ಹಾವೇರಿ | ಯುವಕರಿಗೆ ಪ್ರತಿಭೆಯನ್ನು ಗುರುತಿಸಿಕೊಳ್ಳಲು ದಸರಾ ಕ್ರೀಡಾಕೂಟ ಉತ್ತಮ ವೇದಿಕೆ: ಫಾದರ್ ವಿನ್ಸಂಟ್ ಜೇಸನ್

Date:

Advertisements

“ಒಳ್ಳೆಯದರ ಮೂಲಕ ಕೆಟ್ಟದನ್ನು ನಾಶ ಮಾಡಿದಂತಹ ದಸರಾ ಹಬ್ಬಕ್ಕೆ ಅದರದೆ ಆದ ಇತಿಹಾಸವಿದೆ. ದಸರಾ ಕ್ರೀಡಾಕೂಟದಲ್ಲಿ ಯುವಕರಿಗೆ ತಮ್ಮ ಪ್ರತಿಭೆಯನ್ನು ಗುರುತಿಸಿಕೊಳ್ಳಲು  ಈ ದಸರಾ ಕ್ರೀಡಾಕೂಟ ಉತ್ತಮ ವೇದಿಕೆ ಆಗಿದೆ” ಎಂದು ಲೊಯೋಲ ವಿಕಾಸ ಕೇಂದ್ರದ ನಿರ್ದೇಶಕರು ಫಾದರ್ ವಿನ್ಸಂಟ್ ಜೇಸನ್ ಸಲಹೆ ನೀಡಿದರು.

ಹಾವೇರಿ ಜಿಲ್ಲೆಯ ಹಾನಗಲ್ಲ ಪಟ್ಟಣದಲ್ಲಿ ಲೊಯೋಲ ವಿಕಾಸ ಕೇಂದ್ರ ಸಮಾಜ ಸೇವಾ ಸಂಸ್ಥೆ, ಯುವಸಬಲೀಕರಣ ಕ್ರೀಡಾ ಇಲಾಖೆ, ತಾಲೂಕ ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ 2025-26ನೇ ಸಾಲಿನ ತಾಲೂಕಾ ಮಟ್ಟದ ದಸರಾ ಕ್ರೀಡಾಕೂಟ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

cc537998bb0b46e5b5843a723f8a199b

“ದಸರಾ ಕ್ರೀಡಾಕೂಟ ಭಾಗವಹಿಸಿ ಕ್ರೀಡಾ ಪಟುಗಳು ಇದರ ಸದುಪಯೋಗ ಪಡೆದುಕೊಂಡು, ರಾಜ್ಯಮಟ್ಟದಲ್ಲಿ ಹೆಸರು ಮಾಡಬೇಕು” ಎಂದು ತಿಳಿಸಿದರು.

ದ್ವಜಾರೋಹಣವನ್ನು ನೆರವೆರಿಸಿದ ಪುರಸಭೆಯ ಅದ್ಯಕ್ಷರು ರಾಧಿಕಾ ದೇಶಪಾಂಡೆ ಮಾತನಾಡಿ, “ಕ್ರೀಡೆಯು ಮನುಷ್ಯ ದೈಹಿಕ ಮತ್ತು ಮಾನಸಿಕವಾಗಿ ಆರೋಗ್ಯದಿಂದ ಇರಲು ಸಹಕಾರಿಯಾಗುತ್ತದೆ. ಕ್ರೀಡಾ ಪಟುಗಳು ಶಿಸ್ತು ಸಂಯಮ ಬೆಳಸಿಕೊಳ್ಳಬೇಕು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಗದಗ | ಮೂವರು ಶಿಕ್ಷಕರಿಗೆ ಕಲಾಶಿಸಂ ಪ್ರತಿಷ್ಠಾನದ ಮಕ್ಕಳ ಸ್ನೇಹಿ ಶಿಕ್ಷಕ ಪ್ರಶಸ್ತಿ

ಕಾರ್ಯಕ್ರಮದಲ್ಲಿ ವೇದಿಕೆಯಲ್ಲಿ ಪುರಸಭೆಯ ಉಪಾಧ್ಯಕ್ಷರು ವೀಣಾ ಗುಡಿ, ತಾಲ್ಲೂಕು ಶಿಕ್ಷಣ ಇಲಾಕೆಯ ಅಧಿಕಾರಿ ಬಸವರಾಜ ಸಂಗೂರು, ತಾಲ್ಲೂಕು ಅಧ್ಯಕ್ಷರು ಪ್ರಾಥಾಮಿಕ ಶಾಲಾ  ದೈಹಿಕ ಶಿಕ್ಷಣ ಸಂಸ್ಥೆ ಗಂಗಾಧರ ಪಾಂಚಾಳ, ಪೋಲಿಸ್ ಇಲಾಖೆಯ ಸಿಬ್ಬಂದಿ ಜಗದೀಶ ಮಡಿವಾಳರ, ಯುವ ಮುಖಂಡರು ಇರ್ಫಾನ್ ಮಿಠಾಯಿಗರ್, ತಾಲ್ಲೂಕು ಕ್ರೀಡಾಂಗಣದ ಮೇಲ್ವಿಚಾರಕರು ಸಾಗರ್ ಸರ್ವದೆ, ನಾಗರಾಜ ಬಾರ್ಕಿ ಹಾಗೂ ಇರ್ಫಾನ್ ನಾಗರವಳ್ಳಿ ಪತ್ರಿಕಾ ಮಾದ್ಯಮ ಮಿತ್ರರು ಉಪಸ್ಥಿತರಿದ್ದರು. ಕಾರ್ಯಕ್ರವನ್ನು ಸಂತೋಷ ಅವರು ನಿರೂಪಿಸಿದರು ಫಕ್ಕೀರೇಶ ಗೌಡಳ್ಳಿ ಸ್ವಾಗತಿಸಿದರು, ಪೀರಪ್ಪ ಶಿರ್ಶಿ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಸರಕಾರ ದೇವದಾಸಿ ಮಹಿಳೆಯರ ಕುಟುಂಬ ಸದಸ್ಯರನ್ನು ಗಣತಿ ಪಟ್ಟಿಗೆ ಸೇರಿಸುವ ಕ್ರಮ ಸ್ವಾಗತ

"ಸರಕಾರ ಈಚೆಗೆ ದೌರ್ಜನ್ಯದ ದೇವದಾಸಿ ಪದ್ಧತಿಗೆ ಪರಿಣಾಮಕಾರಿ ಕ್ರಮ ಕೈಗೊಳ್ಳಲು ದೇವದಾಸಿ...

ಗದಗ | ತಹಸೀಲ್ದಾರ ಕಚೇರಿಗಳಲ್ಲಿ ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ ಆರೋಪ

"ಜಿಲ್ಲೆಯ ಎಲ್ಲಾ ತಾಲೂಕ ತಹಶೀಲ್ದಾರ್ ಕಚೇರಿ ಹಾಗೂ ಹೋಬಳಿಗಳಲ್ಲಿ ವೃಧ್ಯಾಪ್ಯ ವೇತನ,...

ಜನಮನ ಗೆದ್ದ ತುಮಕೂರು ದಸರಾ ಉತ್ಸವ : ಡಾ. ಜಿ.ಪರಮೇಶ್ವರ

 ತುಮಕೂರು ದಸರಾ ಉತ್ಸವವು ನಾಡಿನಾದ್ಯಂತ ಜನರ ಮನಸ್ಸನ್ನು ಗೆಲ್ಲುವ ಮೂಲಕ ಐತಿಹಾಸಿಕ...

Download Eedina App Android / iOS

X