ಮಾಜಿ ಸಚಿವ ಕೆ.ಎನ್ ರಾಜಣ್ಣ BJP ಸೇರುತ್ತಾರೆ: ಕಾಂಗ್ರೆಸ್‌ ಶಾಸಕ ಬಾಲಕೃಷ್ಣ

Date:

Advertisements

ಮತಗಳ್ಳತನ ವಿರುದ್ದ ಹೋರಾಟದ ವಿಚಾರವಾಗಿ ತಮ್ಮದೇ ಪಕ್ಷದ ವಿರುದ್ಧ ಮಾತನಾಡಿ, ಸಚಿವ ಸ್ಥಾನ ಕಳೆದುಕೊಂಡಿರುವ ಕೆ.ಎನ್‌ ರಾಜಣ್ಣ ಅವರು ಬಿಜೆಪಿ ಸೇರಲಿದ್ದಾರೆ ಎಂದು ಹೇಳಲಾಗುತ್ತಿದೆ. ಕೆ.ಎನ್ ರಾಜಣ್ಣ ಬಿಜೆಪಿಗೆ ಸೇರಿಕೊಳ್ಳಲು ಅರ್ಜಿ ಹಾಕಿದ್ದಾರೆ ಎಂದು ಕಾಂಗ್ರೆಸ್‌ ಶಾಸಕ ಎಚ್‌.ಸಿ ಬಾಲಕೃಷ್ಣ ಆರೋಪಿಸಿದ್ದಾರೆ.

ಸಹಕಾರ ಸಚಿವರಾಗಿದ್ದ ರಾಜಣ್ಣ ಅವರನ್ನು ಅಧಿವೇಶನ ನಡೆಯುತ್ತಿದ್ದ ಸಮಯಲ್ಲಿಯೇ ಸಚಿವ ಸಂಪುಟದಿಂದ ಕೈಬಿಡಲಾಯಿತು. ಈ ಬಗ್ಗೆ ವಿಧಾನಸಭೆ ಮತ್ತು ವಿಧಾನ ಪರಿಷತ್‌ನಲ್ಲಿ ಭಾರೀ ಚರ್ಚೆಯಾಗಿತ್ತು. ಮಾತ್ರವಲ್ಲದೆ, ರಾಜಣ್ಣ ಅವರನ್ನು ಸಚಿವ ಸ್ಥಾನದಿಂದ ಕೈಬಿಟ್ಟಿದ್ದನ್ನು ವಿರೋಧಿಸಿ ಅವರ ಅಭಿಮಾನಿಗಳು ಮಧುಗಿರಿಯಲ್ಲಿ ಪ್ರತಿಭಟನೆ ನಡೆಸಿದ್ದರು.

ಇದೆಲ್ಲದರ ನಡುವೆ, ರಾಜಣ್ಣ ಅವರ ಭವಿಷ್ಯದ ನಡೆಯ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಇದೇ ಹೊತ್ತಿನಲ್ಲಿ ಮಾಗಡಿ ಶಾಸಕ ಬಾಲಕೃಷ್ಣ ಅವರು ರಾಜಣ್ಣ ಬಿಜೆಪಿಗೆ ಹೋಗುತ್ತಾರೆ ಎಂದು ಆರೋಪಿಸಿದ್ದಾರೆ.

“ರಾಜಣ್ಣ ಮಂತ್ರಿಯಾಗಿದ್ದಾಗ ಯಾವ ರೀತಿ ನಡೆದುಕೊಂಡರು ಎಂಬುದನ್ನು ಜಗತ್ತು ಗಮನಿಸಿದೆ. ʼಮಾತು ಮನೆ ಕೆಡಿಸಿತು, ತೂತು ಒಲೆ ಕೆಡಿಸಿತುʼ ಎನ್ನುವಂತೆ ಅವರು ಮಾತಾಡುತ್ತಿದ್ದರು. ಅವರ ಹೇಳಿಕೆಯಿಂದಲೇ ಅವರು ಸಚಿವ ಸ್ಥಾನ ಕಳೆದುಕೊಂಡರು. ಇದರ ಹಿಂದೆ ಯಾರದ್ದೇ ಷಡ್ಯಂತ್ರವಿಲ್ಲ” ಎಂದು ಬಾಲಕೃಷ್ಣ ಹೇಳಿದ್ದಾರೆ.

