ಉಡುಪಿ | ಶವ ಸ್ವೀಕರಿಸಲು ಒಪ್ಪದ ಸಹೋದರ: ಅಂತ್ಯಕ್ರಿಯೆ ನೆರವೇರಿಸಿದ ‌ವಿಶು ಶೆಟ್ಟಿ

Date:

Advertisements

ಉಡುಪಿ ಜಿಲ್ಲೆಯ ಕಾಪು ಠಾಣಾ ವ್ಯಾಪ್ತಿಯಲ್ಲಿ ಮೃತಪಟ್ಟ ವ್ಯಕ್ತಿಯ ಸಹೋದರ ಅಂತ್ಯಕ್ರಿಯೆಗೆ ಶವ ಸ್ವೀಕರಿಸಲು ಒಪ್ಪದ ಕಾರಣ ಸಮಾಜ ಸೇವಕ ವಿಶು ಶೆಟ್ಟಿ ಅವರೇ ಮುಂದೆ ನಿಂತು ಮೃತನ ಅಂತ್ಯಸಂಸ್ಕಾರವನ್ನು ಬೀಡಿನಗುಡ್ಡೆಯ ರುದ್ರ ಭೂಮಿಯಲ್ಲಿ ನೆರವೇರಿಸಿದ ಘಟನೆ ಸೋಮವಾರ ನಡೆದಿದೆ.

ಮೃತ ವ್ಯಕ್ತಿಯ ಬಗ್ಗೆ ಕಾಪು ಠಾಣೆಯಲ್ಲಿ ದೂರು ದಾಖಲಾಗಿತ್ತು. ಪೊಲೀಸರು ಮೃತನ ಸಹೋದರನನ್ನು ಕರೆಯಿಸಿ ಕಾನೂನು ಪ್ರಕ್ರಿಯೆ ನಡೆಸಿದರು. ಕೊನೆಗೆ ಅಂತ್ಯಸಂಸ್ಕಾರ ನಡೆಸಲು ಮೃತ ದೇಹವನ್ನು ಪಡೆಯಲು ಸಹೋದರ ನಿರಾಕರಿಸಿದರು. ಆತನ ಮನವೊಲಿಸುವ ಕೆಲಸವೂ ವಿಫಲವಾಯಿತು. ಕೊನೆಗೆ ಜಿಲ್ಲಾಸ್ಪತ್ರೆಯಲ್ಲಿ ಶವ ಪರೀಕ್ಷೆ ನಡೆಸಿದ ನಂತರ ವಿಶು ಶೆಟ್ಟಿ ಅವರೇ ಶವವನ್ನು ಸ್ವೀಕರಿಸಿ, ಮೃತ ವ್ಯಕ್ತಿಯ ಧರ್ಮದ ಪ್ರಕಾರ ದಫನ ಕಾರ್ಯ ನಡೆಸಿದರು.

ಕಾರ್ಯಾಚರಣೆಯಲ್ಲಿ ಸಾಮಾಜಿಕ ಕಾರ್ಯಕರ್ತರಾದ ಹುಸೇನ್, ರಾಮದಾಸ್ ಪಾಲನ್ ಉದ್ಯಾವರ ಹಾಗೂ ಉದ್ಯಾವರದ ಕನಸಿನ ಮನೆಯ ಶಿವ ನೆರವಾದರು. ಅಂಬಲಪಾಡಿ ಕೃಷ್ಣ ಜೆಸಿಬಿ ನೀಡಿ ಸಹಕರಿಸಿದರು.
ಈ ಪ್ರಕರಣವನ್ನು ಗಮನಿಸಿದಾಗ ಸಹೋದರತೆ, ಬಾಂಧವ್ಯ ಎಲ್ಲಾ ಮರೀಚಿಕೆಯೇ ಎಂಬ ಪ್ರಶ್ನೆ ಕಾಡದಿರದು ಎಂದು ವಿಶು ಶೆಟ್ಟಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುವಪರಿವರ್ತನೆ ಯಾತ್ರೆ: ಬಾಗಲಕೋಟೆಯಲ್ಲಿ ಚಾಲನೆ

ಯುವಜನರನ್ನು ರಾಜ್ಯದ ಅಭಿವೃದ್ಧಿಯತ್ತ ಚಿತ್ತಹರಿಸಲು, ಪ್ರಜೆಗಳ ಆರೋಗ್ಯ, ಶಿಕ್ಷಣ, ಸಬಲೀಕರಣ, ಉದ್ಯೋಗದ...

ಕೊಪ್ಪಳ | ಪ್ರವಾದಿ ಮಹಮ್ಮದ್‌ ಸಂದೇಶವನ್ನು ನಾವು ಪಾಲನೆ ಮಾಡಬೇಕು: ಲಾಲ್ ಹುಸೇನ್ ಕಂದ್ಗಲ್

'ಖುರಾನ್' ಬರುವ ಪ್ರವಾದಿ ಮಹಮ್ಮದ್‌ ಅವರು ಹೇಳಿದ ಸತ್ಯವನ್ನೇ ಭಾರತೀಯ ಪುರಾಣಗಳು...

ಶಿವಮೊಗ್ಗದ ಸಂಚಾರ ವ್ಯವಸ್ಥೆಯಲ್ಲಿ ಅರಾಜಕತೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಾಗರಿಕರು ಹೈರಾಣು

ಒಮ್ಮೆ ಶಾಂತ, ಶಿಕ್ಷಣ ಹಾಗೂ ಸಂಸ್ಕೃತಿಯ ತಾಣವಾಗಿದ್ದ ಶಿವಮೊಗ್ಗ ನಗರ ಇತ್ತೀಚಿನ...

ತುಮಕೂರು | ಗಾಂಧೀ ತತ್ವಗಳಿಗೆ ವಿಶ್ವ ಮನ್ನಣೆ : ಡಾ. ಜಿ.ಪರಮೇಶ್ವರ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಹಿಂಸಾ ತತ್ವಗಳಿಗೆ ಇಡೀ ವಿಶ್ವದಲ್ಲಿಯೇ ಮನ್ನಣೆ ದೊರೆತಿದೆ...

Download Eedina App Android / iOS

X