ಆಟೋ ಚಾಲಕನೊಬ್ಬನ ಮೇಲೆ ರವಿವಾರ ರಾತ್ರಿ ಮಂಗಳೂರಿನ ಫಳ್ನೀರ್ ನಲ್ಲಿ ದುಷ್ಕರ್ಮಿಗಳ ತಂಡವೊಂದು ಹಲ್ಲೆ ನಡೆಸಿದೆ ಎಂಬುದು ಸುಳ್ಳು. ಇದು ಆಟೋ ಚಾಲಕನೇ ಸೃಷ್ಟಿಸಿದ ಕಟ್ಟು ಕಥೆ ಎಂಬ ವಿಚಾರ ಪೊಲೀಸರು ನಡೆಸಿದ ತನಿಖೆಯಿಂದ ಬೆಳಕಿಗೆ ಬಂದಿದೆ ಎಂದು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಪ್ರಕಟಣೆಯಲ್ಲಿಂದು ತಿಳಿಸಿದ್ದಾರೆ.
ರಿಕ್ಷಾ ಚಾಲಕ ಬಶೀರ್, ಪೊಲೀಸರಿಗೆ ಮಾಹಿತಿ ನೀಡುತ್ತೇನೆ ಎಂಬ ಆರೋಪದಲ್ಲಿ ಅಪರಿಚಿತ ತಂಡವೊಂದು ತನ್ನ ಮೇಲೆ ಹಲ್ಲೆ ನಡೆಸಿರುವುದಾಗಿ ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ನಡೆಸಿದಾಗ ಅಲ್ಲಿ ಅಂತಹ ಘಟನೆ ನಡೆದಿಲ್ಲ. ಚಾಲಕನೇ ಸಾರ್ವಜನಿಕರ ಗಮನ ಸೆಳೆಯಲು ಈ ಕೃತ್ಯ ನಡೆಸಿರುವುದಾಗಿ ಪೊಲೀಸ್ ಆಯುಕ್ತರು ಸ್ಪಷ್ಟನೆ ನೀಡಿದ್ದಾರೆ.
ರಿಕ್ಷಾ ಚಾಲಕನು ಯಾವುದೊ ಹರಿತವಾದ ವಸ್ತುವಿನಿಂದ ಅಥವಾ ಪೆನ್ ನಿಂದ ತನ್ನ ದೇಹಕ್ಕೆ ಚುಚ್ಚಿ ಕೊಂಡು ಹಲ್ಲೆ ಪ್ರಕರಣವನ್ನು ಸೃಷ್ಟಿಸಿರುವುದು ತನಿಖೆಯಿಂದ ಬಹಿರಂಗವಾಗಿದೆ.
ಇದನ್ನೂ ಓದಿ: ಮಂಗಳೂರು | ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್ ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರು