ಕುಮಾರಸ್ವಾಮಿ ಆರೋಪಗಳನ್ನು ಗಂಭೀರವಾಗಿ ಪರಿಗಣಿಸಬೇಕಿಲ್ಲ: ರಾಮಲಿಂಗಾರೆಡ್ಡಿ

Date:

Advertisements
  • ಕುಮಾರಸ್ವಾಮಿ ನಮ್ಮನ್ನು ಎಂದಾದರೂ ಹೊಗಳಲು ಸಾಧ್ಯವೇ?
  • ‘ಬಿಜೆಪಿಯವರು ಮೊದಲು ಮನೆ ದೇವರುಗಳ ಮೇಲೆ ಆಣೆ ಮಾಡಲಿ’

ವಿರೋಧ ಪಕ್ಷದಲ್ಲಿರುವ ಎಚ್‌ ಡಿ ಕುಮಾರಸ್ವಾಮಿ ನಮ್ಮನ್ನು ಎಂದಾದರೂ ಹೊಗಳಲು ಸಾಧ್ಯವೇ? ಅವರ ಆರೋಪಗಳನ್ನು ಗಂಭೀರವಾಗಿ ಪರಿಗಣಿಸಬೇಕಿಲ್ಲ. ನಮ್ಮ ಸರ್ಕಾರ ಟೇಕಾಫ್ ಆಗಿ ಸಾವಿರಾರು ಕಿಲೋಮೀಟರ್ ಮುಂದೆ ಹೋಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

ರಾಮನಗರದಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಟೀಕೆ ಮಾಡುವವರು ಮಾಡಲಿ. ವಿರೋಧ ಪಕ್ಷದವರ ಕೆಲಸವೇ ಅದು” ಎಂದರು.

“ಭ್ರಷ್ಟಾಚಾರ ಆರೋಪ ಕುರಿತು ಮನೆ ದೇವರ ಮೇಲೆ ಆಣೆ ಮಾಡಲಿ ಎನ್ನುವ ಬಿಜೆಪಿಯವರು, ತಮ್ಮ ಕಾಲದಲ್ಲಿ ಭ್ರಷ್ಟಾಚಾರವೇ ನಡೆದಿಲ್ಲ ಎಂದು ಮೊದಲು ಮನೆ ದೇವರುಗಳ ಮೇಲೆ ಆಣೆ ಮಾಡಿ ತೋರಿಸಲಿ. ಬಿಜೆಪಿಯೊಳಗೆ ಶಾಸಕ ಸಿ ಎನ್ ಅಶ್ವತ್ಥನಾರಾಯಣ ಮಾತಿಗೆ ಕಿಮ್ಮತ್ತಿಲ್ಲ. ಹೀಗಿರುವಾಗ ಉಳಿದವರು ಕಿಮ್ಮತ್ತು ಕೊಡುತ್ತಾರಾ?” ಎಂದು ಕುಟುಕಿದರು.

Advertisements

ಮೇಕೆದಾಟು ಯೋಜನೆ

“ಮೇಕೆದಾಟು ಯೋಜನೆಯಿಂದ ಯಾರಿಗೂ ಸಮಸ್ಯೆ ಇಲ್ಲ. ಯಾವುದೇ ಸರ್ಕಾರವಿದ್ದರೂ ತಮಿಳುನಾಡು ಕ್ಯಾತೆ ತೆಗೆಯುತ್ತಲೇ ಇರುತ್ತದೆ. ಈಗ ಅವರು ಕೋರ್ಟ್ ಮೋರೆ ಹೋಗಿದ್ದಾರೆ. ನಾವು ಸಹ ಕೋರ್ಟ್ ಮೂಲಕವೇ ಹೋರಾಟ ಮಾಡುತ್ತಿದ್ದೇವೆ” ಎಂದು ತಿಳಿಸಿದರು.

ಮುನಿಯಪ್ಪ ಅವರದು ವೈಯಕ್ತಿಕ ಅಭಿಪ್ರಾಯ

“ಎರಡು ವರ್ಷದ ಬಳಿಕ ಹಿರಿಯ ಸಚಿವರು ಕಿರಿಯರಿಗೆ ಅವಕಾಶ ನೀಡಬೇಕು ಎಂಬುದು ಸಚಿವ ಮುನಿಯಪ್ಪ ಅವರ ವೈಯಕ್ತಿಕ ಅಭಿಪ್ರಾಯ. ಹೊಸಬರಿಗೆ ಅವಕಾಶ ನೀಡುವ ಕುರಿತು ಹೈಕಮಾಂಡ್ ನಿರ್ಧಾರ ಕೈಗೊಳ್ಳುತ್ತದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X