ಭೀಮಾತೀರದಲ್ಲಿ ಮತ್ತೆ ಕೇಳಿದ ಗುಂಡಿನ ಸದ್ದು, ಭೀಮನಗೌಡ ಬಿರಾದಾರ್ ಮೇಲೆ ದುಷ್ಕರ್ಮಿಗಳ ದಾಳಿ

Date:

Advertisements

ಭೀಮಾತೀರದಲ್ಲಿ ಮತ್ತೆ ಗುಂಡಿನ ಸದ್ದು ಕೇಳಿ ಬಂದಿದೆ. ಮಹಾದೇವ ಬೈರಗೊಂಡನ ಆಪ್ತ ಭೀಮನಗೌಡ ಬಿರಾದಾರ್ ಮೇಲೆ ದುಷ್ಕರ್ಮಿಗಳು ಮೂರು ಸುತ್ತು ಗುಂಡು ಹಾರಿಸಿದ್ದಾರೆ.

ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ದೇವರ ನಿಂಬರಗಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಭೀಮನಗೌಡನ ತಲೆ ಹಾಗೂ ಎದೆಗೆ ಗುಂಡುಗಳು ತಗುಲಿವೆ. ಈತ ಮಹಾದೇವ ಬೈರಗೊಂಡನ ಆಪ್ತವಲಯದಲ್ಲಿ ಗುರುತಿಸಿಕೊಂಡಿದ್ದಾನೆ.

ಮೂರರಿಂದ ನಾಲ್ವರು ಮುಸುಕುಧಾರಿಗಳಿಂದ ಈ ಕೃತ್ಯ ನಡೆದಿದೆ. ಗುಂಡು ಹಾರಿಸಿದ ಬಳಿಕ‌ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಘಟನೆ ನಡೆದಿದ್ದು ಹೇಗೆ?

ದೇವರ ನಿಂಬರಗಿ ಗ್ರಾಮದ ಕಟಿಂಗ್ ಶಾಪ್​ನಲ್ಲಿ ಕಟಿಂಗ್ ಮಾಡಿಸಿಕೊಳ್ಳಲು ಆಗಮಿಸಿದ್ದ ವೇಳೆ ಭೀಮನಗೌಡ ಬಿರಾದಾರ್ ಮೇಲೆ ದಾಳಿ ನಡೆದಿದೆ. ಕಟಿಂಗ್ ಮಾಡುತ್ತಿದ್ದ ಕಣ್ಣಿಗೆ ಖಾರದ ಪುಡಿ ಎರಚಿ ಕೃತ್ಯ ಎಸಗಲಾಗಿದೆ. ತೀವ್ರ ಗಾಯಗೊಂಡ ಭೀಮನಗೌಡನನ್ನು ವಿಜಯಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಜೀವ ಉಳಿದಿಲ್ಲ.

ಸ್ಥಳಕ್ಕೆ ಚಡಚಣ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಸುರೇಶ್ ಬೆಂಡೆಗುಂಬಳ್ ಹಾಗೂ ಇನ್ನಿತರ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

NCRB report-2023 | ಹಲವು ಅಪರಾಧ ಕೃತ್ಯಗಳಲ್ಲಿ ಕರ್ನಾಟಕಕ್ಕೆ ಕುಖ್ಯಾತಿ

ಭಾರತದ ವಿವಿಧ ರಾಜ್ಯಗಳಲ್ಲಿ 2023ರಲ್ಲಿ ನಾನಾ ರೀತಿಯಲ್ಲಿ ನಡೆದಿರುವ ದಾಖಲಿತ ಅಪರಾಧ...

ಸಮಾಜದ ಅಸಮಾನತೆ ಹೋಗಲಾಡಿಸಲು ಸಮೀಕ್ಷೆ ಅಗತ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಮಾಜದಲ್ಲಿ ಅಸಮಾನತೆಯಿದ್ದು, ಅದನ್ನು ಹೋಗಲಾಡಿಸಲು ಸಮೀಕ್ಷೆಯ ಅಂಕಿಅಂಶಗಳು ಅವಶ್ಯಕ. ಯಾವ ಜಾತಿಯ...

‘ಬುಕ್‌ ಆಫ್‌ ರೆಕಾರ್ಡ್‌’ | ಶಕ್ತಿ ಪ್ರದರ್ಶಿಸಿದ ‘ಶಕ್ತಿ ಯೋಜನೆ’!

ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿಗಳು ರಾಜ್ಯದ ಜನರನ್ನು ಸೋಂಬೇರಿಗಳ್ಳಾನ್ನಾಗಿ...

ರಾಹುಲ್ ಗಾಂಧಿಗೆ ಜೀವ ಬೆದರಿಕೆ; ಮೋದಿ, ಶಾ ಮೌನ ಪ್ರಶ್ನಿಸಿದ ಸಿಎಂ ಸಿದ್ದರಾಮಯ್ಯ

ಬಿಜೆಪಿ ಮತ್ತು ಸಂಘಪರಿವಾರದ ವಿರುದ್ಧ ನಿರಂತರ ಧ್ವನಿ ಎತ್ತುತ್ತಿರುವ ಲೋಕಸಭೆಯ ವಿರೋಧ...

Download Eedina App Android / iOS

X