ಒಡಿಶಾ | ದನ ಕೊಂದ ಆರೋಪ: ದಲಿತ ಯುವಕನಿಗೆ ಥಳಿಸಿ ಹತ್ಯೆ

Date:

Advertisements

ದನ ಕೊಂದ ಆರೋಪದ ಮೇಲೆ 35 ವರ್ಷದ ದಲಿತ ಯುವಕನಿಗೆ ಥಳಿಸಿ ಹತ್ಯೆ ಮಾಡಿರುವ ಘಟನೆ ಒಡಿಶಾದ ದಿಯೋಗಢ ಜಿಲ್ಲೆಯ ಕುಂಡೇಜುರಿ ಗ್ರಾಮದಲ್ಲಿ ನಡೆದಿದೆ.

ಮೃತ ಯುವಕನನ್ನು ಕೌನ್ಸಿಧಿಪ ಗ್ರಾಮದ ಕಿಶೋರ್ ಚಮರ್ ಎಂದು ಗುರುತಿಸಲಾಗಿದ್ದು, ದನಗಳ ಚರ್ಮ ಸುಲಿಯುವ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಈ ಹತ್ಯೆಗೆ ಸಂಬಂಧಿಸಿದಂತೆ ಆರು ಜನರನ್ನು ಬಂಧಿಸಲಾಗಿದೆ. ಹಲ್ಲೆಗೊಳಗಾದ ಕಿಶೋರ್ ಸಹೋದ್ಯೋಗಿ ಗೌತಮ್ ನಾಯಕ್ ಚಿಕಿತ್ಸೆ ನೀಡಲಾಗಿದೆ.

ಇದನ್ನು ಓದಿದ್ದೀರಾ? ಒಡಿಶಾ | ಅಲೆಮಾರಿ ಕುಟುಂಬದ ಐವರ ಬರ್ಬರ ಹತ್ಯೆ; ಐವರ ಅಪಹರಣ

ಚಮರ್ ಮತ್ತು ನಾಯಕ್ ದನವನ್ನು ಕತ್ತರಿಸುತ್ತಿದ್ದಾಗ ಗುಂಪೊಂದು ಸ್ಥಳಕ್ಕೆ ಧಾವಿಸಿದೆ. ಸ್ವಾಭಾವಿಕವಾಗಿ ಸತ್ತ ದನದ ಚರ್ಮ ಸುಲಿಯುತ್ತಿದ್ದರಷ್ಟೇ ಎಂದು ಇಬ್ಬರು ವಿವರಿಸಿದರೂ, ಗುಂಪು ದನ ಕೊಂದ ಆರೋಪ ಮಾಡಿದೆ.

ಎರಡು ತಿಂಗಳ ಹಿಂದೆ ಒಡಿಶಾದ ಗಂಜಾಂ ಜಿಲ್ಲೆಯಲ್ಲಿ ನಡೆದ ಇದೇ ರೀತಿಯ ಪ್ರಕರಣ ನಡೆದಿದೆ. ಬಾಬುಲಾ ನಾಯಕ್ (54) ಮತ್ತು ಬುಲು ನಾಯಕ್ (42) ಎಂಬ ಇಬ್ಬರು ದಲಿತರನ್ನು ದನಗಳನ್ನು ಕಳ್ಳಸಾಗಣೆ ಮಾಡುತ್ತಿದ್ದಾರೆಂದು ಆರೋಪಿಸಿ ಗುಂಪೊಂದು ಹಲ್ಲೆ ನಡೆಸಿ ಅವಮಾನಿಸಿದೆ. ದಾಳಿ ಮಾಡಿದವರು 30 ಸಾವಿರ ರೂಪಾಯಿ ಹಣ ಕೇಳಿದ್ದು, ಹಣ ನೀಡಲು ನಿರಾಕರಿಸಿದಾಗ ಗುಂಪು ಥಳಿಸಿದೆ, ಹುಲ್ಲು ತಿನ್ನಿಸಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೇಂದ್ರ ಸರ್ಕಾರಿ ಉದ್ಯೋಗಿಗಳಿಗೆ ಶೇ. 3 ರಷ್ಟು ತುಟ್ಟಿಭತ್ಯೆ ಹೆಚ್ಚಳ; ಸಚಿವ ಸಂಪುಟ ಅನುಮೋದನೆ

ಕೇಂದ್ರ ಸಂಪುಟ ಬುಧವಾರ ನಡೆದ ಸಭೆಯಲ್ಲಿ ಕೇಂದ್ರ ಸರ್ಕಾರದ ಉದ್ಯೋಗಿಗಳು ಮತ್ತು...

ಭಾರತದ ಅಗ್ರ ಕೋಟ್ಯಾಧಿಪತಿಗಳಲ್ಲಿ ಮಹಿಳೆಗೆ ಸ್ಥಾನ; ಅತೀ ಶ್ರೀಮಂತ ಮಹಿಳೆ ರೋಶ್ನಿ ಮಲ್ಹೋತ್ರಾ!

ಭಾರತದ ಬಿಲಿಯನೇರ್‌ಗಳ ಇತಿಹಾಸದಲ್ಲಿ ಐತಿಹಾಸಿಕ ಬೆಳವಣಿಗೆಯೊಂದು ನಡೆದಿದೆ. ಇದೇ ಮೊದಲ ಬಾರಿಗೆ...

NCRB report-2023 | ಹಲವು ಅಪರಾಧ ಕೃತ್ಯಗಳಲ್ಲಿ ಕರ್ನಾಟಕಕ್ಕೆ ಕುಖ್ಯಾತಿ

ಭಾರತದ ವಿವಿಧ ರಾಜ್ಯಗಳಲ್ಲಿ 2023ರಲ್ಲಿ ನಾನಾ ರೀತಿಯಲ್ಲಿ ನಡೆದಿರುವ ದಾಖಲಿತ ಅಪರಾಧ...

ಹಬ್ಬದ ದಿನವೇ ಸಾರ್ವಜನಿಕರಿಗೆ ದರ ಏರಿಕೆಯ ಶಾಕ್‌; ಎಲ್‌ಪಿಜಿ ಸಿಲಿಂಡರ್ ದರ ಏರಿಕೆ

ಆಯುಧ ಪೂಜೆ ಹಬ್ಬದ ದಿನವೇ ತೈಲ ಮಾರುಕಟ್ಟೆ ಕಂಪನಿಗಳು ಗ್ರಾಹಕರಿಗೆ ದರ...

Download Eedina App Android / iOS

X