರು | ಗಾಂಧೀ ತತ್ವಗಳಿಗೆ ವಿಶ್ವ ಮನ್ನಣೆ : ಡಾ. ಜಿ.ಪರಮೇಶ್ವರ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಹಿಂಸಾ ತತ್ವಗಳಿಗೆ ಇಡೀ ವಿಶ್ವದಲ್ಲಿಯೇ ಮನ್ನಣೆ ದೊರೆತಿದೆ...

ಶಿವಮೊಗ್ಗ | ಸತ್ಯ – ಅಹಿಂಸೆ ಪ್ರಬಲ ಅಸ್ತ್ರಗಳು : ಡಾ. ಟಿ. ಅವಿನಾಶ್

ಶಿವಮೊಗ್ಗ, ಭಾರತ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಡಲು ಮಹಾತ್ಮ ಗಾಂಧೀಜಿಯವರು ಬಳಸಿದ ಅಸ್ತ್ರಗಳೆಂದರೆ...

Download Eedina App Android / iOS

X