ರೇಣುಕಾಸ್ವಾಮಿ ಕೊಲೆ ಪ್ರಕರಣ | ಪವಿತ್ರಾ ಗೌಡ ಜಾಮೀನು ಅರ್ಜಿ ವಜಾ

Date:

Advertisements

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಪವಿತ್ರಾ ಗೌಡ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಜಾ ಆಗಿದೆ.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪವಿತ್ರಾ ಗೌಡ, ದರ್ಶನ್ ಪ್ರದೋಷ್ ಸೇರಿ 17 ಜನರು ಆರೋಪಿಗಳಾಗಿದ್ದಾರೆ. ದರ್ಶನ್, ಪವಿತ್ರಾ ಗೌಡ ಸೇರಿದಂತೆ ಏಳು ಆರೋಪಿಗಳ ಜಾಮೀನನ್ನು ಸುಪ್ರೀಂಕೋರ್ಟ್ ವಜಾ ಮಾಡಿದ ಕಾರಣ ಏಳು ಮಂದಿ ಆರೋಪಿಗಳು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಕೆಳ ಹಂತದ ನ್ಯಾಯಾಲಯದಲ್ಲಿ ಪವಿತ್ರಾ ಗೌಡ ಅವರು ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದರು. ತಮ್ಮಿಂದ ರೇಣುಕಾ ಸ್ವಾಮಿ ನಿಧನ ಹೊಂದಿಲ್ಲ ಎಂಬುದನ್ನೂ ಸೇರಿದಂತೆ, ತಾನು ಮಹಿಳೆ ಹಾಗೂ ಸಿಂಗಲ್ ಮದರ್ ಆಗಿದ್ದು ಮಗಳ ಆರೈಕೆ ಮಾಡಬೇಕು ಇನ್ನಿತರೆ ಕಾರಣಗಳನ್ನು ಪವಿತ್ರಾ ಗೌಡ ನೀಡಿದ್ದರು. ಆದರೆ ಯಾವುದೇ ಕಾರಣವನ್ನು ನ್ಯಾಯಾಲಯ ಪರಿಗಣಿಸಿಲ್ಲ. ಪವಿತ್ರಾ ಅವರ ಜಾಮೀನು ಅರ್ಜಿಯನ್ನು ಕೆಳಹಂತದ ನ್ಯಾಯಾಲಯ ರದ್ದು ಮಾಡಿದೆ.

ಈ ಹಿಂದೆ ವಿಚಾರಣೆ ನಡೆಸಿ ಆದೇಶ ಕಾಯ್ದಿರಿಸಿದ ಕೋರ್ಟ್ ಇಂದು ತೀರ್ಪು ಪ್ರಕಟಿಸಿದೆ. 64ನೇ ಸೆಷನ್ಸ್ ಕೋರ್ಟ್ ನಲ್ಲಿ ನಡೆದ ವಿಚಾರಣೆಯಲ್ಲಿ ಜಾಮೀನು ಅರ್ಜಿ ವಜಾ ಮಾಡಲಾಗಿದೆ. ನ್ಯಾ. ಐ ಪಿ ನಾಯ್ಕ್ ಅವರಿಂದ ಆದೇಶ ಪ್ರಕಟವಾಗಿದ್ದು ಜಾಮೀನು ಅರ್ಜಿಯನ್ನು ವಜಾ ಮಾಡಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ’ಗೆ ಇತಿಹಾಸಕಾರ ರಾಮಚಂದ್ರ ಗುಹಾ ಆಯ್ಕೆ

ಪ್ರಸಿದ್ಧ ಭಾರತೀಯ ಇತಿಹಾಸಕಾರ, ಅಂಕಣಕಾರ ಹಾಗೂ ಚಿಂತಕ ಡಾ.ರಾಮಚಂದ್ರ ಗುಹಾ ಅವರನ್ನು...

ಮುಂದಿನ ವರ್ಷಗಳಲ್ಲಿಯೂ ನಾನೇ ದಸರಾ ಪುಷ್ಪಾರ್ಚನೆ ಮಾಡುವೆ: ಸಿಎಂ ಸಿದ್ದರಾಮಯ್ಯ

ವಿರೋಧಪಕ್ಷಗಳು ಭವಿಷ್ಯಕಾರರಲ್ಲ. ವಸ್ತುಸ್ಥಿತಿಯ ಬಗ್ಗೆ ಅರಿವಿಲ್ಲದೇ ಮಾತನಾಡುವ ವಿಪಕ್ಷಗಳ ಭವಿಷ್ಯ ನಿಜವಾಗುವುದಿಲ್ಲ....

ಗುಮಾನಿ ಹುಟ್ಟುಹಾಕಿದ ‘ವಿಲ್’; ‘ಕೊನೆಗಾಲದಲ್ಲಿ ಭೈರಪ್ಪ ಖಾತೆಯಿಂದ ದುಡ್ಡು ದೋಚಿದ್ದು ಯಾರು?’

"ಭೈರಪ್ಪನವರ ಉಯಿಲು (ವಿಲ್) ನೋಡುತ್ತಿದ್ದರೆ ಎಲ್ಲ ಪ್ಲ್ಯಾನ್ ಮಾಡಿ ಬರೆಸಿರುವಂತಿದೆ ಎಂದು...

ರಸ್ತೆಗುಂಡಿ ಬಗ್ಗೆ ಸಾರ್ವಜನಿಕರು ಮಾಹಿತಿ‌ ನೀಡುವ ವ್ಯವಸ್ಥೆ ರಾಜ್ಯದಲ್ಲಿ ಮಾತ್ರ: ಡಿಸಿಎಂ ಡಿ ಕೆ ಶಿವಕುಮಾರ್

ರಸ್ತೆಗುಂಡಿಗಳನ್ನು ಸಾರ್ವಜನಿಕಕರು ಗಮನಿಸಿ ಸರ್ಕಾರಕ್ಕೆ ತಿಳಿಸುವ ವ್ಯವಸ್ಥೆ ಇಡೀ ದೇಶದಲ್ಲಿ ಎಲ್ಲಾದರೂ...

Download Eedina App Android / iOS

X