ಎಸ್‌ಎಸ್‌ಎ ನಿಧಿಗೆ ತಡೆ; ಉಪವಾಸ ಸತ್ಯಾಗ್ರಹ ಮುಂದುವರಿಸಿದ ಸಂಸದ ಸಸಿಕಾಂತ್ ಸೆಂಥಿಲ್

Date:

Advertisements

ಕೇಂದ್ರ ಸರ್ಕಾರದ ಸಮಗ್ರ ಶಿಕ್ಷಾ ಯೋಜನೆ (ಎಸ್‌ಎಸ್‌ಎ) ನಿಧಿಯಲ್ಲಿ ತಮಿಳುನಾಡಿಗೆ ಸಿಗಬೇಕಾದ ನ್ಯಾಯಯುತ ಪಾಲನ್ನು ನೀಡುವಂತೆ ಒತ್ತಾಯಿಸಿ ಸಂಸದ ಸಸಿಕಾಂತ್ ಸೆಂಥಿಲ್ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ತಮ್ಮ ಸತ್ಯಾಗ್ರಹವು ಅನಿರ್ಧಿಷ್ಟಾವಧಿಗೆ ಮುಂದುವರೆಯಲಿದೆ ಎಂದು ಹೇಳಿದ್ದಾರೆ.

ತಮಿಳುನಾಡಿ ತಿರುವಳ್ಳೂರು ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುವ ಕಾಂಗ್ರೆಸ್ ಸಂಸದ ಸಸಿಕಾಂತ್ ಸೆಂಥಿಲ್, ಎಸ್‌ಎಸ್‌ಎ ಯೋಜನೆಯಡಿ ತಮಿಳುನಾಡಿಗೆ ದೊರೆಯಬೇಕಿದ್ದ 2,152 ಕೋಟಿ ರೂ. ನಿಧಿಯನ್ನು ಕೇಂದ್ರ ಸರ್ಕಾರ ತಡೆಹಿಡಿದಿರುವುದನ್ನು ಖಂಡಿಸಿದ್ದಾರೆ. ಶುಕ್ರವಾರದಿಂದ ತಿರುವಳ್ಳೂರಿನಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.

ಉಪವಾಸ ಸತ್ಯಾಗ್ರಹದ 2ನೇ ದಿನವಾದ ಶನಿವಾರ ರಾತ್ರಿ ಅವರು ಅಧಿಕ ರಕ್ತದೊತ್ತಡದಿಂದ ತೊಂದರೆ ಅನುಭವಿಸಿದ್ದರು. ಆಸ್ಪತ್ರೆಗೆ ದಾಖಲಾಗಿದ್ದರು. ಭಾನುವಾರ ಆಸ್ಪತ್ರೆಯಿಂದ ‘ಡಿಸ್ಚಾರ್ಜ್’ ಆಗಿರುವ ಸೆಂಥಿಲ್, ತಮ್ಮ ಉಪವಾಸ ಸತ್ಯಾಗ್ರಹವನ್ನು ಮುಂದುವರೆಸುವುದಾಗಿ ಹೇಳಿದ್ದಾರೆ.

ಕೇಂದ್ರ ಸರ್ಕಾರದ ನಿರ್ಧಾರವು ತಮಿಳುನಾಡಿನ 43 ಲಕ್ಷ ವಿದ್ಯಾರ್ಥಿಗಳು ಮತ್ತು 2.2 ಲಕ್ಷ ಶಿಕ್ಷಕರ ಭವಿಷ್ಯವನ್ನು ಅಭದ್ರಗೊಳಿಸಿದೆ ಎಂದು ಸೆಂಥಿಲ್ ಹೇಳಿದ್ದಾರೆ.

ಈ ಲೇಖನ ಓದಿದ್ದೀರಾ?: ಭಾರತ-ಚೀನಾ ‘ಭಾಯಿ ಭಾಯಿ’ ಎನ್ನುತ್ತಿದ್ದಾರೆ ಮೋದಿ; ಇದು ಸಾಧ್ಯವೇ?

