ಈ ದಿನ ಇಂಪ್ಯಾಕ್ಟ್ l ಕಾಲು ಸಂಕ ಹೋಗಿ ಸೇತುವೆ ನಿರ್ಮಾಣ; ಅಭಿನಂದನೆ ಸಲ್ಲಿಸಿದ ಗ್ರಾಮಸ್ಥರು

Date:

Advertisements

ಹಳ್ಳ ದಾಟಲು ಸೇತುವೆ ಇಲ್ಲ. ಜನರು ಒಂದೂರಿಂದ ಮತ್ತೊಂದು ಊರಿಗೆ ತೆರಳಲು ದಿನನಿತ್ಯ ಮರದ ದಿಮ್ಮಿ ಅಳವಡಿಸಿದ್ದ, ಕಾಲು ಸಂಕದಲ್ಲಿಯೇ ಓಡಾಡಬೇಕಾಗಿತ್ತು. ಹಾಗೆಯೇ, ಮಳೆಗಾಲದಲ್ಲಂತೂ ಪರಿಸ್ಥಿತಿ ಇನ್ನೂ ಹದಗೆಟ್ಟಿತ್ತು. ಆದರೆ ಆ ಗ್ರಾಮಕ್ಕೆ ಈಗ ಸೇತುವೆ ಭಾಗ್ಯ ಲಭಿಸಿದೆ. ಹೌದು ಇದಕ್ಕೆ ಕಾರಣವಾದದ್ದು ಈ ದಿನ.ಕಾಮ್ ವರದಿ.

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹೊರಲೇ ಗ್ರಾಮವು ಗುಡ್ಡೆತೋಟ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿದೆ. ಈ ಗ್ರಾಮದಲ್ಲಿ ಹೆಚ್ಚಾಗಿ ಆದಿವಾಸಿ ಮತ್ತು ಬುಡಕಟ್ಟು ಸಮುದಾಯದ ಜನರು ವಾಸುತ್ತಿದ್ದಾರೆ.

Screenshot 2025 09 01 17 05 34 22 7352322957d4404136654ef4adb64504
ಮೊದಲ ಹಂತದ ಸೇತುವೆ ಅಭಿವೃದ್ಧಿ ಕಾಮಗಾರಿ

ಬೇಸಿಗೆಯಲ್ಲಿ ಹಳ್ಳದಲ್ಲಿ ನೀರು ಕಡಿಮೆ ಇರುವುದರಿಂದ ಜೀವನ ಹೇಗೂ ಸಾಗುತ್ತದೆ. ಆದರೆ, ಮಳೆಗಾಲದಲ್ಲಿ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತವೆ. ಆಗ, ಪಕ್ಕದೂರಿಗೆ ಹೋಗಲೂ ಕಷ್ಟ ಪಡಬೇಕಾಗಿತ್ತು. ಸೇತುವೆ ಇಲ್ಲದೆ ದಿನಸಿ ಹಾಗೂ ಹಲವು ಸಾಮಗ್ರಿಗಳನ್ನು, ಕೃಷಿ ಯಂತ್ರೋಪಕರಣಗಳನ್ನು ಸಹ ಹೊತ್ತೊಯ್ಯಲು ಹರಸಾಹಸ ಪುಡುವಂತಾಗಿತ್ತು. ಈ ಕುರಿತು 12 ಸೆಪ್ಟಂಬರ್ 2023ರಲ್ಲಿ ಈ ದಿನ.ಕಾಮ್ ವರದಿ ಮತ್ತು ವಿಡಿಯೋ ವರದಿ ಪ್ರಕಟಿಸಿತ್ತು. ಈ ದಿನ ವರದಿಯಿಂದ  ಕ್ಷೇತ್ರದ ಶಾಸಕರಿಗೆ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರಿಗೆ ಗಮನಕ್ಕೆ ತಂದಿದ್ದ ಬೆನ್ನಲ್ಲೇ ಈಗ ಸೇತುವೆ ನಿರ್ಮಾಣವಾಗಿರುವುದರಿಂದ ಆ ಸಮಸ್ಯೆ ಬಗೆಹರಿದಿದೆ ಎಂದು ಗ್ರಾಮಸ್ಥರು ಈ ದಿನ. ಕಾಮ್ ಗೆ ಧನ್ಯವಾದ ತಿಳಿಸಿದ್ದಾರೆ.

