ಕೋಲಾರ | ಹುತ್ತೂರು ವ್ಯಾಪ್ತಿಯಲ್ಲಿ ಅರಣ್ಯ–ಕಂದಾಯ ಜಂಟಿ ಸರ್ವೆ; ರೈತರಲ್ಲಿ ಅನುಮಾನ, ಆತಂಕ

Date:

Advertisements

ಕೋಲಾರ ತಾಲೂಕಿನ ಹುತ್ತೂರು ಹೋಬಳಿಯ ವ್ಯಾಪ್ತಿಯಲ್ಲಿ ಅರಣ್ಯ ಮತ್ತು ಕಂದಾಯ ಇಲಾಖೆಗಳ ವತಿಯಿಂದ ಜಂಟಿ ಸರ್ವೆ ಕಾರ್ಯ ನಡೆಯುತ್ತಿದೆ. ಆದರೆ ಸರಿಯಾಗಿ ನಡೆಯುತ್ತಿದೆಯೇ ಎಂಬ ಅನುಮಾನ ಈ ಭಾಗದ ರೈತರಿಗೆ ಕಾಡುತ್ತಿದೆ ಎಂದು ರೈತ ಮುಖಂಡ ಶ್ರೀನಿವಾಸನ್ ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಅರಣ್ಯ ಇಲಾಖೆಯ ಹತ್ತಿರವಿರುವ ದಾಖಲೆ ‌ಪತ್ರಗಳ ಬಗ್ಗೆಯೇ ಅನುಮಾನವಿದೆ. ಕಂದಾಯ ಇಲಾಖೆಯಲ್ಲಿ ಪುರಾವೆಗಳೇ ಇಲ್ಲ. ಆದರೆ, ರೈತರ ಬಳಿ ಸೂಕ್ತವಾದ ದಾಖಲೆಗಳು ಇದ್ದರೂ ವಿನಾಕಾರಣ ಅರಣ್ಯ ಇಲಾಖೆ, ಕಂದಾಯ ಇಲಾಖೆ ಹಾಗೂ ಪೊಲೀಸ್ ಇಲಾಖೆ ತೊಂದರೆ ಕೊಡುತ್ತಿವೆ. ಹೋಬಳಿಯ ಶಿಲ್ಲಂಗೆರೆಯಿಂದ ಅಬ್ಬಣಿಯವರೆಗೆ ಮೂಲ ಅರಣ್ಯ ಎಂದು ಹೇಳುತ್ತಿದ್ದು, ಕಂದಾಯ, ಸರ್ವೆ, ಪೊಲೀಸ್ ಇಲಾಖೆ ರೈತರನ್ನು ಯಾಮಾರಿಸುತ್ತಿವೆ. ಆರ್ ಟಿಸಿಯಲ್ಲಿ ಗೋಮಾಳ‌ ಎಂದಿದೆ ಅದರಿಂದ ರೈತರಿಗೆ ತೊಂದರೆ ಕೊಟ್ಟಿದ್ದರಿಂದಾಗಿ ಅರಣ್ಯ ಇಲಾಖೆಯ ಸರಿನಾ ಸಿಕ್ಕಲಿಗರ್, ಮಹೇಶ್, ಪುಷ್ಪಲತಾ ಅವರ ಮೇಲೆ ದೌರ್ಜನ್ಯ ಕೇಸ್ ಹಾಕಿದ್ದೇವೆ. ಈ ಭಾಗದಲ್ಲಿ ಹಿಡುವಳಿ ಜಮೀನು ಇದ್ದು ಅರಣ್ಯ ಇಲಾಖೆ ನಕಲಿ ನಕ್ಷೆ ಮಾಡಿಕೊಂಡಿದ್ದಾರೆ ಮಾತು ಎತ್ತಿದರೆ ರಿಯಲ್ ಎಸ್ಟೇಟ್ ಎನ್ನುತ್ತಾರೆ ರೈತರನ್ನು ಅವಮಾನ ಮಾಡತ್ತಾರೆ” ಎಂದು ಆರೋಪಿಸಿದರು.

ಇದನ್ನೂ ಓದಿ: ಕೋಲಾರ | ಹೈನುಗಾರಿಕೆ ಗ್ರಾಮೀಣ ಜನರ ಬದುಕಿಗೆ ಆಸರೆ: ಚೆಲುವನಹಳ್ಳಿ ನಾಗರಾಜ್

ಅರಣ್ಯ ಇಲಾಖೆಯ 1931ರ ನೋಟಿಫಿಕೇಷನ್ ದಾಖಲೆ ಸರಿ ಇಲ್ಲ. ಇದು ನಕಲಿ ಎಂಬ ಅನುಮಾನ ಇದೆ. ಈ ಬಗ್ಗೆ ತನಿಖೆ ‌ನಡೆಸಬೇಕು. ರೈತರ ಮೇಲೆ ದಬ್ಬಾಳಿಕೆ ‌ಮಾಡಬಾರದು. ಅರಣ್ಯ ಇಲಾಖೆ‌ ಜಾಗಕ್ಕೆ ನಂಬರ್ ಕೊಟ್ಟು ದುರಸ್ತಿ ಮಾಡಬೇಕು ಜಂಟಿ ಸರ್ವೆಯಲ್ಲಿ ಮೊದಲು ಅರಣ್ಯ ಜಮೀನು ಎಷ್ಟಿದೆ ಎಂಬುದನ್ನು ಸ್ಕೆಚ್‌ ಮಾಡಿ, ನಂಬರ್ ಕೊಟ್ಟು ದುರಸ್ತಿ ಮಾಡಬೇಕು” ಎಂದು ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ರೈತರಾದ ಹರಟಿ ಪ್ರಕಾಶ್, ಶಿಲ್ಲಂಗೆರೆ ಮಂಜುನಾಥ್, ಅರವಿಂದ್, ವೆಂಕಟರಣಪ್ಪ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಪಾಲಿಕೆಗೆ 19 ಗ್ರಾಮಗಳ ಸೇರ್ಪಡೆಗೆ ಸಿದ್ಧತೆ

ಶಿವಮೊಗ್ಗ, ನಿರೀಕ್ಷೆಯಂತೆಯೇ ತುಮಕೂರು ಮತ್ತು ಶಿವಮೊಗ್ಗ ನಗರ ಪಾಲಿಕೆಗಳ ವ್ಯಾಪ್ತಿ ವಿಸ್ತರಣೆಗೆ...

ಶಿವಮೊಗ್ಗ | ಅಂಬೇಡ್ಕರ್ ಓದು ; ಭಾರತವನ್ನು ಅರಿಯುವ ದಾರಿ : ಕೋಟಿಗಾನಹಳ್ಳಿ ರಾಮಯ್ಯ ಅಭಿಪ್ರಾಯ

ಶಿವಮೊಗ್ಗ ಮಾನವತಾವಾದಿ ಅಂಬೇಡ್ಕರ್ ಅವರನ್ನು ಓದುವುದು ಎಂದರೆ ಭಾರತವನ್ನು ನೈಜವಾಗಿ ಅರಿಯುವುದು,...

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

Download Eedina App Android / iOS

X