ಉಪವಾಸ ಸತ್ಯಾಗ್ರಹವನ್ನು ಕೈಬಿಡುವಂತೆ ಕೈಬಿಡುವಂತೆ ಸೆಂಥಿಲ್ ಅವರಿಗೆ ತಮಿಳುನಾಡು ಕಾಂಗ್ಎರಸ್‌ ಅಧ್ಯಕ್ಷ ಕೆ ಸೆಲ್ವಪೆರುಂಥಗೈ ಮನವಿ ಮಾಡಿದ್ದಾರೆ. ಆದರೆ, ಸತ್ಯಾಗ್ರಹವನ್ನು ಕೈಬಿಡಲು ಸೆಂಧಿಲ್ ನಿರಾಕರಿಸಿದ್ದಾರೆ.

“ಶನಿವಾರ ನನಗೆ ಸ್ವಲ್ಪ ರಕ್ತದೊತ್ತಡ ಹೆಚ್ಚಾಗಿತ್ತು. ಅದನ್ನು ನಿಯಂತ್ರಣಕ್ಕೆ ತರಲು ಆಸ್ಪತ್ರೆಗೆ ದಾಖಲಾಗಿದ್ದೆ. ರಕ್ತದೊತ್ತಡದ ಹೊರತಾಗಿಯೂ ನನ್ನ ಆರೋಗ್ಯ ಸ್ಥಿರವಾಗಿದೆ. ನಾನು ಚೆನ್ನಾಗಿದ್ದೇನೆ. ತಮಿಳುನಾಡು ಮತ್ತು ದೇಶದ ಇತರ ಭಾಗಗಳ ವಿದ್ಯಾರ್ಥಿಗಳು ಎದುರಿಸುತ್ತಿರುವ ದುಃಸ್ಥಿತಿಯನ್ನು ಬೆಳಕಿಗೆ ತರಲು ನಾನು ದೃಢನಿಶ್ಚಯದಿಂದ ಇದ್ದೇನೆ. ಉಪವಾಸ ಸತ್ಯಾಗ್ರಹ ಮುಂದುವರೆಯುತ್ತದೆ” ಎಂದು ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆರ್‌ಎಸ್‌ಎಸ್‌ನ ಕೈಗಳಿಗೆ ಮಹಾತ್ಮ ಗಾಂಧಿಯ ರಕ್ತದ ಕಲೆ ಅಂಟಿದೆ: ಕಾಂಗ್ರೆಸ್‌

ಆರ್‌ಎಸ್‌ಎಸ್ ಮಹಾತ್ಮ ಗಾಂಧಿ, ಭಗತ್ ಸಿಂಗ್ ಮತ್ತು ಚಂದ್ರಶೇಖರ್ ಆಜಾದ್ ಅವರಂತಹ...

ದಾವಣಗೆರೆ | ಪರೀಕ್ಷೆ ಸಮಯ,ನಡೆಯದ ಪಾಠ; ಪರೀಕ್ಷೆ ಮುಂದೂಡಿಕೆಗೆ ಕುಲಸಚಿವರಿಗೆ ವಿದ್ಯಾರ್ಥಿಗಳ ಆಗ್ರಹ

ರಾಜ್ಯದ ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳು ಅತಿಥಿ ಉಪನ್ಯಾಸಕರ ಮೇಲೆ ಅವಲಂಬಿತವಾಗಿದ್ದು...

RSS ಕುರಿತ ₹100 ನಾಣ್ಯ & ಅಂಚೆ ಚೀಟಿ ಬಿಡುಗಡೆ, ಸಂವಿಧಾನಕ್ಕೆ ಎಸಗಿದ ಘೋರ ಅಪಚಾರ: ಸಿಪಿಐ(ಎಂ)

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶತಮಾನೋತ್ಸವ ಸಮಾರಂಭದ ಪ್ರಯುಕ್ತ ಪ್ರಧಾನಿ ನರೇಂದ್ರ...

ಕರೂರ್ ದುರಂತ: 41 ಜನರ ಸಾವಿನ ನಂತರ ಟಿವಿಕೆ ರ‍್ಯಾಲಿ ತಾತ್ಕಾಲಿಕ ಸ್ಥಗಿತ

ತಮಿಳಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ನಾಯಕ ವಿಜಯ್ ಅವರು ಬುಧವಾರ ತಮ್ಮ...

Download Eedina App Android / iOS

X