Screenshot 2025 09 01 17 05 58 21 7352322957d4404136654ef4adb64504
ಎರಡನೇ ಹಂತದ ಸೇತುವೆ ಅಭಿವೃದ್ಧಿ ಕಾಮಗಾರಿ

ಪುಟ್ಟ ಮಕ್ಕಳನ್ನು ಅಂಗನವಾಡಿಗೆ ಕಳಿಸಲು ಪೋಷಕರು ಭಯ ಪಡುವಂತಾಗಿತ್ತು. ಗರ್ಭಿಣಿಯರು, ಬಾಣಂತಿಯರು ಹಳ್ಳ ದಾಟಲಾಗದೆ ಸಂಕಷ್ಟ ಎದುರಿಸಬೇಕಾಗಿತ್ತು. ವಿದ್ಯಾರ್ಥಿಗಳು ಹಾಗೂ ಗ್ರಾಮದ ಜನರು ಹಳ್ಳ ದಾಟುವಾಗ ಬಿದ್ದು, ಗಾಯಗಳಾಗಿವೆ. ಆದರೂ, ಅಧಿಕಾರಿಗಳು ನಮ್ಮ ಗೋಳು ಕೇಳುತ್ತಿಲ್ಲ ಎಂದು ಈ ದಿನ.ಕಾಮ್ ವರದಿ ಪ್ರಕಟಿಸಿದ ನಂತರ ಸಂಬಂಧಪಟ್ಟ ಶಾಸಕರು ಹಾಗೂ ಪಂಚಾಯಿತಿಗೆ ಸೇರಿದ ಸದಸ್ಯರು ಗಮನವಹಿಸಿ ಸೇತುವೆ ಮಾಡಿಕೊಟ್ಟಿದ್ದಾರೆ ಎಂದು ಸುರೇಶ್ ಈ ದಿನ.ಕಾಮ್ ಜೊತೆ ಮಾತಾಡಿದ್ದಾರೆ.

ಹೊರಲೇ ಗ್ರಾಮದ ಸಮಸ್ಯೆ ಬಗ್ಗೆ ಸೆಪ್ಟಂಬರ್ 2023ರಲ್ಲಿ ಗ್ರಾಮ ಪಂಚಾಯತಿ ಉಪಾಧ್ಯಕ್ಷ ವಾಸು ಅವರು ಈದಿನ.ಕಾಮ್ ಜೊತೆ ಮಾತನಾಡಿಸಿದಾಗ “ ಅನುದಾನ ಬಿಡುಗಡೆ ಮಾಡುತ್ತೇವೆಂದು ಕ್ಷೇತ್ರದ ಶಾಸಕರು ತಿಳಿಸಿದ್ದಾರೆ. ಹಣ ಬಿಡುಗಡೆಯಾದ ತಕ್ಷಣ ಕೆಲಸ ಆರಂಭಿಸುತ್ತೇವೆ” ಎಂದು ಹೇಳಿದ್ದರು. ಈಗ ಹಂತ ಹಂತವಾಗಿ ಒಂದುವರೆ ವರ್ಷದಲ್ಲಿ ಮಳೆಗಾಲದ ಬಿಡುವು ನೋಡಿಕೊಂಡು  ಸೇತುವೆ ನಿರ್ಮಾಣ ಮಾಡಿ 2025 ಏಪ್ರಿಲ್ ತಿಂಗಳಲ್ಲಿ ಸಂಪೂರ್ಣ ಕೆಲಸ ಮುಗಿಸಿ, ಅದೇ ತಿಂಗಳಲ್ಲಿ ಶೃಂಗೇರಿ ಕ್ಷೇತ್ರದ ಶಾಸಕರಾದ ಟಿ.ಡಿ ರಾಜೇಗೌಡರನ್ನು ಆಹ್ವಾನಿಸಿ ಸೇತುವೆ ಉದ್ಘಾಟನೆ ಮಾಡಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಹಳ್ಳಕ್ಕಿಲ್ಲ ಸೇತುವೆ; ಗ್ರಾಮಸ್ಥರ ಸಂಕಷ್ಟಕ್ಕಿಲ್ಲ ಪರಿಹಾರ

