ಕೊಪ್ಪಳ | ಧರ್ಮ ಮೀರಿ ಭಾವೈಕ್ಯತೆ ಸಾರಿದ ಇರಕಲ್ಲಗಡ ಗಣೆಶೋತ್ಸವ

Date:

Advertisements

ಕೊಪ್ಪಳ ತಾಲೂಕಿನ ಇರಕಲ್ಲಗಡ ಗ್ರಾಮದಲ್ಲಿ ಹಿಂದು ಹಾಗೂ ಮುಸ್ಲಿಂ ಧರ್ಮೀಯರು ಸೇರಿ ಗಣೇಶೋತ್ಸವ ಆಚರಿಸಿ ಧಾರ್ಮಿಕ ಸಾಮರಸ್ಯದ ಸಂದೇಶ ಸಾರಿದ್ದಾರೆ.

ಇರಕಲ್ಲಗಡದಲ್ಲಿ ಗಜಾನನ ಮಿತ್ರ ಮಂಡಳಿ ವತಿಯಿಂದ ಆಯೋಜಿಸಿದ್ದ ಗಣೇಶೋತ್ಸವದಲ್ಲಿ 4ನೇ ದಿನದ ಊಟದ ವ್ಯವಸ್ಥೆಯನ್ನು ಗ್ರಾಮದ ಮುಸ್ಲೀಂ ಸಮುದಾಯವೇ ವಹಿಸಿಕೊಂಡು ಭಾರತದ ಸಹೋದರತ್ವ ತತ್ವವನ್ನು ಮತ್ತೆ ಸಾಬೀತು ಮಾಡಿದ್ದಾರೆ.

ಮಾಜಿ ಮಂಡಳ ಪಂಚಾಯತ್ತಿ ಪ್ರಧಾನರಾದ ಈರಬಸಪ್ಪ ಪಟ್ಟಣಶೆಟ್ಟಿ ಮಾತನಾಡಿ, “ಭಾಷೆ, ಧರ್ಮವನ್ನು ಮೀರಿ ನಾವೆಲ್ಲ ಮನುಷ್ಯರು, ಮೇಲಾಗಿ ಭಾರತೀಯರು ಎಂಬ ಸಂದೇಶವನ್ನು ಇರಕಲ್ಲಗಡದ ಮುಸ್ಲಿಂ ಬಾಂಧವರು ಮತ್ತು ಹಿಂದೂಗಳು ಸಾರಿದ್ದೇವೆ. ಧರ್ಮದ ನಾಮ ಬದಲಾಗಿರಬಹುದು, ಆಚರಣೆ ಬದಲಾಗಿರಬಹುದು, ಆದರೆ ನಮ್ಮ ಭಾವನೆಗಳು ಒಂದೆ. ಪೂಜೆಯ ಕ್ರಮಗಳು ಬೇರೆಬೇರೆಯಾಗಿರಬಹುದು; ಆದರೆ, ನಂಬುವುದು ಒಬ್ಬ ದೇವರನ್ನೆ. ಹಾಗಾಗಿ ಹಿಂದೂ-ಮುಸ್ಲಿಂ ಎಂಬ ಬೇಧವಿಲ್ಲ. ನಾವೆಲ್ಲ ಭಾಯಿ ಭಾಯಿ” ಎಂದರು.

ಮುಸ್ಲಿಂ ಸಮುದಾಯದ ಮುಖಂಡರ ಈ ಸಹಭಾವನೆಗೆ ಗ್ರಾಮಸ್ಥರು ತಮ್ಮ ಬೆಂಬಲ ನೀಡಿದರು. ಪ್ರೀತಿ, ವಾತ್ಸಲ್ಯ, ಧರ್ಮೀಯ ಸಹಿಷ್ಣುತೆ ಮತ್ತು ರಾಷ್ಟ್ರೀಯ ಏಕತೆಯ ಸಂಕೇತವಾಗಿ ಈ ಬಾರಿಯ ಗಣೇಶೋತ್ಸವ ಸಮಾಜದ ಎಲ್ಲ ವರ್ಗಗಳಿಂದ ಶ್ಲಾಘನೆಗೆ ಪಾತ್ರವಾಗಿದೆ.

ಇದನ್ನೂ ಓದಿ: ಕೊಪ್ಪಳ | ಗಣೇಶ ವಿಸರ್ಜನೆ ದಿನ ಡಿಜೆ ಬಳಕೆ; ಸಾರ್ವಜನಿಕರ ಆಕ್ರೋಶ

ಮೆರಾಜ್ ವಲಿ, ಅಬ್ಬಾಸ್ ಅಲಿ, ಸುಭಾನಸಾಬ, ಮಹಿಬೂಬ ಕಂದಕೂರ, ಅಬ್ದುಲ್ ಸಾಬ, ಈರಣ್ಣ, ಗುಡ್ಡಪ್ಪ, ಬಸವರಾಜ್ ಮೂಲಿಮನಿ ನೌಜವಾನ್ ಕಮಿಟಿಯ ಅಧ್ಯಕ್ಷರು, ಉಪಾಧ್ಯಕ್ಷರು ಗಜಾನನ ಮಂಡಳಿಯ ಸದಸ್ಯರು ಹಾಗೂ ಗ್ರಾಮಸ್ಥರು ಉತ್ಸವದಲ್ಲಿ ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗದ ಸಂಚಾರ ವ್ಯವಸ್ಥೆಯಲ್ಲಿ ಅರಾಜಕತೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಾಗರಿಕರು ಹೈರಾಣು

ಒಮ್ಮೆ ಶಾಂತ, ಶಿಕ್ಷಣ ಹಾಗೂ ಸಂಸ್ಕೃತಿಯ ತಾಣವಾಗಿದ್ದ ಶಿವಮೊಗ್ಗ ನಗರ ಇತ್ತೀಚಿನ...

ತುಮಕೂರು | ಗಾಂಧೀ ತತ್ವಗಳಿಗೆ ವಿಶ್ವ ಮನ್ನಣೆ : ಡಾ. ಜಿ.ಪರಮೇಶ್ವರ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಹಿಂಸಾ ತತ್ವಗಳಿಗೆ ಇಡೀ ವಿಶ್ವದಲ್ಲಿಯೇ ಮನ್ನಣೆ ದೊರೆತಿದೆ...

ಶಿವಮೊಗ್ಗ | ಸತ್ಯ – ಅಹಿಂಸೆ ಪ್ರಬಲ ಅಸ್ತ್ರಗಳು : ಡಾ. ಟಿ. ಅವಿನಾಶ್

ಶಿವಮೊಗ್ಗ, ಭಾರತ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಡಲು ಮಹಾತ್ಮ ಗಾಂಧೀಜಿಯವರು ಬಳಸಿದ ಅಸ್ತ್ರಗಳೆಂದರೆ...

ಉಡುಪಿ | ಕಾರ್ಕಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಹಾತ್ಮಾ ಗಾಂಧೀಜಿ ಹಾಗೂ ಶಾಸ್ತ್ರಿ ಜಯಂತಿ ಆಚರಣೆ

ದೇಶದಲ್ಲಿ ಸಮಾನತೆಯನ್ನು ಬಯಸಿದ್ದೇ ಗಾಂಧೀಜಿಯವರ ಹತ್ಯೆಗೆ ಕಾರಣವಾಯಿತು, ಶೂದ್ರ ಮತ್ತು ಅತ್ಯಂತ...

Download Eedina App Android / iOS

X