ಕಲಬುರಗಿ | ಕಲ್ಯಾಣ ಕರ್ನಾಟಕ ಸರ್ಕಾರಿ ನೌಕರರ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ

Date:

Advertisements

ಆಳಂದ ಪಟ್ಟಣದಲ್ಲಿ ಕಲ್ಯಾಣ ಕರ್ನಾಟಕ ಸರ್ಕಾರಿ ನೌಕರರ ಸಂಘದ ಆಳಂದ ತಾಲೂಕು ಘಟಕ ಉದ್ಘಾಟನೆ ಸಮಾರಂಭ ನಡೆಯಿತು.

ಆಳಂದ ತಾಲೂಕು ಘಟಕಕ್ಕೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಿ ಜಿಲ್ಲಾಧ್ಯಕ್ಷ ಮಹೇಶಕುಮಾರ್ ಹೆಬ್ಬಾಳೆ ಅವರು ನೇಮಕಾತಿ ಆದೇಶ ಪ್ರತಿ ನೀಡಿ ಗೌರವಿಸಿದರು.

ವಿಜಯ್ ಕುಮಾರ್ ಜಿಡಗೆ( ತಾಲೂಕ ಅಧ್ಯಕ್ಷರು), ಶ್ರೀನಾಥ್ ನಾಗೂರ ( ತಾಲೂಕು ಪ್ರಧಾನ ಕಾರ್ಯದರ್ಶಿ), ಸುಭಾಷ್.ಎಸ್. ಪಾಟೀಲ್ ಗ್ರಾಮ ಆಡಳಿತ ಅಧಿಕಾರಿ (ತಾಲೂಕ ಉಪಾಧ್ಯಕ್ಷ), ರಮೇಶ್ ಸಿ ಕುಲಕರ್ಣಿ ಉಪನ್ಯಾಸಕರು (ಖಜಾಂಚಿ), ಬಸಣ್ಣ ಸಿಗರಕಂಟಿ ( ಕಾನೂನು ಸಲಹೆಗಾರ), ಜಗನ್ನಾಥ ಕುಂಬಾರ ಪಶು ವೈದ್ಯಕೀಯ ಪರಿವೀಕ್ಷಕರು ( ತಾಲೂಕು ಸಂಘಟನಾ ಕಾರ್ಯದರ್ಶಿ), ರಾಜೇಶ ಶಾಕಾ ದ್ವಿ.ದ.ಸ ಖಜಾನೆ (ತಾಲೂಕು ಉಪಾಧ್ಯಕ್ಷ), ಲಕ್ಷ್ಮಣ ಕಾಂಬಳೆ ಭೂಮಾಪಕ ಇಲಾಖೆ(ಸಹ ಕಾರ್ಯದರ್ಶಿ), ಧರ್ಮರಾಜ ದಂಗಾಪುರ ಸುಶ್ರುತ ಅಧಿಕಾರಿ(ತಾಲೂಕ ಸಹ ಕಾರ್ಯದರ್ಶಿ) ಯಾಶ್ಮಿನ್ ತಬಸುಮ (ತಾಲೂಕ ಉಪಾಧ್ಯಕ್ಷ), ವಿದ್ಯಾಸಾಗರ ಮೈನಾಳ (ತಾಲೂಕು ಮಾಧ್ಯಮ ಪ್ರತಿನಿಧಿ) ಅವರು ನೇಮಕಗೊಂಡಿದ್ದಾರೆ.

ಸಂಘದ ಕಲಬುರಗಿ ಜಿಲ್ಲಾಧ್ಯಕ್ಷ ಮಹೇಶಕುಮಾರ್ ಹೆಬ್ಬಾಳೆ ಮಾತನಾಡಿ, ʼಕಲ್ಯಾಣ ಕರ್ನಾಟಕ ಭಾಗದ 371(ಜೆ) ವ್ಯಾಪ್ತಿಯಲ್ಲಿರುವ ಎಲ್ಲ ಸರ್ಕಾರಿ ನೌಕರರು ಎದುರಿಸುವ ಸಮಸ್ಯೆಗಳು, ಈ ಭಾಗದಲ್ಲಿ ಆಗುತ್ತಿರುವ ಶೈಕ್ಷಣಿಕ ಹಿನ್ನಡೆಗೆ ಸಂಘಟನಾತ್ಮಕ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸೋಣʼ ಎಂದರು.

