ಪಂಜಾಬ್ | 1988ರ ನಂತರದ ಭೀಕರ ಪ್ರವಾಹ; 30 ಮಂದಿ ಸಾವು

Date:

Advertisements

1988ರ ನಂತರದಲ್ಲಿ ಪಂಜಾಬ್‌ನಲ್ಲಿ ಮತ್ತೆ ಭೀಕರ ಪ್ರವಾಹ ಕಾಣಿಸಿಕೊಂಡಿದ್ದು ಈವರೆಗೆ 30 ಮಂದಿ ಸಾವನ್ನಪ್ಪಿದ್ದಾರೆ. ಸುಮಾರು 3,54,000ಕ್ಕೂ ಹೆಚ್ಚು ಮಂದಿ ಬಾಧಿತರಾಗಿದ್ದಾರೆ. ಪಂಜಾಬ್‌ನ ಎಲ್ಲಾ 23 ಜಿಲ್ಲೆಗಳ ಮೇಲೆಯೂ ಪ್ರವಾಹ ಪರಿಣಾಮ ಉಂಟಾಗಿದೆ.

ಭೀಕರ ಪ್ರವಾಹಕ್ಕೆ 1,400ಕ್ಕೂ ಅಧಿಕ ಹಳ್ಳಿಗಳು ಮುಳುಗಿ ಹೋಗಿದ್ದು ಸುಮಾರು 3 ಲಕ್ಷ ಎಕರೆ ಕೃಷಿ ಭೂಮಿ ಮುಳುಗಿ ಹೋಗಿದೆ. ಅಧಿಕಾರಿಗಳು ತಗ್ಗು ಪ್ರದೇಶದಲ್ಲಿರುವ ಪರಿಹಾರ ಕೇಂದ್ರಗಳಿಗೆ ಸುಮಾರು 20 ಸಾವಿರ ಮಂದಿಯನ್ನು ಸ್ಥಳಾಂತರಿಸಿದ್ದಾರೆ.

ಇದನ್ನು ಓದಿದ್ದೀರಾ? ಮುಂದಿನ ದಿನಗಳಲ್ಲಿ ಜಗತ್ತಿನಾದ್ಯಂತ ಜಲ ಪ್ರಳಯಗಳೂ ಹೆಚ್ಚಾಗಲಿವೆ ; ನೆಮ್ಮದಿಯ ದಿನಗಳೂ ಮಾಯವಾಗಲಿವೆ

ಪ್ರವಾಹ ಹಿನ್ನೆಲೆ ಪಂಜಾಬ್‌ನಾದ್ಯಂತ ಶಾಲೆ, ಕಾಲೇಜುಗಳನ್ನು ಮುಚ್ಚಲಾಗಿದೆ. ಹಾಗೆಯೇ 1988ರ ನಂತರದ ರಾಜ್ಯದ ಅತ್ಯಂತ ಭೀಕರ ಪ್ರವಾಹ ಇದಾಗಿದೆ ಎಂದು ವಿವರಿಸಲಾಗಿದೆ. ಭೀಕರ ಮಳೆಯಿಂದಾಗಿ ಐದು ದಿನದಲ್ಲೇ ರಾಜ್ಯದಾದ್ಯಂತ ಪ್ರವಾಹ ಸ್ಥಿತಿ ಉಂಟಾಗಿದೆ ಎಂದು ವರದಿಯಾಗಿದೆ.

ಮೊಹಾಲಿ, ಫಿರೋಜ್‌ಪುರ ಮತ್ತು ಕಪುರ್ಥಾಲಾದಂತಹ ಪ್ರದೇಶಗಳಲ್ಲಿ ಹೆದ್ದಾರಿಗಳು, ವಸತಿ ಪ್ರದೇಶಗಳು ನೀರಿನಿಂದ ಮುಳುಗಿದೆ. ಬಿಯಾಸ್ ಮತ್ತು ರಾವಿ ನದಿಗಳು ಉಕ್ಕಿ ಹರಿದಿವೆ. ಕೃಷಿ ಭೂಮಿಗಳೆಲ್ಲಾ ನೀರಿನಿಂದ ತುಂಬಿ ಹೋಗಿವೆ.

ಪಂಜಾಬ್‌ನಲ್ಲಿ 1988ರಲ್ಲಿ ಭೀಕರ ಪ್ರವಾಹ ಉಂಟಾಗಿದ್ದು, ಪಂಜಾಬ್‌ನ 12,989 ಹಳ್ಳಿಗಳ ಪೈಕಿ 9,000 ಹಳ್ಳಿಗಳು ಬಾಧಿತವಾಗಿತ್ತು. ಪಂಜಾಬ್‌ನ ಇತಿಹಾಸದಲ್ಲೇ ಅತಿ ದೊಡ್ಡ ಪ್ರವಾಹ ಇದಾಗಿದ್ದು, 34 ಲಕ್ಷಕ್ಕೂ ಅಧಿಕ ಜನರ ಜೀವನವನ್ನು ಅಸ್ತವ್ಯಸ್ಥಗೊಳಿಸಿತ್ತು. ಸಾವಿರಾರು ಜನರು ಸಾವನ್ನಪ್ಪಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

RSS ಕುರಿತ ₹100 ನಾಣ್ಯ & ಅಂಚೆ ಚೀಟಿ ಬಿಡುಗಡೆ, ಸಂವಿಧಾನಕ್ಕೆ ಎಸಗಿದ ಘೋರ ಅಪಚಾರ: ಸಿಪಿಐ(ಎಂ)

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶತಮಾನೋತ್ಸವ ಸಮಾರಂಭದ ಪ್ರಯುಕ್ತ ಪ್ರಧಾನಿ ನರೇಂದ್ರ...

ಕರೂರ್ ದುರಂತ: 41 ಜನರ ಸಾವಿನ ನಂತರ ಟಿವಿಕೆ ರ‍್ಯಾಲಿ ತಾತ್ಕಾಲಿಕ ಸ್ಥಗಿತ

ತಮಿಳಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ನಾಯಕ ವಿಜಯ್ ಅವರು ಬುಧವಾರ ತಮ್ಮ...

ಕೇಂದ್ರ ಸರ್ಕಾರಿ ಉದ್ಯೋಗಿಗಳಿಗೆ ಶೇ. 3 ರಷ್ಟು ತುಟ್ಟಿಭತ್ಯೆ ಹೆಚ್ಚಳ; ಸಚಿವ ಸಂಪುಟ ಅನುಮೋದನೆ

ಕೇಂದ್ರ ಸಂಪುಟ ಬುಧವಾರ ನಡೆದ ಸಭೆಯಲ್ಲಿ ಕೇಂದ್ರ ಸರ್ಕಾರದ ಉದ್ಯೋಗಿಗಳು ಮತ್ತು...

ಭಾರತದ ಅಗ್ರ ಕೋಟ್ಯಾಧಿಪತಿಗಳಲ್ಲಿ ಮಹಿಳೆಗೆ ಸ್ಥಾನ; ಅತೀ ಶ್ರೀಮಂತ ಮಹಿಳೆ ರೋಶ್ನಿ ಮಲ್ಹೋತ್ರಾ!

ಭಾರತದ ಬಿಲಿಯನೇರ್‌ಗಳ ಇತಿಹಾಸದಲ್ಲಿ ಐತಿಹಾಸಿಕ ಬೆಳವಣಿಗೆಯೊಂದು ನಡೆದಿದೆ. ಇದೇ ಮೊದಲ ಬಾರಿಗೆ...

Download Eedina App Android / iOS

X