ಹಾಗೆಯೇ ಸೇತುವೆ ನಿರ್ಮಿಸಲು ಅನುದಾನ ಬಿಡುಗಡೆ ಮಾಡಿದ ಈ ಕ್ಷೇತ್ರದ ಶಾಸಕರಿಗೂ ಹಾಗೂ ಈ ಸಮಸ್ಯೆ ಬಗ್ಗೆ ವರದಿ ಪ್ರಕಟಿಸಿದ್ದ ಈ ದಿನ. ಕಾಮ್ ಗೆ ಗ್ರಾಮ ಪಂಚಾಯಿತಿ ಸದಸ್ಯರಾದ ವಾಸು ಅಭಿನಂದನೆ ತಿಳಿಸಿದ್ದಾರೆ.

WhatsApp Image 2024 10 24 at 12.02.30
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ’ಗೆ ಇತಿಹಾಸಕಾರ ರಾಮಚಂದ್ರ ಗುಹಾ ಆಯ್ಕೆ

ಪ್ರಸಿದ್ಧ ಭಾರತೀಯ ಇತಿಹಾಸಕಾರ, ಅಂಕಣಕಾರ ಹಾಗೂ ಚಿಂತಕ ಡಾ.ರಾಮಚಂದ್ರ ಗುಹಾ ಅವರನ್ನು...

ಮುಂದಿನ ವರ್ಷಗಳಲ್ಲಿಯೂ ನಾನೇ ದಸರಾ ಪುಷ್ಪಾರ್ಚನೆ ಮಾಡುವೆ: ಸಿಎಂ ಸಿದ್ದರಾಮಯ್ಯ

ವಿರೋಧಪಕ್ಷಗಳು ಭವಿಷ್ಯಕಾರರಲ್ಲ. ವಸ್ತುಸ್ಥಿತಿಯ ಬಗ್ಗೆ ಅರಿವಿಲ್ಲದೇ ಮಾತನಾಡುವ ವಿಪಕ್ಷಗಳ ಭವಿಷ್ಯ ನಿಜವಾಗುವುದಿಲ್ಲ....

ಗುಮಾನಿ ಹುಟ್ಟುಹಾಕಿದ ‘ವಿಲ್’; ‘ಕೊನೆಗಾಲದಲ್ಲಿ ಭೈರಪ್ಪ ಖಾತೆಯಿಂದ ದುಡ್ಡು ದೋಚಿದ್ದು ಯಾರು?’

"ಭೈರಪ್ಪನವರ ಉಯಿಲು (ವಿಲ್) ನೋಡುತ್ತಿದ್ದರೆ ಎಲ್ಲ ಪ್ಲ್ಯಾನ್ ಮಾಡಿ ಬರೆಸಿರುವಂತಿದೆ ಎಂದು...

ರಸ್ತೆಗುಂಡಿ ಬಗ್ಗೆ ಸಾರ್ವಜನಿಕರು ಮಾಹಿತಿ‌ ನೀಡುವ ವ್ಯವಸ್ಥೆ ರಾಜ್ಯದಲ್ಲಿ ಮಾತ್ರ: ಡಿಸಿಎಂ ಡಿ ಕೆ ಶಿವಕುಮಾರ್

ರಸ್ತೆಗುಂಡಿಗಳನ್ನು ಸಾರ್ವಜನಿಕಕರು ಗಮನಿಸಿ ಸರ್ಕಾರಕ್ಕೆ ತಿಳಿಸುವ ವ್ಯವಸ್ಥೆ ಇಡೀ ದೇಶದಲ್ಲಿ ಎಲ್ಲಾದರೂ...

Download Eedina App Android / iOS

X