ಬಿಹಾರ | ಭೀಕರ ಅಪಘಾತ: ಐವರು ಉದ್ಯಮಿಗಳು ಸಾವು

Date:

Advertisements

ಕಾರು ಟ್ರಕ್‌ಗೆ ಡಿಕ್ಕಿ ಹೊಡೆದು ಐವರು ಉದ್ಯಮಿಗಳು ಸಾವನ್ನಪ್ಪಿರುವ ಘಟನೆ ಬಿಹಾರದ ಪಾರ್ಸಾ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯ ಸುಯಾ ಮೋರ್ ಬಳಿ ನಡೆದಿದೆ. ಗುರುವಾರ ಬೆಳಗಿನ ಜಾವ 12.45ರ ಸುಮಾರಿಗೆ ಪಟನಾ-ಗಯಾ-ದೋಭಿ ನಾಲ್ಕು ಪಥದ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 83ರಲ್ಲಿ ವೇಗವಾಗಿ ಬಂದ ಕಾರು ಟ್ರಕ್‌ಗೆ ಡಿಕ್ಕಿ ಹೊಡೆದಿದೆ.

ಜೋರಾದ ಡಿಕ್ಕಿಯ ಶಬ್ದ ಕೇಳಿದ ಸ್ಥಳೀಯರು ಸ್ಥಳಕ್ಕೆ ಧಾವಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದು ಪೊಲೀಸರು ಗ್ಯಾಸ್ ಕಟ್ಟರ್‌ಗಳು ಮತ್ತು ಕ್ರೇನ್ ಸಹಾಯದಿಂದ ಸುಮಾರು ಎರಡು ಗಂಟೆಗಳು ಪ್ರಯತ್ನ ನಡೆಸಿ ಶವಗಳನ್ನು ಹೊರತೆಗೆದಿದ್ದಾರೆ.

ಇದನ್ನು ಓದಿದ್ದೀರಾ? ಬಿಹಾರ | ಭೀಕರ ಅಪಘಾತ; ಇಬ್ಬರು ಮಕ್ಕಳು ಸೇರಿ ಐವರ ದಾರುಣ ಸಾವು

ಮೃತರನ್ನು ಪಟನಾದ ಕುರ್ಜಿ ಚಶ್ಮಾ ಗಾಲಿಯ ನಿವಾಸಿ ರಾಜೇಶ್ ಕುಮಾರ್ (50), ಪಟನಾದ ಪಟೇಲ್ ನಗರದ ನಿವಾಸಿ ಸಂಜಯ್ ಕುಮಾರ್ ಸಿನ್ಹಾ (55), ಪಟನಾದ ನಿವಾಸಿ ಕಮಲ್ ಕಿಶೋರ್ (38), ಪಟನಾದಲ್ಲಿ ವಾಸಿಸುತ್ತಿದ್ದ ಸಮಷ್ಟಿಪುರ ನಿವಾಸಿ ಪ್ರಕಾಶ್ ಚೌರಾಸಿಯಾ (35) ಮತ್ತು ಮುಜಫರ್‌ಪುರ ನಿವಾಸಿ ಸುನಿಲ್ ಕುಮಾರ್ (38) ಎಂದು ಗುರುತಿಸಲಾಗಿದೆ.

ಮೃತ ಐವರೂ ಪಟನಾ ಮತ್ತು ಹತ್ತಿರದ ಜಿಲ್ಲೆಗಳ ನಿವಾಸಿಗಳಾಗಿದ್ದು ಕೀಟನಾಶಕ ಮತ್ತು ಕೃಷಿ ಉತ್ಪನ್ನಗಳ ವ್ಯವಹಾರದಲ್ಲಿ ತೊಡಗಿದ್ದರು. ಉದ್ಯಮಿಗಳು ಒಂದು ವ್ಯಾಪಾರಕ್ಕಾಗಿ ಫತುಹಾಗೆ ಹೋಗಿದ್ದು ತಡರಾತ್ರಿ ಪಟನಾಕ್ಕೆ ಹಿಂದಿರುತ್ತಿದ್ದರು.