“ಹೈಕಮಾಂಡ್‌ ವಿರುದ್ಧ ಮಾತನಾಡಿದ್ದಾಗಿ ಅವರನ್ನು ವಜಾಗೊಳಿಸಲಾಗಿದೆ. ಅವರು ಬೇರೆ ಪಕ್ಷಕ್ಕೆ ಹೋಗುವ ಮುನ್ನ ನಮ್ಮ ಮೇಲೆ ಗೂಬೆ ಕೂರಿಸಲು ಯತ್ನಿಸುತ್ತಿದ್ದಾರೆ. ನನಗೆ ಯಾವ ಪಕ್ಷದ ಅವಶ್ಯಕತೆಯೂ ಇಲ್ಲವೆಂದು ಅವರು ಹೇಳಿಕೊಳ್ಳುತ್ತಿದ್ದರು. ಆದರೆ, ಅವರು ಯಾರ ಸಂಪರ್ಕದಲ್ಲಿದ್ದಾರೆ ಎಂಬುದು ಗೊತ್ತಾಗಬೇಕು. ಅವರನ್ನು ಬ್ರೈನ್ ಮ್ಯಾಪಿಂಗ್‌ಗೆ ಒಳಪಡಿಸಿದರೆ, ಸತ್ಯ ಗೊತ್ತಾಗುತ್ತದೆ. ಅವರು ಈಗಾಗಲೇ ಒಂದು ಕಾಲು ಹೊರಗೆ ಇಟ್ಟಿದ್ದಾರೆ. ಬೇರೆ ಪಕ್ಷ ಸೇರುತ್ತಾರೆ” ಎಂದು ಆರೋಪಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ’ಗೆ ಇತಿಹಾಸಕಾರ ರಾಮಚಂದ್ರ ಗುಹಾ ಆಯ್ಕೆ

ಪ್ರಸಿದ್ಧ ಭಾರತೀಯ ಇತಿಹಾಸಕಾರ, ಅಂಕಣಕಾರ ಹಾಗೂ ಚಿಂತಕ ಡಾ.ರಾಮಚಂದ್ರ ಗುಹಾ ಅವರನ್ನು...

RSS ಕುರಿತ ₹100 ನಾಣ್ಯ & ಅಂಚೆ ಚೀಟಿ ಬಿಡುಗಡೆ, ಸಂವಿಧಾನಕ್ಕೆ ಎಸಗಿದ ಘೋರ ಅಪಚಾರ: ಸಿಪಿಐ(ಎಂ)

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶತಮಾನೋತ್ಸವ ಸಮಾರಂಭದ ಪ್ರಯುಕ್ತ ಪ್ರಧಾನಿ ನರೇಂದ್ರ...

ಮುಂದಿನ ವರ್ಷಗಳಲ್ಲಿಯೂ ನಾನೇ ದಸರಾ ಪುಷ್ಪಾರ್ಚನೆ ಮಾಡುವೆ: ಸಿಎಂ ಸಿದ್ದರಾಮಯ್ಯ

ವಿರೋಧಪಕ್ಷಗಳು ಭವಿಷ್ಯಕಾರರಲ್ಲ. ವಸ್ತುಸ್ಥಿತಿಯ ಬಗ್ಗೆ ಅರಿವಿಲ್ಲದೇ ಮಾತನಾಡುವ ವಿಪಕ್ಷಗಳ ಭವಿಷ್ಯ ನಿಜವಾಗುವುದಿಲ್ಲ....

ಗುಮಾನಿ ಹುಟ್ಟುಹಾಕಿದ ‘ವಿಲ್’; ‘ಕೊನೆಗಾಲದಲ್ಲಿ ಭೈರಪ್ಪ ಖಾತೆಯಿಂದ ದುಡ್ಡು ದೋಚಿದ್ದು ಯಾರು?’

"ಭೈರಪ್ಪನವರ ಉಯಿಲು (ವಿಲ್) ನೋಡುತ್ತಿದ್ದರೆ ಎಲ್ಲ ಪ್ಲ್ಯಾನ್ ಮಾಡಿ ಬರೆಸಿರುವಂತಿದೆ ಎಂದು...

Download Eedina App Android / iOS

X