ಜಪಾನ್‌ ಪ್ರವಾಸಿ ಬಳಿ ಲಂಚ ಪಡೆದ ಮೂವರು ಪೊಲೀಸರ ಅಮಾನತು

Date:

Advertisements

ಜಪಾನ್ ಪ್ರವಾಸಿಯೊಬ್ಬರು ಹೆಲ್ಮೆಟ್‌ ಧರಸದೆ ಬೈಕ್ ಸವಾರಿ ಮಾಡಿದ ಕಾರಣಕ್ಕಾಗಿ ಅವರು ಬಳಿ ಲಂಚ ಪಡೆದ ಮೂವರು ಪೊಲೀಸರನ್ನು ಅಮಾನತು ಮಾಡಲಾಗಿದೆ. ಉತ್ತರ ಪ್ರದೇಶದ ಗುರುಗ್ರಾಮ ಸಂಚಾರ ಪೊಲೀಸ್‌ ಠಾಣೆಯ ಪೊಲೀಸರು ಅಮಾನತುಗೊಂಡಿದ್ದಾರೆ.

ಗುರುಗ್ರಾಮದ ಗ್ಯಾಲೇರಿಯಾ ಮಾರುಕಟ್ಟೆಯ ಬಳಿ ಜಪಾನ್ ಪ್ರವಾಸಿಯೊಬ್ಬರು ಬೈಕ್‌ನಲ್ಲಿ ತೆರಳುತ್ತಿದ್ದರು. ಅವರು ಹೆಲ್ಮೆಟ್‌ ಧರಿಸಿಲ್ಲವೆಂಬ ಕಾರಣಕ್ಕಾಗಿ, ಅವರನ್ನು ತಡೆದು ಪೊಲೀಸರು ದಂಡ ವಿಧಿಸದೇ, ಬಿಟ್ಟುಕಳಿಸುತ್ತೇವೆಂದು ಲಂಚ ಪಡೆದಿದ್ದಾರೆ. ಘಟನೆಯನ್ನು ಜಪಾನ್ ಪ್ರವಾಸಿ ಗೌಪ್ಯವಾಗಿ ವಿಡಿಯೋ ಮಾಡಿಕೊಂಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋ ಬೆಳಕಿಗೆ ಬಂದ ಬಳಿಕ, ಗುರುಗ್ರಾಮ ಸಂಚಾರ ಪೊಲೀಸ್‌ ಠಾಣೆಯ ವಲಯ ಅಧಿಕಾರಿ, ಕಾನ್‌ಸ್ಟೆಬಲ್ ಮತ್ತು ಗೃಹರಕ್ಷಕ ಅಧಿಕಾರಿಯನ್ನು ಅಮಾನತು ಮಾಡಿ ಸಂಚಾರ ವಿಭಾಗದ ಡಿಸಿಪಿ ರಾಜೇಶ್ ಮೋಹನ್ ಆದೇಶಿಸಿದ್ದಾರೆ.

“ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವಿಡಿಯೋ ಸಂಚಾರ ಸಿಬ್ಬಂದಿಯ ದುಷ್ಕೃತ್ಯವನ್ನು ಬಯಲಿಗೆಳೆದಿದೆ. ಪಾರದರ್ಶಕತೆ ಮತ್ತು ಹೊಣೆಗಾರಿಕೆ ನಾವು ಬದ್ದರಾಗಿದ್ದೇವೆ. ತಪ್ಪಿತಸ್ಥ ಆರೋಪಿಗಳಾದ ವಲಯ ಅಧಿಕಾರಿ ಕರಣ್ ಸಿಂಗ್, ಕಾನ್‌ಸ್ಟೆಬಲ್ ಶುಭಮ್ ಹಾಗೂ ಗೃಹರಕ್ಷಕ ಅಧಿಕಾರಿ ಭೂಪೇಂದರ್ ಅವರನ್ನು ಡಿಸಿಪಿ ಅಮಾನತುಗೊಳಿಸಿದ್ದಾರೆ. ಸಾರ್ವಜನಿಕ ಸೇವೆಯಲ್ಲಿ ಅತ್ಯುನ್ನತ ಮಟ್ಟದ ಸಮಗ್ರತೆಯನ್ನು ಕಾಪಾಡಿಕೊಳ್ಳಲು ನಾವು ಬದ್ಧರಾಗಿದ್ದೇವೆ. ಭ್ರಷ್ಟಾಚಾರದ ವಿಚಾರದಲ್ಲಿ ನಾವು ಸಹಿಷ್ಣುತೆ ತೋರುವುದಿಲ್ಲ” ಎಂದು ಗುರುಗ್ರಾಮ ಸಂಚಾರ ಪೊಲೀಸರು ತಮ್ಮ ‘ಎಕ್ಸ್‌’ ಖಾತೆಯಲ್ಲಿ ಪೋಸ್ಟ್‌ ಮಾಡಿದ್ದಾರೆ.