ಕಾರು ಅತಿ ವೇಗದಲ್ಲಿ ಚಲಾಯಿಸಲಾಗುತ್ತಿತ್ತು. ಟ್ರಕ್ ನಿಧಾನವಾಗಿ ಚಲಿಸುತ್ತಿತ್ತು ಅಥವಾ ಸರಿಯಾದ ಸಿಗ್ನಲ್ ಹಾಕದೆ ರಸ್ತೆಬದಿಯಲ್ಲಿ ನಿಲ್ಲಿಸಲಾಗಿತ್ತು. ಕಾರಿನ ಚಾಲಕನಿಗೆ ಬ್ರೇಕ್ ಹಾಕುವಷ್ಟೂ ಸಮಯ ಇರಲಿಲ್ಲ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ ಎಂದು ಪಟನಾ ಪೊಲೀಸರು ಹೇಳಿದ್ದಾರೆ.

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಪಟನಾದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ (PMCH) ಕಳುಹಿಸಲಾಗಿದೆ. ಮೊಬೈಲ್ ಫೋನ್‌ಗಳಿಗೆ ಬಂದ ಕರೆಗಳ ಮೂಲಕ ಪೊಲೀಸರು ಕುಟುಂಬಗಳಿಗೆ ಮಾಹಿತಿ ನೀಡಿದ್ದಾರೆ.

ಟ್ರಕ್ ಚಾಲಕ ಪರಾರಿಯಾಗಿದ್ದು ಆತನ ವಿರುದ್ಧ ಪರ್ಸಾ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರೂರ್ ದುರಂತ: 41 ಜನರ ಸಾವಿನ ನಂತರ ಟಿವಿಕೆ ರ‍್ಯಾಲಿ ತಾತ್ಕಾಲಿಕ ಸ್ಥಗಿತ

ತಮಿಳಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ನಾಯಕ ವಿಜಯ್ ಅವರು ಬುಧವಾರ ತಮ್ಮ...

ಕೇಂದ್ರ ಸರ್ಕಾರಿ ಉದ್ಯೋಗಿಗಳಿಗೆ ಶೇ. 3 ರಷ್ಟು ತುಟ್ಟಿಭತ್ಯೆ ಹೆಚ್ಚಳ; ಸಚಿವ ಸಂಪುಟ ಅನುಮೋದನೆ

ಕೇಂದ್ರ ಸಂಪುಟ ಬುಧವಾರ ನಡೆದ ಸಭೆಯಲ್ಲಿ ಕೇಂದ್ರ ಸರ್ಕಾರದ ಉದ್ಯೋಗಿಗಳು ಮತ್ತು...

ಭಾರತದ ಅಗ್ರ ಕೋಟ್ಯಾಧಿಪತಿಗಳಲ್ಲಿ ಮಹಿಳೆಗೆ ಸ್ಥಾನ; ಅತೀ ಶ್ರೀಮಂತ ಮಹಿಳೆ ರೋಶ್ನಿ ಮಲ್ಹೋತ್ರಾ!

ಭಾರತದ ಬಿಲಿಯನೇರ್‌ಗಳ ಇತಿಹಾಸದಲ್ಲಿ ಐತಿಹಾಸಿಕ ಬೆಳವಣಿಗೆಯೊಂದು ನಡೆದಿದೆ. ಇದೇ ಮೊದಲ ಬಾರಿಗೆ...

NCRB report-2023 | ಹಲವು ಅಪರಾಧ ಕೃತ್ಯಗಳಲ್ಲಿ ಕರ್ನಾಟಕಕ್ಕೆ ಕುಖ್ಯಾತಿ

ಭಾರತದ ವಿವಿಧ ರಾಜ್ಯಗಳಲ್ಲಿ 2023ರಲ್ಲಿ ನಾನಾ ರೀತಿಯಲ್ಲಿ ನಡೆದಿರುವ ದಾಖಲಿತ ಅಪರಾಧ...

Download Eedina App Android / iOS

X