ಕೋಲಾರ | ಭೀಮ ಪ್ರಜಾ ಸಂಘದ ಜಿಲ್ಲಾ ಪದಾಧಿಕಾರಿಗಳ ಆಯ್ಕೆ

Date:

Advertisements

ಕೋಲಾರದಲ್ಲಿ ಭೀಮ ಪ್ರಜಾ ಸಂಘದ ಅಧ್ಯಕ್ಷ ವೈಟ್ ಫೀಲ್ಡ್ ಮುರುಗೇಶ್ ಮತ್ತು ಕೋಲಾರ ಜಿಲ್ಲಾ ಅಧ್ಯಕ್ಷ ಕಂಥೆಪುರ ಮಠ ಶಿವಾನಂದ ನೇತೃತ್ವದಲ್ಲಿ ಸಭೆ ನಡೆಸಿ ಭೀಮ ಪ್ರಜಾ ಸಂಘದ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.

ಭೀಮ ಪ್ರಜಾ ಸಂಘ ಬಡವರ ಪರ ದ್ವನಿಯಾಗಿ ಕಾರ್ಯ ಮಾಡಿಕೊಂಡು ಬರುತ್ತಿದ್ದೇವೆ. ದೇಶದ ಅತಿ ಎತ್ತರ ಬಾಬಾ ಸಾಹೇಬರ ಪುತ್ಥಳಿ ನಿರ್ಮಾಣ ಮಾಡುತ್ತೇವೆ ಎಂದು ಹೇಳಿದ್ದು ರಾಜ್ಯದ ಹೆಮ್ಮೆಯ ಮುಖ್ಯಮಂತ್ರಿ ದಲಿತರಾಮಯ್ಯ ಅಂತ ಹೇಳುವ ‌ಸಿದ್ದರಾಮಯ್ಯ ನವರು ಕೂಡಲೇ ಅದನ್ನು ಮಾಡಬೇಕು ಎಂದು ಆಗ್ರಹಿಸಲು ನವೆಂಬರ್ 3 ರಂದು ಕೋಲಾರದಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ವರೆಗೆ ಕಾಲ್ನಡಿಗೆ ಜಾಥಾ ಹಮ್ಮಿಕೊಂಡಿದ್ದೇವೆ. ಭೀಮ ಪ್ರಜಾ ಸಂಘದ ರಾಜ್ಯಾಧ್ಯಕ್ಷ ವೈಟ್ ಫೀಲ್ಡ್ ಮುರುಗೇಶ್ ತಿಳಿಸಿದರು.

ಕೋಲಾರ ಜಿಲ್ಲಾ ಭೀಮ ಪ್ರಜಾ ಸಂಘದ ಪದಾಧಿಕಾರಿಗಳಿಗೆ ಅಭಿನಂದಿಸಿ, ಎಲ್ಲರೂ ಬಡವರ, ದಲಿತರ ಪರ ಕೆಲಸ ಮಾಡ್ಬೇಕು, ಎಂದು ಜಿಲ್ಲಾಧ್ಯಕ್ಷ ಕಂಥೇಪುರ ಶಿವಾನಂದ ಹೇಳಿದರು.

ಭೀಮ ಪ್ರಜಾ ಸಂಘದ ಕೋಲಾರ ತಾಲೂಕು ಅಧ್ಯಕ್ಷರಾಗಿ ಗಂಗಾಧರ್. ಬಿ, ಬಂಗಾರಪೇಟೆ ಅಧ್ಯಕ್ಷರಾಗಿ ಹೆಚ್.ಎಂ.ಎನ್ ನಾರಯಣಪ್ಪ, ಉಪಾಧ್ಯಕ್ಷರಾಗಿ ಎಂ. ರಾಮಚಂದ್ರಪ, ಕೋಲಾರ ಜಿಲ್ಲಾ ಕಾರ್ಯದರ್ಶಿ ಶ್ರೀನಿವಾಸ್, ಕೆಜಿಎಫ್ ಅಧ್ಯಕ್ಷರಾದ ಓಬತ್ ಕುಮಾರ್,ಉಪಾಧ್ಯಕ್ಷ ಪ್ರಭಾಕರನ್, ಕೆಜಿಎಫ್ ಯುವ ಘಟಕದ ಅಧ್ಯಕ್ಷರಾದ ವಿಭಿಲ್ ಕುಮಾರ್, ಕೋಲಾರ ಜಿಲ್ಲಾ ಉಪಾಧ್ಯಕ್ಷರಾದ ನಂದಿನಿ ಅರಸು, ಬಂಗಾರಪೇಟೆ ಮೈನಾರಿಟಿ ಘಟಕದ ಅಧ್ಯಕ್ಷರಾಗಿ ಸೈಯದ್ ಪಾಷ ಇವರನ್ನು ಆಯ್ಕೆ ಮಾಡಲಾಗಿದೆ.

ಇದನ್ನೂ ಓದಿ: ಕೋಲಾರ | ಸಾರ್ವಜನಿಕ ಆಸ್ಪತ್ರೆಯಲ್ಲಿ ಔಷಧಿಗೆ ಹಣ ಕೇಳಿದರೆ ಕ್ರಮ: ಶಾಸಕ ಕೊತ್ತೂರು ಮಂಜುನಾಥ್

ಈ ಸಂದರ್ಭದಲ್ಲಿ ಭೀಮ ಪ್ರಜಾ ಸಂಘದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೋಜುಗಾದ ಸೂಜು ಮಲ್ಲಿಗೆ ಹುಡುಗಿ ಹಾಡು : ಇಮ್ಮಡಿಯಾದ ಪ್ರೇಕ್ಷಕರ ಉತ್ಸಾಹ

 ಕಳೆದ 10 ದಿನಗಳಿಂದ ದಸರಾ ಉತ್ಸವ ಸಂಭ್ರಮದಲ್ಲಿ ಮುಳುಗಿದ್ದ ಪ್ರೇಕ್ಷಕರ ಉತ್ಸಾಹ...

ತುಮಕೂರು ದಸರಾ : ಸಚಿವರಿಂದ ವಿಶೇಷ ಪೂಜೆ

ತುಮಕೂರು ದಸರಾ ಉತ್ಸವದ ಕಡೆಯ ದಿನವಾದ ವಿಜಯದಶಮಿಯಂದು ಗೃಹ ಹಾಗೂ ಜಿಲ್ಲಾ...

ಯುವಪರಿವರ್ತನೆ ಯಾತ್ರೆ: ಬಾಗಲಕೋಟೆಯಲ್ಲಿ ಚಾಲನೆ

ಯುವಜನರನ್ನು ರಾಜ್ಯದ ಅಭಿವೃದ್ಧಿಯತ್ತ ಚಿತ್ತಹರಿಸಲು, ಪ್ರಜೆಗಳ ಆರೋಗ್ಯ, ಶಿಕ್ಷಣ, ಸಬಲೀಕರಣ, ಉದ್ಯೋಗದ...

ಕೊಪ್ಪಳ | ಪ್ರವಾದಿ ಮಹಮ್ಮದ್‌ ಸಂದೇಶವನ್ನು ನಾವು ಪಾಲನೆ ಮಾಡಬೇಕು: ಲಾಲ್ ಹುಸೇನ್ ಕಂದ್ಗಲ್

'ಖುರಾನ್' ಬರುವ ಪ್ರವಾದಿ ಮಹಮ್ಮದ್‌ ಅವರು ಹೇಳಿದ ಸತ್ಯವನ್ನೇ ಭಾರತೀಯ ಪುರಾಣಗಳು...

Download Eedina App Android / iOS

X