ತುಮಕೂರು | ದಸರಾ ಉದ್ಘಾಟಕರ ಆಯ್ಕೆಯ ವಿಷಯದಿಂದ ಬಿಜೆಪಿ ಮುಖವಾಡ ಅನಾವರಣ : ಮಂಜುನಾಥ್ ಹೆತ್ತೇನಹಳ್ಳಿ

Date:

Advertisements

ಅಸಮಾನತೆಯನ್ನೇ ತನ್ನ ಆಂತರ್ಯದಲ್ಲಿರಿಸಿಕೊಂಡಿರುವ ಬಿಜೆಪಿ ಮುಖವಾಡ ದಸರಾ ಉದ್ಘಾಟಕರ ಆಯ್ಕೆಯ ವಿಷಯದಲ್ಲಿ ಅನಾವರಣವಾಗಿದೆ ಎಂದು ಕಾಂಗ್ರೆಸ್ ಮುಖಂಡ ಮಂಜುನಾಥ್ ಹೆತ್ತೇನಹಳ್ಳಿ ಹೇಳಿದರು.

ಕನ್ನಡದ ಘಮಲನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಪಸರಿಸಿರುವ ಬಾನು ಮುಷ್ತಾಕ್
ಅವರ ಸಾಧನೆಗೆ ಧಕ್ಕೆ ಬರುವಂತೆ ಬಿಜೆಪಿ ನಡೆದು ಕೊಳ್ಳುತ್ತಿದೆ. ಮಹಿಳೆಯರು ಮತ್ತು ಕನ್ನಡ ನಾಡಿಗೆ ಸೇವೆ ಸಲ್ಲಿಸಿದವರ ಬಗೆಗಿನ ಬಿಜೆಪಿಯ ಕೊಳಕು ಮನಸ್ಥಿತಿ ಈಗ ಅನಾವರಣವಾಗಿದೆ. ಮುಸ್ಲಿಮರನ್ನು ದ್ವೇಷಿಸಲು ಹೋಗಿ ಬಹುಜನರ ಆಹಾರ ಪದ್ಧತಿಯಬಗ್ಗೆ ಅವಹೇಳನ ಮಾಡುತ್ತಿರುವುದು ಖಂಡನೀಯ. ಬಿಜೆಪಿಗೆ ಈಗ ಸ್ಪಷ್ಟನೆ ನೀಡುವ ಸವಾಲೊಂದು ಎದುರಾಗಿದೆ. ಮಹಿಳಾ ವಿರೋಧಿ, ಮಾಂಸಹಾರ ವಿರೋಧಿ ಹೇಳಿಕೆಯನ್ನು ಬಿಜೆಪಿ ನೇರವಾಗಿ ನೀಡುವ ಮೂಲಕ ತಮ್ಮ ನಿಲುವನ್ನು ಸಾಭೀತುಪಡಿಸಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ವಿವರಿಸಿದ್ದಾರೆ.

ಸರ್ವರಿಗೂ ಘನತೆಯಿಂದ ಬದುಕುವ ಹಕ್ಕು ನೀಡಿರುವ ಸಂವಿಧಾನದ ವಿರೋಧಿ ಹೇಳಿಕೆ‌ ನೀಡಿರುವ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹೇಳಿಕೆ ಖಂಡನೀಯ. ಅವರ ಸ್ಥಾನಕ್ಕೆ ಘನತೆ ಬರುವಂತೆ ಅವರು ನಡೆದುಕೊಳ್ಳಬೇಕು ಎಂದರು.

ಸಿದ್ದರಾಮಯ್ಯ ನವರ ಆಯ್ಕೆ ಸಾಮಾಜಿಕ‌ ನ್ಯಾಯವನ್ನು ಎತ್ತಿ ಹಿಡಿದಿದೆ. ಈ ಬಾರಿ ದಸರಾ ಉದ್ಘಾಟಕರನ್ನಾಗಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡುವ ಮೂಲಕ ನಾಡಹಬ್ಬವನ್ನು ಅರ್ಥಪೂರ್ಣ ಹಬ್ಬವನ್ನಾಗಿ ಮಾಡಿದ ಸಿದ್ದರಾಮಯ್ಯನವರಿಗೆ ಅಭಿನಂದನೆಗಳು ಎಂದು ಮಂಜುನಾಥ್ ಹೆತ್ತೇನಹಳ್ಳಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗದ ಸಂಚಾರ ವ್ಯವಸ್ಥೆಯಲ್ಲಿ ಅರಾಜಕತೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಾಗರಿಕರು ಹೈರಾಣು

ಒಮ್ಮೆ ಶಾಂತ, ಶಿಕ್ಷಣ ಹಾಗೂ ಸಂಸ್ಕೃತಿಯ ತಾಣವಾಗಿದ್ದ ಶಿವಮೊಗ್ಗ ನಗರ ಇತ್ತೀಚಿನ...

ತುಮಕೂರು | ಗಾಂಧೀ ತತ್ವಗಳಿಗೆ ವಿಶ್ವ ಮನ್ನಣೆ : ಡಾ. ಜಿ.ಪರಮೇಶ್ವರ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಹಿಂಸಾ ತತ್ವಗಳಿಗೆ ಇಡೀ ವಿಶ್ವದಲ್ಲಿಯೇ ಮನ್ನಣೆ ದೊರೆತಿದೆ...

ಶಿವಮೊಗ್ಗ | ಸತ್ಯ – ಅಹಿಂಸೆ ಪ್ರಬಲ ಅಸ್ತ್ರಗಳು : ಡಾ. ಟಿ. ಅವಿನಾಶ್

ಶಿವಮೊಗ್ಗ, ಭಾರತ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಡಲು ಮಹಾತ್ಮ ಗಾಂಧೀಜಿಯವರು ಬಳಸಿದ ಅಸ್ತ್ರಗಳೆಂದರೆ...

ಉಡುಪಿ | ಕಾರ್ಕಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಹಾತ್ಮಾ ಗಾಂಧೀಜಿ ಹಾಗೂ ಶಾಸ್ತ್ರಿ ಜಯಂತಿ ಆಚರಣೆ

ದೇಶದಲ್ಲಿ ಸಮಾನತೆಯನ್ನು ಬಯಸಿದ್ದೇ ಗಾಂಧೀಜಿಯವರ ಹತ್ಯೆಗೆ ಕಾರಣವಾಯಿತು, ಶೂದ್ರ ಮತ್ತು ಅತ್ಯಂತ...

Download Eedina App Android / iOS

X