ಶಿವಮೊಗ, ಪ್ರವಾದಿ ಮುಹಮ್ಮದ್ ರವರ ಸಾರ್ವಕಾಲಿಕ ನ್ಯಾಯದ ಬೋಧನೆಗಳನ್ನು ಜನತೆಗೆ ತಿಳಿಯಪಡಿಸಲು ಜಮಾಅತೆ ಇಸ್ಲಾಮಿ ಹಿಂದ್, ಕರ್ನಾಟಕದ ವತಿಯಿಂದ ಹರಿಕಾರ ಪೈಗಂಬರ್ ಮುಹಮ್ಮದ್ ಶೀರ್ಷಿಕೆಯಡಿ ಸೆಪ್ಟೆಂಬರ್ 3 ರಿಂದ 14ರ ವರೆಗೆ ರಾಜ್ಯಾದ್ಯಂತ ಸೀರತ್ ಅಭಿಯಾನವನ್ನು ಹಮ್ಮಿಕೊಂಡಿದೆ.
ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಕಾರ್ಯಕ್ರಮದ ಸಂಚಾಲಕ ಮಹಮ್ಮದ್ ಇಲಿಯಾಸ್, ಪ್ರವಾದಿ ಮುಹಮ್ಮದ್ ನ್ಯಾಯ ಮತ್ತು ಮಾನವೀಯತೆಯ ಸಂದೇಶಗಳನ್ನು ನಾಡಿನ ಜನತೆಗೆ ತಲುಪಿಸುವುದು ಮತ್ತು ಪ್ರವಾದಿಯವರ ಬಗೆಗಿನ ತಪ್ಪು ಕಲ್ಪನೆಗಳನ್ನು ಹೋಗಲಾಡಿಸುವುದು ಹಾಗೂ ವಿವಿಧ ಧರ್ಮಿಯರ ನಡುವಿನ ಪರಸ್ಪರ ಸಂಬಂಧಗಳನ್ನು ಬಲಪಡಿಸುವುದು ಈ ಅಭಿಯಾನದ ಉದ್ದೇಶವಾಗಿದೆ ಎಂದರು.
ಈ ಅಭಿಯಾನದ ಪುಯುಕ್ತ ಶಾಂತಿ ಪ್ರಕಾಶನ ಪ್ರಕಟಿಸಿರುವ ಪ್ರವಾದಿಯವರ ಬದುಕು ಮತ್ತು ಸಂದೇಶಗಳ ಬಗ್ಗೆ ಬೆಳಕು ಚೆಲ್ಲುವ ಎರಡು ಹೊಸ ಪುಸ್ತಕಗಳನ್ನು ರಾಜ್ಯಾದ್ಯಂತ ಬಿಡುಗಡೆಗೊಳಿಸಲಾಗುವುದು ಎಂದರು.
ಈ ಅಭಿಯಾನದ ಭಾಗವಾಗಿ ರಾಜ್ಯಾದ್ಯಂತ ವಿವಿಧ ಸಮಾಜ ಸೇವಾ ಚಟುವಟಿಕೆಗಳು, ಸಂವಾದ, ವಿಚಾರಗೋಷ್ಠಿ, ಸಾರ್ವಜನಿಕ ಸಭೆಗಳು, ಪ್ರಬಂಧ ಸ್ಪರ್ಧೆ ಮುಂತಾದ ಹಲವು ಕಾರ್ಯಕ್ರಮಗಳು ನಡೆಯಲಿವೆ.ಶಿವಮೊಗ್ಗದಲ್ಲಿ ಪ್ರಬಂಧ ಸ್ಪಧೆ, ಶಿವಮೊಗ್ಗ ನಗರದ ಗಣ್ಯ ವ್ಯಕ್ತಿಗಳಿಂದ ಭೇಟಿ, ಸ್ವಚ್ಛತಾ ಕಾರ್ಯಕ್ರಮ, ಸೀರತ್ ಪ್ರವಚನ, ಅನಾಥ ಆಶ್ರಮ ಮತ್ತು ಹಾಸ್ಪಿಟಲ್ ಭೇಟಿ ನಡೆಯಲಿದೆ ಎಂದರು.