ಬೀದರ್‌ | ₹1.94 ಕೋಟಿಗೂ ಅಧಿಕ ಮೌಲ್ಯದ ಗುಟ್ಕಾ, ಪಾನ್‌ ಮಸಾಲ ಜಪ್ತಿ; 8 ಆರೋಪಿಗಳ ಬಂಧನ

Date:

Advertisements

ಅನುಮತಿ ಪಡೆಯದೆ ತಂಬಾಕು ವಸ್ತುಗಳ ಕಲಬೆರಕೆ ಮಾಡಿ ತಯಾರಿಸಿ ಸಂಗ್ರಹಿಸಿಟ್ಟಿದ್ದ ₹1.94 ಕೋಟಿಗೂ ಅಧಿಕ ಮೌಲ್ಯದ ಗುಟ್ಕಾ, ಪಾನ್‌ ಮಸಾಲ ಹಾಗೂ ₹25 ಲಕ್ಷ ಮೌಲ್ಯದ ಒಂದು ವಾಹನವನ್ನು ಜಪ್ತಿ ಮಾಡಿ 8 ಜನ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪ್ರದೀಪ ಗುಂಟಿ ಹೇಳಿದರು.

ಬೀದರ್‌ ನಗರದ ಗಾಂಧಿ ಗಂಜ ಹಾಗೂ ನೂತನ ನಗರ ಠಾಣೆ ವ್ಯಾಪ್ತಿಯಲ್ಲಿ ಎರಡು ಪ್ರತೇಕ ಕಡೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಬಂಧಿತರಿಂದ ಗುಟ್ಕಾ, ಪಾನ್‌ ಮಸಾಲ ಮತ್ತು ಒಂದು ಐಚರ್‌ ವಾಹನ ವಶಕ್ಕೆ ಪಡೆಯಲಾಗಿದೆ ಎಂದು ಭಾನುವಾರ ಸುದ್ದುಗೋಷ್ಠಿಯಲ್ಲಿ ಅವರು ವಿವರಿಸಿದರು.

ಎಲ್ಲಿ, ಏನೇನು ಜಪ್ತಿ ?

ಬೀದರ್ ನಗರದ ಚಿದ್ರಿಯ ಬುತ್ತಿ ಬಸವಣ್ಣ ದೇವಸ್ಥಾನ ಸಮೀಪದ ಮನೆಯೊಂದರಲ್ಲಿ ಅಕ್ರಮವಾಗಿ ತಂಬಾಕು ವಸ್ತುಗಳ ಕಲಬೆರಕೆ ಗುಟಕಾ ಸಾಮಗ್ರಿ, ಪಾನ್ ಮಸಾಲಾ ಸಂಗ್ರಹಿಸಿಟ್ಟು, ಲಾರಿಯೊಂದರಲ್ಲಿ ತುಂಬುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ, ₹1.51 ಕೋಟಿ ಮೌಲ್ಯದ ಪಾನ್‌ ಮಸಾಲ, ತಂಬಾಕು ವಸ್ತು ಹಾಗೂ ಗುಟಕಾ ತಯಾರಿಸುವ ವಿವಿಧ ಸಾಮಾಗ್ರಿ ಮತ್ತು ₹25 ಲಕ್ಷ ಮೌಲ್ಯ ಒಂದು ಲಾರಿ ಸೇರಿ ಒಟ್ಟು ₹1.76 ಕೋಟಿಗೂ ಅಧಿಕ ಮೌಲ್ಯದ ವಸ್ತುಗಳನ್ನು ಗಾಂಧಿ ಗಂಜ ಠಾಣೆಯ ಪೊಲೀಸರು ಜಪ್ತಿ ಮಾಡಿದ್ದಾರೆ.

WhatsApp Image 2025 08 31 at 2.14.17 PM 1

ನೂತನ ನಗರ ಠಾಣೆ ವ್ಯಾಪ್ತಿಯ ಬೀದರ್‌ ಹೊರವಲಯದ ಕೋಳಾರ ಕೈಗಾರಿಕಾ ಪ್ರದೇಶದಲ್ಲಿ ಶೆಡ್‌ವೊಂದರಲ್ಲಿ ಸರ್ಕಾರದ ಅನುಮತಿ ಪಡೆಯದೆ ಮಾನವ ಆರೋಗ್ಯಕ್ಕೆ ಹಾನಿಕಾರವಾದ ಪಾನ್ ಮಸಾಲ, ಕೆಮಿಕಲ್ ಹಾಗೂ ಕಚ್ಚಾ ವಸ್ತು ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಒಟ್ಟು ₹43.30 ಲಕ್ಷ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

ಪತ್ರಿಕಾಗೋಷ್ಠಿಯಲ್ಲಿ ಗಾಂಧಿ ಗಂಜ ಹಾಗೂ ನೂತನ ನಗರ ಪೊಲೀಸ್‌ ಠಾಣೆಯ ಅಧಿಕಾರಿಗಳು ಹಾಜರಿದ್ದರು.

ಇದನ್ನೂ ಓದಿ : ಬೀದರ್‌ ಜಿಲ್ಲೆಯಲ್ಲಿ ಅತಿವೃಷ್ಟಿ | ₹100 ಕೋಟಿ ವಿಶೇಷ ಪರಿಹಾರ ಕೊಡಿ : ಸಿಎಂಗೆ ಈಶ್ವರ ಖಂಡ್ರೆ ಮನವಿ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು ದಸರಾ : ಸಚಿವರಿಂದ ವಿಶೇಷ ಪೂಜೆ

ತುಮಕೂರು ದಸರಾ ಉತ್ಸವದ ಕಡೆಯ ದಿನವಾದ ವಿಜಯದಶಮಿಯಂದು ಗೃಹ ಹಾಗೂ ಜಿಲ್ಲಾ...

ಯುವಪರಿವರ್ತನೆ ಯಾತ್ರೆ: ಬಾಗಲಕೋಟೆಯಲ್ಲಿ ಚಾಲನೆ

ಯುವಜನರನ್ನು ರಾಜ್ಯದ ಅಭಿವೃದ್ಧಿಯತ್ತ ಚಿತ್ತಹರಿಸಲು, ಪ್ರಜೆಗಳ ಆರೋಗ್ಯ, ಶಿಕ್ಷಣ, ಸಬಲೀಕರಣ, ಉದ್ಯೋಗದ...

ಕೊಪ್ಪಳ | ಪ್ರವಾದಿ ಮಹಮ್ಮದ್‌ ಸಂದೇಶವನ್ನು ನಾವು ಪಾಲನೆ ಮಾಡಬೇಕು: ಲಾಲ್ ಹುಸೇನ್ ಕಂದ್ಗಲ್

'ಖುರಾನ್' ಬರುವ ಪ್ರವಾದಿ ಮಹಮ್ಮದ್‌ ಅವರು ಹೇಳಿದ ಸತ್ಯವನ್ನೇ ಭಾರತೀಯ ಪುರಾಣಗಳು...

ಶಿವಮೊಗ್ಗದ ಸಂಚಾರ ವ್ಯವಸ್ಥೆಯಲ್ಲಿ ಅರಾಜಕತೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಾಗರಿಕರು ಹೈರಾಣು

ಒಮ್ಮೆ ಶಾಂತ, ಶಿಕ್ಷಣ ಹಾಗೂ ಸಂಸ್ಕೃತಿಯ ತಾಣವಾಗಿದ್ದ ಶಿವಮೊಗ್ಗ ನಗರ ಇತ್ತೀಚಿನ...

Download Eedina App Android / iOS

X