ಬೆಂಗಳೂರು | ಅನಧಿಕೃತವಾಗಿ ಅಳವಡಿಸಿರುವ ಫ್ಲೆಕ್ಸ್, ಬ್ಯಾನರ್‌ ತೆರವು ಮಾಡುವಂತೆ ಆದೇಶ

Date:

Advertisements

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತವಾಗಿ ಅಳವಡಿಸಿರುವ ಫ್ಲೆಕ್ಸ್, ಬ್ಯಾನರ್‌, ಫ್ಲಾಗ್, ಬಂಟಿಂಗ್ಸ್ ಸೇರಿದಂತೆ ಇತ್ಯಾದಿಗಳನ್ನು ನಿಯಮಾನುಸಾರ ತೆರವುಗೊಳಿಸಿ ಅಂತಹವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಆದೇಶಿಸಿದ್ದಾರೆ.

“ಬಿಬಿಎಂಪಿ ಅಧಿಕಾರಿಗಳಿಗೆ ಕರ್ತವ್ಯ ಮತ್ತು ಜವಾಬ್ದಾರಿ ನೀಡಿ ಈ ಆದೇಶ ಹೊರಡಿಸಲಾಗಿದೆ. ಹೈಕೋರ್ಟ್ ಈ ಬಗ್ಗೆ ವಿಚಾರಣೆ ನಡೆಸಿ ಮೂರು ವಾರಗಳ ಕಾಲಾವಕಾಶ ನೀಡಿದೆ. ನಗರದಲ್ಲಿ ಒಂದೇ ಒಂದು ಅನಧಿಕೃತ ಫ್ಲೆಕ್ಸ್ ಕಂಡುಬಂದರೆ ಪಾಲಿಕೆ ಹಾಗೂ ರಾಜ್ಯ ಸರ್ಕಾರ ತಲಾ ₹50,000 ದಂಡ ಕಟ್ಟಬೇಕೆಂದು ನಿರ್ದೇಶನ ನೀಡಿದೆ. ಹಾಗಾಗಿ, ನ್ಯಾಯಾಲಯದ ನಿರ್ದೇಶನದಂತೆ ಕೂಡಲೇ ತುರ್ತು ಕ್ರಮ ಕೈಗೊಂಡು ಅನಧಿಕೃತ ಹೋರ್ಡಿಂಗ್ಸ್, ಫ್ಲೆಕ್ಸ್, ಬ್ಯಾನರ್/ಎಲ್.ಇ.ಡಿ. ಇನ್ನಿತರೇ ಜಾಹಿರಾತು ಫಲಕಗಳನ್ನು ತೆರವುಗೊಳಿಸಲು ಅಗತ್ಯ ಕ್ರಮ ವಹಿಸಬೇಕು. ತೆರವು ಕೈಗೊಂಡ ಕ್ರಮದ ಬಗ್ಗೆ ಅಂಕಿ ಅಂಶಗಳು, ದಾಖಲೆಗಳ ಸಮೇತ ಅನುಪಾಲನಾ ವರದಿಯನ್ನು ಆ.16ರೊಳಗೆ ಕಡ್ಡಾಯವಾಗಿ ಸಲ್ಲಿಸಬೇಕು” ಎಂದು ಆದೇಶದ ಪ್ರತಿಯಲ್ಲಿ ಉಲ್ಲೇಖಿಸಲಾಗಿದೆ.

“ಈ ಸೂಚನೆಗೆ ತಪ್ಪಿದರೆ ನ್ಯಾಯಾಲಯದ ಆದೇಶ ಉಲ್ಲಂಘನೆ, ಆದೇಶ ಪಾಲನೆಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪದಿಂದ ಮುಂದೆ ಎದುರಾಗುವ ಪರಿಣಾಮಗಳಿಗೆ ಸಂಬಂಧಪಟ್ಟ ಅಪರ ಹಾಗೂ ಜಂಟಿ ಆಯುಕ್ತರು ಮತ್ತು ಮುಖ್ಯ ಅಭಿಯಂತರರು ವೈಯಕ್ತಿಕ ಜವಾಬ್ದಾರಿಯಾಗುತ್ತಾರೆ” ಎಂದು ಎಚ್ಚರಿಕೆ ನೀಡಿದೆ.

Advertisements

ಈ ಸುದ್ದಿ ಓದಿದ್ದೀರಾ? ಆ. 15ರಂದು ಲಾಲ್‌ಬಾಗ್‌ನಿಂದ ಪ್ರಯಾಣಿಸಲು ರಿಟರ್ನ್ ಜರ್ನಿ ಪೇಪರ್ ಟಿಕೆಟ್‌: ಬಿಎಂಆರ್‌ಸಿಎಲ್‌

“ಸಂಬಂಧಪಟ್ಟ ವಲಯ ಆಯುಕ್ತರ ಉಸ್ತುವಾರಿಯಲ್ಲಿ ಕಟ್ಟುನಿಟ್ಟಾಗಿ ಎಲ್ಲ ಹೋರ್ಡಿಂಗ್ಸ್, ಫ್ಲೆಕ್ಸ್, ಬ್ಯಾನರ್, ಎಲ್.ಇ.ಡಿ ಸೇರಿದಂತೆ ಇನ್ನಿತರ ಜಾಹೀರಾತು ಫಲಕ ತೆರವುಗೊಳಿಬೇಕು. ಸಂಬಂಧಪಟ್ಟ ಜಂಟಿ ಆಯುಕ್ತರು ಹಾಗೂ ಮುಖ್ಯ ಅಭಿಯಂತರರು ಈ ಬಗ್ಗೆ ತುರ್ತಾಗಿ ಕ್ರಮ ಕೈಗೊಳ್ಳಬೇಕು. ಒಂದು ವೇಳೆ ಹೋರ್ಡಿಂಗ್ಸ್ , ಫ್ಲೆಕ್ಸ್, ಬ್ಯಾನರ್, ಎಲ್.ಇ.ಡಿ ತೆರವುಗೊಳಿಸಲು ವಿಫಲರಾದಲ್ಲಿ ಸಂಬಂಧಪಟ್ಟ ಜಂಟಿ ಆಯುಕ್ತರು ಮತ್ತು ಮುಖ್ಯ ಅಭಿಯಂತರರನ್ನೇ ನೇರ ಹೊಣೆಗಾರರನ್ನಾಗಿ ಮಾಡಿ ತಲಾ ₹50,000 ಠೇವಣಿಯನ್ನು ಅವರಿಂದ ವಸೂಲಿ ಮಾಡಿ ನ್ಯಾಯಾಲಯದಲ್ಲಿ ಇಡಲಾಗುವುದು” ಎಂದು ತಿಳಿಸಿದೆ.

“ಈ ಕುರಿತು ಪಾಲಿಕೆಯ ಎಲ್ಲ ವಲಯ ಆಯುಕ್ತರರು ತಮ್ಮ ವಲಯ ವ್ಯಾಪ್ತಿಯಲ್ಲಿನ ಜಾಹೀರಾತುಗಳ ತೆರವಿಗೆ ಸಂಬಂಧಪಟ್ಟಂತೆ ಅಗತ್ಯ ಕ್ರಮ ಕೈಗೊಳ್ಳಬೇಕು” ಎಂದು ಹೇಳಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

Download Eedina App Android / iOS

X