ʼಭಾರತೀಯ ಸಂವಿಧಾನದ ಆಶಯದಂತೆ ಆರ್ಥಿಕವಾಗಿ, ಶೈಕ್ಷಣಿಕವಾಗಿ, ಔದ್ಯೋಗಿಕವಾಗಿ ಸಮತೋಲನ ಕಾಪಾಡಿಕೊಳ್ಳಲು 371(ಜೆ) ಸಂವಿಧಾನಾತ್ಮಕ ವಿಶೇಷ ಸ್ಥಾನಮಾನ ನೀಡಲಾಗಿದ್ದು, ಅದನ್ನು ಸಂಪೂರ್ಣವಾಗಿ ಅನುಷ್ಠಾನವಾಗುವಲ್ಲಿ, ಸಂವಿಧಾನದ ಆಶಯ ಈಡೇರಿಸುವಲ್ಲಿ ಸರ್ಕಾರಿ ನೌಕರರಾದ ನಾವು ಸಂಘಟನಾತ್ಮಕವಾಗಿ ಕಾರ್ಯೋನ್ಮುಖರಾಗಬೇಕುʼ ಎಂದು ಕರೆ ನೀಡಿದರು.

ಇದನ್ನೂ ಓದಿ : ಬೀದರ್‌ | ಒಟಿಪಿ ಹೇಳದಿದ್ದರೂ ಖಾತೆಯಿಂದ ₹8 ಲಕ್ಷ ಹಣ ಕಳೆದುಕೊಂಡ ಕಾರ್ಮಿಕ!

ಸಭೆಯಲ್ಲಿ ಕಲಬುರಗಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್ ಗುತ್ತೇದಾರ್, ಸದಸ್ಯ ಭೀಮಣ್ಣ ಹಂದ್ರಾಳ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೋಜುಗಾದ ಸೂಜು ಮಲ್ಲಿಗೆ ಹುಡುಗಿ ಹಾಡು : ಇಮ್ಮಡಿಯಾದ ಪ್ರೇಕ್ಷಕರ ಉತ್ಸಾಹ

 ಕಳೆದ 10 ದಿನಗಳಿಂದ ದಸರಾ ಉತ್ಸವ ಸಂಭ್ರಮದಲ್ಲಿ ಮುಳುಗಿದ್ದ ಪ್ರೇಕ್ಷಕರ ಉತ್ಸಾಹ...

ತುಮಕೂರು ದಸರಾ : ಸಚಿವರಿಂದ ವಿಶೇಷ ಪೂಜೆ

ತುಮಕೂರು ದಸರಾ ಉತ್ಸವದ ಕಡೆಯ ದಿನವಾದ ವಿಜಯದಶಮಿಯಂದು ಗೃಹ ಹಾಗೂ ಜಿಲ್ಲಾ...

ಯುವಪರಿವರ್ತನೆ ಯಾತ್ರೆ: ಬಾಗಲಕೋಟೆಯಲ್ಲಿ ಚಾಲನೆ

ಯುವಜನರನ್ನು ರಾಜ್ಯದ ಅಭಿವೃದ್ಧಿಯತ್ತ ಚಿತ್ತಹರಿಸಲು, ಪ್ರಜೆಗಳ ಆರೋಗ್ಯ, ಶಿಕ್ಷಣ, ಸಬಲೀಕರಣ, ಉದ್ಯೋಗದ...

ಕೊಪ್ಪಳ | ಪ್ರವಾದಿ ಮಹಮ್ಮದ್‌ ಸಂದೇಶವನ್ನು ನಾವು ಪಾಲನೆ ಮಾಡಬೇಕು: ಲಾಲ್ ಹುಸೇನ್ ಕಂದ್ಗಲ್

'ಖುರಾನ್' ಬರುವ ಪ್ರವಾದಿ ಮಹಮ್ಮದ್‌ ಅವರು ಹೇಳಿದ ಸತ್ಯವನ್ನೇ ಭಾರತೀಯ ಪುರಾಣಗಳು...

Download Eedina App Android / iOS

X