ಪೊಲೀಸ್ ಅಧಿಕಾರಿಯಂತೆ ನಟಿಸಿ ಕೇರಳ ಪೊಲೀಸರ ಬಳಿಯೇ ಹಣ ಕೇಳಿದ ವಾಟ್ಸಾಪ್ ವಂಚಕ

Date:

Advertisements

ತಾನು ಪೊಲೀಸ್ ಅಧಿಕಾರಿಯಂತೆ ನಟಿಸಿ ನಕಲಿ ವಾಟ್ಸಾಪ್ ಖಾತೆಯ ಮೂಲಕ ಪೊಲೀಸರನ್ನೇ ವಂಚಿಸಲು ಯತ್ನಿಸಿದ ವಾಟ್ಸಾಪ್ ವಂಚಕ ಸಿಕ್ಕಿಬಿದ್ದಿದ್ದಾನೆ. ದಕ್ಷಿಣ ಕೇರಳ ಜಿಲ್ಲೆಯಲ್ಲಿ ಜಿಲ್ಲಾ ಪೊಲೀಸ್ ಮುಖ್ಯಸ್ಥರಂತೆ ನಟಿಸಿದ ಈ ವಂಚಕನ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ. ಕೊಲ್ಲಂ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೊಲ್ಲಂ ಗ್ರಾಮೀಣ ಪೊಲೀಸರ ಹಲವಾರು ಅಧಿಕಾರಿಗಳಿಗೆ ಕಳೆದ ವಾರ +9779702927435 ಎಂಬ ವಾಟ್ಸಾಪ್ ಸಂಖ್ಯೆಯಿಂದ ಸಂದೇಶಗಳು ಬಂದಿವೆ. ಜಿಲ್ಲಾ ಪೊಲೀಸ್ ಮುಖ್ಯಸ್ಥ ವಿಶು ಪ್ರತೀಪ್ ಟಿಕೆ ಅವರ ಚಿತ್ರವನ್ನು ಪ್ರೊಫೈಲ್‌ನಲ್ಲಿ ಹೊಂದಿದ್ದ ವಾಟ್ಸಾಪ್‌ ಸಂಖ್ಯೆಯಿಂದ ಹಲವು ಪೊಲೀಸರಿಗೆ ಸಂದೇಶ ಬಂದಿದೆ ಎಂದು ಹೇಳಲಾಗಿದೆ.

ಇದನ್ನು ಓದಿದ್ದೀರಾ? ಸರ್ಕಾರಿ ಅಧಿಕಾರಿ ಸೋಗಿನಲ್ಲಿ ಮದುವೆ ನೆಪದಲ್ಲಿ 50 ಮಹಿಳೆಯರಿಗೆ ವಂಚನೆ; ಆರೋಪಿ ಬಂಧನ

“ಪೊಲೀಸ್ ಅಧಿಕಾರಿ ಎಂದು ಹೇಳಿಕೊಂಡು ಮೆಸೇಜ್ ಮಾಡಿದ ವಂಚಕನು ತುರ್ತಾಗಿ 40 ಸಾವಿರ ರೂಪಾಯಿ ವರ್ಗಾವಣೆ ಮಾಡುವಂತೆ ಕೇಳಿಕೊಂಡಿದ್ದಾನೆ. ರಾಜ್ಯಾದ್ಯಂತ ವರದಿಯಾದ ಇದೇ ರೀತಿಯ ಸೈಬರ್ ವಂಚನೆಗಳ ಬಗ್ಗೆ ತಿಳಿದಿದ್ದ ಅಧಿಕಾರಿಗಳು ತಕ್ಷಣ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಯಾರೂ ಹಣ ಕಳೆದುಕೊಂಡಿಲ್ಲ” ಎಂದು ಪೊಲೀಸ್ ಅಧಿಕಾರಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಪ್ರಾಥಮಿಕ ತನಿಖೆಯಲ್ಲಿ ವಂಚಕನು ನವದೆಹಲಿಯ ಸಾಂಗೇಟ್‌ನಲ್ಲಿರುವ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಮಾಡಲು ಕೇಳಿಕೊಂಡಿದ್ದಾನೆ. ಸದ್ಯ ಆತನ ಇತರೆ ವಂಚನೆಗಳ ಬಗ್ಗೆ ತನಿಖೆ ನಡೆಯುತ್ತಿದೆ. ಕೇರಳದಲ್ಲಿ ಇತ್ತೀಚೆಗೆ ಇದೇ ರೀತಿಯ ಹಲವು ವಂಚನೆಗಳು ನಡೆದಿದೆ. ವಂಚಕರು ಹಿರಿಯ ಪೊಲೀಸ್ ಅಧಿಕಾರಿಗಳು, ರಾಜಕಾರಣಿಗಳು ಅಥವಾ ಉದ್ಯಮಿಗಳಾಗಿ ನಟಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುವಜನರಿಗಾಗಿ ಪ್ರಾಣವನ್ನೇ ತ್ಯಾಗ ಮಾಡುತ್ತೇನೆ: ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ

ಸುಡುವ ಬಿಸಿಲಿನಲ್ಲಿ ಕುರಿತು ಯುವಜನರು ತಮ್ಮ ಹಕ್ಕೊತ್ತಾಯಗಳ ಈಡೇರಿಕೆಗಾಗಿ ಹೋರಾಟ ನಡೆಸುತ್ತಿದ್ದಾರೆ....

ದೆಹಲಿ ಶಾಲೆಗಳಲ್ಲಿ RSS ಬೋಧನೆ: ಮಕ್ಕಳ ಎಳೆ ಮನಸ್ಸಲ್ಲಿ ಕೋಮುದ್ವೇಷ ಬಿತ್ತುವ ಹುನ್ನಾರ!

ಕೋಮುವಾದಿ, ಕೋಮುದ್ವೇಷಿ, ಸಮಾಜಘಾತುಕ ಸಂಘಟನೆಯ ಬಗ್ಗೆ ಶಾಲೆಗಳಲ್ಲಿ ಬೋಧಿಸುವುದು ಎಳೆ ಮನಸ್ಸುಗಳಲ್ಲಿ...

ಆರ್‌ಎಸ್‌ಎಸ್‌ನ ಕೈಗಳಿಗೆ ಮಹಾತ್ಮ ಗಾಂಧಿಯ ರಕ್ತದ ಕಲೆ ಅಂಟಿದೆ: ಕಾಂಗ್ರೆಸ್‌

ಆರ್‌ಎಸ್‌ಎಸ್ ಮಹಾತ್ಮ ಗಾಂಧಿ, ಭಗತ್ ಸಿಂಗ್ ಮತ್ತು ಚಂದ್ರಶೇಖರ್ ಆಜಾದ್ ಅವರಂತಹ...

RSS ಕುರಿತ ₹100 ನಾಣ್ಯ & ಅಂಚೆ ಚೀಟಿ ಬಿಡುಗಡೆ, ಸಂವಿಧಾನಕ್ಕೆ ಎಸಗಿದ ಘೋರ ಅಪಚಾರ: ಸಿಪಿಐ(ಎಂ)

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶತಮಾನೋತ್ಸವ ಸಮಾರಂಭದ ಪ್ರಯುಕ್ತ ಪ್ರಧಾನಿ ನರೇಂದ್ರ...

Download Eedina App Android / iOS

X