ಈ ಲೇಖನ ಓದಿದ್ದೀರಾ?: ಬಂಗಾಳಕ್ಕೂ ಕಾಲಿಟ್ಟ ಎಸ್‌ಐಆರ್‌ ಭೂತ; ಜನನ ಪ್ರಮಾಣಪತ್ರಕ್ಕಾಗಿ ಜನರ ಪರದಾಟ

ವೈರಲ್ ಆಗಿರುವ ವಿಡಿಯೋದಲ್ಲಿ, ಪೊಲೀಸರಲ್ಲಿ ಒಬ್ಬರು ಜಪಾನ್‌ ಮಹಿಳೆಯ ಗುರುತಿನ ಚೀಟಿ ಕೇಳಿದ್ದಾರೆ. ಬಳಿಕ, 1,000 ರೂ. ಕೊಡುವಂತೆ ಬೇಡಿಕೆ ಇಟ್ಟಿದ್ದಾರೆ. ಹಣ ಕೊಡದಿದ್ದರೆ, ಕೋರ್ಟ್‌ಗೆ ಬರಬೇಕಾಗುತ್ತದೆ ಎಂದು ಬೆದರಿಸಿದ್ದಾರೆ.

ಪ್ರವಾಸಿ ಮಹಿಳೆಯು ಆನ್‌ಲೈನ್‌ನಲ್ಲಿ ಹಣ ಪಾವತಿ ಮಾಡುವುದಾಗಿ ಪ್ರಸ್ತಾಪಿಸಿದ್ದಾರೆ. ಆದರೆ, ಪೊಲೀಸರು ನಗದು ರೂಪದಲ್ಲಿಯೇ ಹಣ ಕೊಡಬೇಕೆಂದು ಕೇಳಿದ್ದಾರೆ. ಬಳಿಕ, ಪ್ರವಾಸಿ ಮಹಿಳೆ ಪೊಲೀಸರಲ್ಲಿ ಒಬ್ಬರಿಗೆ 500 ರೂ. ಮುಖಬೆಲೆಯ ಎರಡು ನೋಟುಗಳನ್ನು ನೀಡಿದ್ದಾರೆ. ಅವರು ಹಣ ನೀಡಿದ್ದರೆ, ಪೊಲೀಸರು ಯಾವುದೇ ರಶೀದಿಯನ್ನೂ ನೀಡದೆ ಕಳಿಸಿದ್ದಾರೆ.

“ಇಡೀ ಘಟನೆಯನ್ನು ಕೂಲಂಕಷವಾಗಿ ತನಿಖೆ ನಡೆಸಲಾಗುತ್ತಿದೆ. ಆರೋಪದಲ್ಲಿ ಭಾಗಿಯಾಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಡಿಸಿಪಿ ಮೋಹನ್ ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆರ್‌ಎಸ್‌ಎಸ್‌ನ ಕೈಗಳಿಗೆ ಮಹಾತ್ಮ ಗಾಂಧಿಯ ರಕ್ತದ ಕಲೆ ಅಂಟಿದೆ: ಕಾಂಗ್ರೆಸ್‌

ಆರ್‌ಎಸ್‌ಎಸ್ ಮಹಾತ್ಮ ಗಾಂಧಿ, ಭಗತ್ ಸಿಂಗ್ ಮತ್ತು ಚಂದ್ರಶೇಖರ್ ಆಜಾದ್ ಅವರಂತಹ...

RSS ಕುರಿತ ₹100 ನಾಣ್ಯ & ಅಂಚೆ ಚೀಟಿ ಬಿಡುಗಡೆ, ಸಂವಿಧಾನಕ್ಕೆ ಎಸಗಿದ ಘೋರ ಅಪಚಾರ: ಸಿಪಿಐ(ಎಂ)

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶತಮಾನೋತ್ಸವ ಸಮಾರಂಭದ ಪ್ರಯುಕ್ತ ಪ್ರಧಾನಿ ನರೇಂದ್ರ...

ಕರೂರ್ ದುರಂತ: 41 ಜನರ ಸಾವಿನ ನಂತರ ಟಿವಿಕೆ ರ‍್ಯಾಲಿ ತಾತ್ಕಾಲಿಕ ಸ್ಥಗಿತ

ತಮಿಳಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ನಾಯಕ ವಿಜಯ್ ಅವರು ಬುಧವಾರ ತಮ್ಮ...

ಕೇಂದ್ರ ಸರ್ಕಾರಿ ಉದ್ಯೋಗಿಗಳಿಗೆ ಶೇ. 3 ರಷ್ಟು ತುಟ್ಟಿಭತ್ಯೆ ಹೆಚ್ಚಳ; ಸಚಿವ ಸಂಪುಟ ಅನುಮೋದನೆ

ಕೇಂದ್ರ ಸಂಪುಟ ಬುಧವಾರ ನಡೆದ ಸಭೆಯಲ್ಲಿ ಕೇಂದ್ರ ಸರ್ಕಾರದ ಉದ್ಯೋಗಿಗಳು ಮತ್ತು...

Download Eedina App Android / iOS

X