ಮೈಸೂರು | ಚುನಾವಣಾ ಪ್ರಚಾರಕ್ಕೆ ರೌಡಿ ಶೀಟರ್‌ಗಳನ್ನು ಬಳಸಿಕೊಳ್ಳದಂತೆ ಎಚ್ಚರಿಕೆ

Date:

Advertisements
  • ಸಮಾಜ ವಿರೋಧಿ ಕೃತ್ಯಗಳಲ್ಲಿ ತೊಡಗದಂತೆ 2,500 ರೌಡಿ ಶೀಟರ್‌ಗಳಿಗೆ ಎಚ್ಚರಿಕೆ
  • ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಉಲ್ಲಂಘಿಸಿದರೆ ಕಾನೂನು ಕ್ರಮ

ರೌಡಿಗಳಿಗೆ ಪೊಲೀಸ್‌ ಇಲಾಖೆ ಎಚ್ಚರಿಕೆ ನೀಡಿದ ಬಳಿಕ ರಾಜಕಾರಣಿಗಳೂ ಚುನಾವಣಾ ಪ್ರಚಾರಕ್ಕೆ ಕಾರ್ಯಕರ್ತರನ್ನು ಆಯ್ಕೆ ಮಾಡುವಾಗ ಜಾಗರೂಕರಾಗಿದ್ದಾರೆ. ಆಯಾ ಬೂತ್‌ಗಳಲ್ಲಿನ ತಮ್ಮ ಪಕ್ಷದ ಕಾರ್ಯಕರ್ತರಿಗೆ ಮಾತ್ರ ಪ್ರಚಾರದ ಜವಾಬ್ದಾರಿ ನೀಡಲಾಗುವುದು ಎಂದು ರಾಜಕೀಯ ನಾಯಕರು ಹೇಳಿದ್ದಾರೆ.

“ಚುನಾವಣೆ ಸಂದರ್ಭದಲ್ಲಿ ರೌಡಿ ಶೀಟರ್‌ ಪಟ್ಟಿಯಲ್ಲಿರುವ ಕೆಲವು ಗಲಭೆಕೋರರನ್ನು ಗಡಿಪಾರು ಮಾಡಿದ ಬಳಿಕ ಉಳಿದ ರೌಡಿಗಳ ಪಟ್ಟಿ ಮಾಡಿ ಅವರಿಗೆ ಎಚ್ಚರಿಕೆ ನೀಡಲಾಗಿದೆ. ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಸಾರ್ವಜನಿಕರಿಗೆ ಬೆದರಿಕೆ ಹಾಕುವುದು ಅಥವಾ ಏನನ್ನಾದರೂ ಮಾಡುವಂತೆ ಒತ್ತಾಯಿಸುವುದು ಸೇರಿದಂತೆ ಮುಂತಾದ ಸಮಾಜ ವಿರೋಧಿ ಚಟುವಟಿಕೆಗಳಲ್ಲಿ ತೊಡಗದಂತೆ ಜಿಲ್ಲೆಯ 2,500ಕ್ಕೂ ಹೆಚ್ಚು ರೌಡಿಗಳಿಂದ ಪ್ರತಿಜ್ಞೆ ಮಾಡಿಸಲಾಗಿದೆ. ಅವರು ಕಾನೂನು ಉಲ್ಲಂಘನೆ ಮಾಡಿದರೆ ಕ್ರಮ ಕೈಗೊಳ್ಳಲಾಗುವುದು” ಎಂದು ಪೊಲೀಸರು ತಿಳಿಸಿದ್ದಾರೆ.

ನಗರ ಮತ್ತು ಜಿಲ್ಲಾ ಪೊಲೀಸರು ಹಾಗೂ ಜಿಲ್ಲಾಡಳಿತದ ವತಿಯಿಂದ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ, ಚುನಾವಣಾ ಆಯೋಗ ಹೊರಡಿಸಿದ ಎಲ್ಲ ಮಾರ್ಗಸೂಚಿಗಳನ್ನು ಪಾಲಿಸುವಂತೆ ನಿರ್ದೇಶನ ನೀಡಲಾಗಿದೆ.

Advertisements

“ಚುನಾವಣಾ ಪ್ರಚಾರಕ್ಕೆ ಕಾಂಗ್ರೆಸ್‌ ಕಾರ್ಯಕರ್ತರನ್ನು ಮಾತ್ರ ಬಳಸಿಕೊಳ್ಳಲಾಗುತ್ತಿದೆ. ಪ್ರತಿಯೊಬ್ಬರೂ ಆಯಾ ಬೂತ್‌ಗಳಲ್ಲಿ ಕೆಲಸ ಮಾಡಬೇಕು. ಪಕ್ಷದ ಮುಖಂಡರು ಕಾರ್ಯಕರ್ತರನ್ನು ಮೇಲ್ವಿಚಾರಣೆ ಮಾಡಲಿದ್ದಾರೆ” ಎಂದು ನಗರ ಕಾಂಗ್ರೆಸ್ ಅಧ್ಯಕ್ಷ ಆರ್ ಮೂರ್ತಿ ಹೇಳಿದರು.

ಈ ಸುದ್ದಿ ಓದಿದ್ದೀರಾ? ರಾಹುಲ್ ಗಾಂಧಿ ಕೋಲಾರ ಭೇಟಿ ಮುಂದೂಡಿಕೆ

“ಚುನಾವಣಾ ಕೆಲಸದ ಸಮಯದಲ್ಲಿ ಜಾಗರೂಕರಾಗಿರಲು ಮತ್ತು ಕಾನೂನುಬಾಹಿರ ಚಟುವಟಿಕೆಯಲ್ಲಿ ತೊಡಗಿರುವ ಯಾವುದೇ ಹಿನ್ನೆಲೆಯ ವ್ಯಕ್ತಿಗಳ ಬಗ್ಗೆ ಮಾಹಿತಿ ನೀಡುವಂತೆ ನಮ್ಮ ಎಲ್ಲ ಕಾರ್ಯಕರ್ತರಿಗೆ ತಿಳಿಸಿದ್ದೇವೆ. ಪ್ರಚಾರದ ಜವಾಬ್ದಾರಿಯನ್ನು ನಮ್ಮ ಕಾರ್ಯಕರ್ತರಿಗೆ ಮಾತ್ರ ನೀಡಲಾಗಿದೆ” ಎಂದು ನಗರ ಬಿಜೆಪಿ ಅಧ್ಯಕ್ಷ ಟಿ ಎಸ್ ಶ್ರೀವತ್ಸ ಹೇಳಿದ್ದಾರೆ.

“ಜಿಲ್ಲೆಯಲ್ಲಿ ಸುಮಾರು 1,400 ರೌಡಿಗಳಿದ್ದು, ಚುನಾವಣೆ ಸಂದರ್ಭದಲ್ಲಿ ಯಾವುದೇ ಸಮಾಜ ವಿರೋಧಿ ಚಟುವಟಿಕೆ ನಡೆಸದಂತೆ ಅವರಿಂದ ಪ್ರತಿಜ್ಞೆ ಮಾಡಿಸಿದ್ದೇವೆ. ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಉಲ್ಲಂಘಿಸಿದರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ” ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ಎಚ್ಚರಿಕೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X